Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 5 ಸೆಪ್ಟಂಬರ್ 2019 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅಧಿಕಾರಿ ವರ್ಗದವರ ಉದಾಸೀನ ಪ್ರವೃತ್ತಿ ನಿಮ್ಮ ಕಾರ್ಯಸಾಧನೆಗೆ ಅಡ್ಡಿ ಮಾಡಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ಕೌಟುಂಬಿಕವಾಗಿ ಮನೋಕಾಮನೆಗಳು ನೆರವೇರುವುದು. ಆರ್ಥಿಕವಾಗಿ ಸಮಾಧಾನಕರ ದಿನ.

ವೃಷಭ: ಪಾಲು ಬಂಡವಾಳ ಹೂಡಿಕೆಯಲ್ಲಿ ಹೆಚ್ಚಿನ ಲಾಭ ಸಿಗುವುದು. ಮನೆಯಲ್ಲಿ ಶುಭಮಂಗಲ ಕಾರ್ಯ ನಡೆಸಲು ಇದು ಸಕಾಲ. ಅಂದುಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ದಾಯಾದಿಗಳು ನಿಮ್ಮ ಏಳಿಗೆಗೆ ಅಸೂಯೆಪಡುವರು. ಎಚ್ಚರಿಕೆಯಿರಲಿ.

ಮಿಥುನ: ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ಯೋಗವಿದೆ. ಮನೆಯಲ್ಲಿ ಆಂತರಿಕ ಕಲಹ ಮನಸ್ಸಿನ ನೆಮ್ಮದಿ ಹಾಳು ಮಾಡಬಹುದು. ಆಪ್ತರ ಚಾಡಿ ಮಾತು ಮನಸ್ಸಿಗೆ ನೋವುಂಟು ಮಾಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ಕರ್ಕಟಕ: ದೂರ ಪ್ರಯಾಣದಿಂದ ಮನಸ್ಸಿಗೆ ಸಂತಸವಾಗುವುದು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಫಲಗಳು ಗೋಚರಕ್ಕೆ ಬರಲಿವೆ. ಕಾರ್ಯನಿಮಿತ್ತ ಅಧಿಕ ಧನವ್ಯಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಸ್ವ ಉದ್ಯೋಗಿಗಳಿಗೆ ಹೊಸ ಅವಕಾಶಗಳು ಕೂಡಿಬರಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ವಾಹನ ಸವಾರರು ಎಚ್ಚರಿಕೆಯಿಂದಿರುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ಕನ್ಯಾ: ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತ್ರಾಸವೆನಿಸೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯವಿದೆ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ತುಲಾ: ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಎಚ್ಚರಿಕೆಯಿಂದಿರಬೇಕಾದ ಸಮಯವಿದು. ಯಾರಿಗೂ ಈ ದಿನ ಸಾಲ ಕೊಡಲು ಹೋಗಬೇಡಿ. ಕಾರ್ಯಕ್ಷೇತ್ರದಲ್ಲಿ ವಿಶ್ವಾಸ ಘಾತುಕರ ಬಗ್ಗೆ ಎಚ್ಚರದಿಂದಿರಬೇಕು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ.

ವೃಶ್ಚಿಕ: ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಇರಲಿ. ಸಂಗಾತಿಯೊಂದಿಗೆ ದುಡುಕಿನ ಮಾತನಾಡಿ ಮನಸ್ತಾಪಕ್ಕೆ ದಾರಿ ಮಾಡಿಕೊಡಬೇಡಿ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಾಡುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಜಾಗ್ರತೆ ಅಗತ್ಯ.

ಧನು: ಶುಭ ಮಂಗಲ ಕಾರ್ಯಗಳಿಗಾಗಿ ಹೆಚ್ಚಿನ ಓಡಾಟ ನಡೆಸುವಿರಿ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಗುರುತಿಸಿಕೊಳ್ಳುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಇಷ್ಟ ಮಿತ್ರರ ಭೇಟಿಯಾಗುವಿರಿ.

ಮಕರ: ನಾನಾ ರೀತಿಯ ಖರ್ಚು ವೆಚ್ಚಗಳು ಆತಂಕಕ್ಕೆ ಕಾರಣವಾಗುವುದು.ವೃತ್ತಿ ರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಕೌಟುಂಬಿಕವಾಗಿ ಕೆಲವೊಂದು ಮಹತ್ವದ ಜವಾಬ್ಧಾರಿ ಹೆಗಲಿಗೇರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಪಾಲಿಗೆ ಬಂದ ಅವಕಾಶವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಲು ಜಾಣ್ಮೆ ಪ್ರದರ್ಶಿಸಬೇಕು. ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟ ನಡೆಸಬೇಕಾಗುತ್ತದೆ.ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಸೂಕ್ತ ಸಮಯದಲ್ಲಿ ಧನಾಗಮನವಾಗುವುದರಿಂದ ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ನೂತನ ಗೃಹ ಖರೀದಿ, ವಾಹನ ಖರೀದಿಗೆ ಇದು ಸೂಕ್ತ ಕಾಲ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಅನುರಾಧ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?