Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 30 ಆಗಸ್ಟ್ 2019 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಅಭಿವೃದ್ಧಿಯ ವಾತಾವರಣವಿರಲಿದೆ. ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ. ಸಂಸಾರದಲ್ಲಿ ಸಂಗಾತಿಯ ಜತೆ ಅಸಮಾಧಾನಗಳಿಂದ ಶಾಂತಿ ಭಂಗವಾಗಲಿದೆ. ಆದರೂ ಕೌಟುಂಬಿಕ ಜವಾಬ್ಧಾರಿಗಳನ್ನು ನಿಭಾಯಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ವೃಷಭ: ಆರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿವಹಿಸುವುದು ಮುಖ್ಯ. ಸಣ್ಣದಾಗಿ ತೋರಿಬರುವ ಸಮಸ್ಯೆಗಳ ಬಗ್ಗೆ ಅಸಡ್ಡೆ ಮಾಡಿದರೆ ಮುಂದೆ ಅದೇ ದೊಡ್ಡ ತೊಂದರೆಯಾದೀತು. ಎಚ್ಚರಿಕೆಯಿರಲಿ. ಕಾರ್ಯಕ್ಷೇತ್ರದಲ್ಲಿ ಸುಧಾರಣೆ ತೋರಿಬಂದೀತು.

ಮಿಥುನ: ಅನವಶ್ಯಕವಾಗಿ ದುಡುಕು ಮಾತನಾಡಿ ಪ್ರೀತಿ ಪಾತ್ರರ ನಿಷ್ಠುರಕ್ಕೆ ಕಾರಣರಾಗುವಿರಿ. ಋಣಾತ್ಮಕ ಚಿಂತನಗಳನ್ನು ದೂರ ಮಾಡಿದರೆ ನೆಮ್ಮದಿಯಾದೀತು. ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು.

ಕರ್ಕಟಕ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡುವುದು. ಏನೋ ಕೆಡುಕಾಗಬಹುದೆಂಬ ಆತಂಕ ಕಾಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಮನಸ್ಸಿಗೆ ನೆಮ್ಮದಿ ಸಿಗುವುದು. ಕುಟುಂಬ ಸದಸ್ಯರ ಆರೋಗ್ಯ ಹದತಪ್ಪುವುದು. ಕಾಳಜಿ ವಹಿಸುವುದು ಮುಖ್ಯ.

ಸಿಂಹ: ಮನಸ್ಸಿಗೆ ಶಾಂತಿ ಮತ್ತು ಸಮಾಧಾನ ಸಿಗುವ ಕೆಲಸ ಮಾಡುವುದು ಒಳಿತು. ಬೇಡದ ವ್ಯವಹಾರಗಳಿಂದ ದೂರವಿರುವುದೇ ಉತ್ತಮ. ದೈವಾನುಕೂಲದಿಂದ ಇಂದು ಅಂದುಕೊಂಡ ಕಾರ್ಯ ನೆರವೇರವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ವ್ಯಾಪಾರ ವ್ಯವಹಾರದಲ್ಲಿ ಅಡ್ಡಿ ಆತಂಕಗಳು ಎದುರಾಗಬಹುದು. ಆದರೆ ಎದೆಗುಂದದೇ ಮುನ್ನಡೆದರೆ ಯಶಸ್ಸು ಸಾಧ್ಯ. ಕೌಟುಂಬಿಕವಾಗಿ ಪತ್ನಿ ಮಕ್ಕಳೊಂದಿಗೆ ಸಂತಸದ ಸಮಯ ಕಳೆಯುವಿರಿ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇರುತ್ತದೆ. ಆದರೆ ಚಿಂತೆ ಮಾಡಬೇಕಾಗಿಲ್ಲ.

ತುಲಾ: ನಾನಾ ಮೂಲಗಳಿಂದ ಧನಾಗಮನವಾಗಲಿದ್ದು, ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಮನೆಯಲ್ಲಿ ಹಬ್ಬದ ವಾತಾವರಣವಿರಲಿದೆ. ಅನಿರೀಕ್ಷಿತ ಬಂಧು ಮಿತ್ರರ ಆಗಮನ ಸಂತಸ ಹೆಚ್ಚಿಸುವುದು. ಆದರೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರಾದರೂ ಮಾನಸಿಕವಾಗಿ ಗಟ್ಟಿಯಾಗಿರುವ ಸಮಯವಿದು. ಕೃಷಿಕರಿಗೆ ತಮ್ಮ ಕ್ಷೇತ್ರದಲ್ಲಿ ಕೈ ಹಿಡಿದ ಕಾರ್ಯಗಳು ಫಲಕೊಡಲಿವೆ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿಬರುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಕೆಳ ಹಂತದ ನೌಕರರಿಗೆ ಮೇಲ್ವರ್ಗದ ಅಧಿಕಾರಿಗಳಿಗೆ ಕಿರಿ ಕಿರಿ ತಪ್ಪಿದ್ದಲ್ಲ. ಸಹೋದರ ಸಂಬಂಧಿಗಳಲ್ಲಿ ವಿರಸ ಮೂಡಬಹುದು. ಮಾತಿನ ಮೇಲೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಮನೆ, ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಆರ್ಥಿಕವಾಗಿ ಸಾಕಷ್ಟು ಧನಾಗಮನವಾಗಲಿದೆ, ಆದರೆ ಖರ್ಚಿನ ಬಗ್ಗೆ ಹಿಡಿತವಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ತಯಾರಿ ನಡೆಸುವಿರಿ.

ಕುಂಭ: ಆರೋಗ್ಯದಲ್ಲಿ ಸುಧಾರಣೆ ತೋರಿಬರುವುದು. ಚಿಂತೆ ಬೇಕಾಗಿಲ್ಲ. ಹಳೇ ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡುವುದು. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಪಾಲು ಬಂಡವಾಳ ಹೂಡಿಕೆಯಲ್ಲಿ ಪ್ರಗತಿಯಿದ್ದರೂ, ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಆರ್ಥಿವಕಾಗಿ ಎಷ್ಟೇ ಗಳಿಕೆ ಮಾಡಿದರೂ ಮಾನಸಿಕವಾಗಿ ಏನೋ ಒಂದು ರೀತಿಯ ಬೇಸರ ಕಾಡಲಿದೆ. ಸಂಗಾತಿಯೊಂದಿಗೆ ಮನಸ್ತಾಪವಾಗುವುದು. ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವಿರಿ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments