Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 30 ಆಗಸ್ಟ್ 2019 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಅಭಿವೃದ್ಧಿಯ ವಾತಾವರಣವಿರಲಿದೆ. ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ. ಸಂಸಾರದಲ್ಲಿ ಸಂಗಾತಿಯ ಜತೆ ಅಸಮಾಧಾನಗಳಿಂದ ಶಾಂತಿ ಭಂಗವಾಗಲಿದೆ. ಆದರೂ ಕೌಟುಂಬಿಕ ಜವಾಬ್ಧಾರಿಗಳನ್ನು ನಿಭಾಯಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ವೃಷಭ: ಆರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿವಹಿಸುವುದು ಮುಖ್ಯ. ಸಣ್ಣದಾಗಿ ತೋರಿಬರುವ ಸಮಸ್ಯೆಗಳ ಬಗ್ಗೆ ಅಸಡ್ಡೆ ಮಾಡಿದರೆ ಮುಂದೆ ಅದೇ ದೊಡ್ಡ ತೊಂದರೆಯಾದೀತು. ಎಚ್ಚರಿಕೆಯಿರಲಿ. ಕಾರ್ಯಕ್ಷೇತ್ರದಲ್ಲಿ ಸುಧಾರಣೆ ತೋರಿಬಂದೀತು.

ಮಿಥುನ: ಅನವಶ್ಯಕವಾಗಿ ದುಡುಕು ಮಾತನಾಡಿ ಪ್ರೀತಿ ಪಾತ್ರರ ನಿಷ್ಠುರಕ್ಕೆ ಕಾರಣರಾಗುವಿರಿ. ಋಣಾತ್ಮಕ ಚಿಂತನಗಳನ್ನು ದೂರ ಮಾಡಿದರೆ ನೆಮ್ಮದಿಯಾದೀತು. ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು.

ಕರ್ಕಟಕ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡುವುದು. ಏನೋ ಕೆಡುಕಾಗಬಹುದೆಂಬ ಆತಂಕ ಕಾಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಮನಸ್ಸಿಗೆ ನೆಮ್ಮದಿ ಸಿಗುವುದು. ಕುಟುಂಬ ಸದಸ್ಯರ ಆರೋಗ್ಯ ಹದತಪ್ಪುವುದು. ಕಾಳಜಿ ವಹಿಸುವುದು ಮುಖ್ಯ.

ಸಿಂಹ: ಮನಸ್ಸಿಗೆ ಶಾಂತಿ ಮತ್ತು ಸಮಾಧಾನ ಸಿಗುವ ಕೆಲಸ ಮಾಡುವುದು ಒಳಿತು. ಬೇಡದ ವ್ಯವಹಾರಗಳಿಂದ ದೂರವಿರುವುದೇ ಉತ್ತಮ. ದೈವಾನುಕೂಲದಿಂದ ಇಂದು ಅಂದುಕೊಂಡ ಕಾರ್ಯ ನೆರವೇರವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ವ್ಯಾಪಾರ ವ್ಯವಹಾರದಲ್ಲಿ ಅಡ್ಡಿ ಆತಂಕಗಳು ಎದುರಾಗಬಹುದು. ಆದರೆ ಎದೆಗುಂದದೇ ಮುನ್ನಡೆದರೆ ಯಶಸ್ಸು ಸಾಧ್ಯ. ಕೌಟುಂಬಿಕವಾಗಿ ಪತ್ನಿ ಮಕ್ಕಳೊಂದಿಗೆ ಸಂತಸದ ಸಮಯ ಕಳೆಯುವಿರಿ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇರುತ್ತದೆ. ಆದರೆ ಚಿಂತೆ ಮಾಡಬೇಕಾಗಿಲ್ಲ.

ತುಲಾ: ನಾನಾ ಮೂಲಗಳಿಂದ ಧನಾಗಮನವಾಗಲಿದ್ದು, ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಮನೆಯಲ್ಲಿ ಹಬ್ಬದ ವಾತಾವರಣವಿರಲಿದೆ. ಅನಿರೀಕ್ಷಿತ ಬಂಧು ಮಿತ್ರರ ಆಗಮನ ಸಂತಸ ಹೆಚ್ಚಿಸುವುದು. ಆದರೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರಾದರೂ ಮಾನಸಿಕವಾಗಿ ಗಟ್ಟಿಯಾಗಿರುವ ಸಮಯವಿದು. ಕೃಷಿಕರಿಗೆ ತಮ್ಮ ಕ್ಷೇತ್ರದಲ್ಲಿ ಕೈ ಹಿಡಿದ ಕಾರ್ಯಗಳು ಫಲಕೊಡಲಿವೆ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿಬರುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಕೆಳ ಹಂತದ ನೌಕರರಿಗೆ ಮೇಲ್ವರ್ಗದ ಅಧಿಕಾರಿಗಳಿಗೆ ಕಿರಿ ಕಿರಿ ತಪ್ಪಿದ್ದಲ್ಲ. ಸಹೋದರ ಸಂಬಂಧಿಗಳಲ್ಲಿ ವಿರಸ ಮೂಡಬಹುದು. ಮಾತಿನ ಮೇಲೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಮನೆ, ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಆರ್ಥಿಕವಾಗಿ ಸಾಕಷ್ಟು ಧನಾಗಮನವಾಗಲಿದೆ, ಆದರೆ ಖರ್ಚಿನ ಬಗ್ಗೆ ಹಿಡಿತವಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ತಯಾರಿ ನಡೆಸುವಿರಿ.

ಕುಂಭ: ಆರೋಗ್ಯದಲ್ಲಿ ಸುಧಾರಣೆ ತೋರಿಬರುವುದು. ಚಿಂತೆ ಬೇಕಾಗಿಲ್ಲ. ಹಳೇ ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡುವುದು. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಪಾಲು ಬಂಡವಾಳ ಹೂಡಿಕೆಯಲ್ಲಿ ಪ್ರಗತಿಯಿದ್ದರೂ, ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಆರ್ಥಿವಕಾಗಿ ಎಷ್ಟೇ ಗಳಿಕೆ ಮಾಡಿದರೂ ಮಾನಸಿಕವಾಗಿ ಏನೋ ಒಂದು ರೀತಿಯ ಬೇಸರ ಕಾಡಲಿದೆ. ಸಂಗಾತಿಯೊಂದಿಗೆ ಮನಸ್ತಾಪವಾಗುವುದು. ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವಿರಿ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಚಿನ್ನಾಭರಣ ಕಳ್ಳತನವಾದರೆ ಏನರ್ಥ ಗೊತ್ತಾ?