Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 28 ಆಗಸ್ಟ್ 2019 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಂಧು ವರ್ಗದವರ ಮೇಲೆ ಅಸಮಾಧಾನ ಮೂಡಲಿದೆ. ಮನೋಕಾಮನೆ ಪೂರೈಸದ ತಪ್ಪಿಗೆ ಸಂಗಾತಿಯ  ಕೋಪಕ್ಕೆ ಗುರಿಯಾಗುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ದೃಢ ನಿರ್ಧಾರಗಳಿಂದ ಮುನ್ನಡೆಯಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಷಭ: ಆದಾಯವಿದ್ದಷ್ಟೇ ಖರ್ಚು ವೆಚ್ಚಗಳ ಬಗ್ಗೆ ಗಮನವಿರಲಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ರಾಜಕೀಯ ರಂಗದಲ್ಲಿ ಉನ್ನತ ಸ್ಥಾನ ಮಾನ ಲಭ‍್ಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ವಂಚನೆಗೊಳಗಾದಂತೆ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ.

ಕರ್ಕಟಕ: ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಅಂದುಕೊಂಡ ಕಾರ್ಯ ನೆರವೇರಿಸುವಿರಿ. ದೂರ ಪ್ರಯಾಣ ಮಾಡಬೇಕಾಗಿ ಬರುತ್ತದೆ. ಆದರೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಮುನ್ನಡೆಯಿರಲಿದೆ. ಗೃಹೋಪಯೋಗಿ ವಸ್ತುಗಳಿಗೆ ಖರ್ಚುಗಳಾಗಲಿವೆ.

ಸಿಂಹ: ಸ್ವ ಉದ್ಯೋಗಿಗಳಿಗೆ ನಿವ್ವಳ ಲಾಭ ಸಿಗಲಿದೆ. ನಿಮ್ಮ ಸ್ವ ಬುದ್ಧಿಮತ್ತೆಯಿಂದ ಮುನ್ನಡೆದರೆ ನಿರೀಕ್ಷಿತ ಯಶಸ್ಸು ಸಾಧ‍್ಯ. ಅತಿಯಾದ ಚಿಂತೆಗಳಿಂದ ಮಾನಸಿಕ ಹಿಂಸೆಯಾಗುವುದು. ಕಲಾ ಕ್ಷೇತ್ರದಲ್ಲಿರುವವರಿಗೆ ಉನ್ನತ ಸಾಧನೆಗೆ ಅವಕಾಶವಿದೆ.

ಕನ್ಯಾ: ಕುಟುಂಬ ಸದಸ್ಯರ ನಡುವೆ ಪರಸ್ಪರ ಸಹಕಾರವಿರುವುದರಿಂದ ನಿರೀಕ್ಷಿತ ಕೆಲಸಗಳನ್ನು ಸುಗಮವಾಗಿ ನಡೆಸುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಆರೋಗ್ಯ ಸ್ಥಿತಿ ಹದಗೆಡಬಹುದು. ಅಧಿಕ ಖರ್ಚುಗಳಾಗುವ ಸಾಧ್ಯತೆಯಿದೆ.

ತುಲಾ: ಗೃಹ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನದಿಂದ ಸಂತಸವಾಗುವುದು. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಉದ್ಯೋಗದಲ್ಲಿ ಮುನ್ನಡೆಯಿದೆ.

ವೃಶ್ಚಿಕ: ಹಣಕಾಸಿನ ವ್ಯವಹಾರದಲ್ಲಿ ಅನಗತ್ಯವಾಗಿ ತೊಂದರೆಗೆ ಸಿಲುಕಿಕೊಳ‍್ಳುವಿರಿ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ವಂಚನೆಗೊಳಗಾಗುವಿರಿ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಕೃಷಿ ಕ್ಷೇತ್ರದಲ್ಲಿರುವರಿಗೆ ಮುನ್ನಡೆಯಿದೆ. ಕಿರು ಸಂಚಾರ ಯೋಗವಿದೆ.

ಧನು: ಹಿರಿಯರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಬಡ್ತಿ ಸಿಗದೇ ನಿರಾಶೆಯಾಗಬಹುದು. ಆರೋಗ್ಯದ ಮೇಲೆ ಕಾಳಜಿವಹಿಸಿ. ಕಾರ್ಯಕ್ಷೇತ್ರದಲ್ಲಿ ಒಂದು ರೀತಿಯ ನಿರಾಸೆ ಕಾಡಬಹುದು.

ಮಕರ: ಅನಿರೀಕ್ಷಿತವಾಗಿ ಕೆಲಸ ಕಾರ್ಯಗಳು ಬರಬಹುದು. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಎಷ್ಟೇ ಕಷ್ಟವಾದರೂ ಇಂದು ನೀವು ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಡುತ್ತೀರಿ. ನಿಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳದಂತೆ ಎಚ್ಚರಿಕೆ ವಹಿಸಿ.

ಕುಂಭ: ಆರ್ಥಿಕವಾಗಿ ಚೇತರಿಕೆ ಕಂಡಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಧನವ್ಯಯವಾದರೂ  ಅಂದುಕೊಂಡ ಕೆಲಸಗಳು ನೆರವೇರಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಮೀನ: ಕೆಲವೊಂದು ವಿಚಾರದಲ್ಲಿ ಸಂಗಾತಿಗೆ ನಿಮ್ಮ ನಿರ್ಧಾರಗಳು ಪಥ್ಯವಾಗದೇ ಇರಬಹುದು. ಮನೆಯಲ್ಲಿ ಒಂದು ರೀತಿಯ  ಅಶಾಂತಿಯ ವಾತಾವರಣವಿರಲಿದೆ. ಆರ್ಥಿಕವಾಗಿ ಚೇತರಿಕೆ ಇರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶಗಳಿದೆ. ಬಳಸಿಕೊಳ್ಳುವುದರಲ್ಲಿ ಜಾಣತನವಿರಬೇಕು ಅಷ್ಟೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ರಾಶಿಗನುಗುಣವಾಗಿ ನೀವು ಯಾವ ಗಿಡಗಳನ್ನು ನೆಟ್ಟರೆ ಒಳ್ಳೆಯದು ಗೊತ್ತಾ?