Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 5 ಸೆಪ್ಟಂಬರ್ 2019 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅಧಿಕಾರಿ ವರ್ಗದವರ ಉದಾಸೀನ ಪ್ರವೃತ್ತಿ ನಿಮ್ಮ ಕಾರ್ಯಸಾಧನೆಗೆ ಅಡ್ಡಿ ಮಾಡಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ಕೌಟುಂಬಿಕವಾಗಿ ಮನೋಕಾಮನೆಗಳು ನೆರವೇರುವುದು. ಆರ್ಥಿಕವಾಗಿ ಸಮಾಧಾನಕರ ದಿನ.

ವೃಷಭ: ಪಾಲು ಬಂಡವಾಳ ಹೂಡಿಕೆಯಲ್ಲಿ ಹೆಚ್ಚಿನ ಲಾಭ ಸಿಗುವುದು. ಮನೆಯಲ್ಲಿ ಶುಭಮಂಗಲ ಕಾರ್ಯ ನಡೆಸಲು ಇದು ಸಕಾಲ. ಅಂದುಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ದಾಯಾದಿಗಳು ನಿಮ್ಮ ಏಳಿಗೆಗೆ ಅಸೂಯೆಪಡುವರು. ಎಚ್ಚರಿಕೆಯಿರಲಿ.

ಮಿಥುನ: ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ಯೋಗವಿದೆ. ಮನೆಯಲ್ಲಿ ಆಂತರಿಕ ಕಲಹ ಮನಸ್ಸಿನ ನೆಮ್ಮದಿ ಹಾಳು ಮಾಡಬಹುದು. ಆಪ್ತರ ಚಾಡಿ ಮಾತು ಮನಸ್ಸಿಗೆ ನೋವುಂಟು ಮಾಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ಕರ್ಕಟಕ: ದೂರ ಪ್ರಯಾಣದಿಂದ ಮನಸ್ಸಿಗೆ ಸಂತಸವಾಗುವುದು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಫಲಗಳು ಗೋಚರಕ್ಕೆ ಬರಲಿವೆ. ಕಾರ್ಯನಿಮಿತ್ತ ಅಧಿಕ ಧನವ್ಯಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಸ್ವ ಉದ್ಯೋಗಿಗಳಿಗೆ ಹೊಸ ಅವಕಾಶಗಳು ಕೂಡಿಬರಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ವಾಹನ ಸವಾರರು ಎಚ್ಚರಿಕೆಯಿಂದಿರುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ಕನ್ಯಾ: ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತ್ರಾಸವೆನಿಸೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯವಿದೆ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ತುಲಾ: ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಎಚ್ಚರಿಕೆಯಿಂದಿರಬೇಕಾದ ಸಮಯವಿದು. ಯಾರಿಗೂ ಈ ದಿನ ಸಾಲ ಕೊಡಲು ಹೋಗಬೇಡಿ. ಕಾರ್ಯಕ್ಷೇತ್ರದಲ್ಲಿ ವಿಶ್ವಾಸ ಘಾತುಕರ ಬಗ್ಗೆ ಎಚ್ಚರದಿಂದಿರಬೇಕು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ.

ವೃಶ್ಚಿಕ: ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಇರಲಿ. ಸಂಗಾತಿಯೊಂದಿಗೆ ದುಡುಕಿನ ಮಾತನಾಡಿ ಮನಸ್ತಾಪಕ್ಕೆ ದಾರಿ ಮಾಡಿಕೊಡಬೇಡಿ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಾಡುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಜಾಗ್ರತೆ ಅಗತ್ಯ.

ಧನು: ಶುಭ ಮಂಗಲ ಕಾರ್ಯಗಳಿಗಾಗಿ ಹೆಚ್ಚಿನ ಓಡಾಟ ನಡೆಸುವಿರಿ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಗುರುತಿಸಿಕೊಳ್ಳುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಇಷ್ಟ ಮಿತ್ರರ ಭೇಟಿಯಾಗುವಿರಿ.

ಮಕರ: ನಾನಾ ರೀತಿಯ ಖರ್ಚು ವೆಚ್ಚಗಳು ಆತಂಕಕ್ಕೆ ಕಾರಣವಾಗುವುದು.ವೃತ್ತಿ ರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಕೌಟುಂಬಿಕವಾಗಿ ಕೆಲವೊಂದು ಮಹತ್ವದ ಜವಾಬ್ಧಾರಿ ಹೆಗಲಿಗೇರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಪಾಲಿಗೆ ಬಂದ ಅವಕಾಶವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಲು ಜಾಣ್ಮೆ ಪ್ರದರ್ಶಿಸಬೇಕು. ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟ ನಡೆಸಬೇಕಾಗುತ್ತದೆ.ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಸೂಕ್ತ ಸಮಯದಲ್ಲಿ ಧನಾಗಮನವಾಗುವುದರಿಂದ ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ನೂತನ ಗೃಹ ಖರೀದಿ, ವಾಹನ ಖರೀದಿಗೆ ಇದು ಸೂಕ್ತ ಕಾಲ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments