Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 7 ಸೆಪ್ಟಂಬರ್ 2019 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅಧಿಕಾರಿ ವರ್ಗದವರಿಗೆ ವರ್ಗಾವಣೆಯ ಸಂಭವವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಆದಾಯ ಉತ್ತಮವಾಗಿರುತ್ತದೆ. ಆದರೆ ವಂಚನೆಗೊಳಗಾಗುವ ಭೀತಿಯಿದೆ. ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗ ಲಾಭ.

ವೃಷಭ: ಇದುವರೆಗೆ ಇದ್ದ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ವಿದ್ಯಾರ್ಥಿಗಳಿಗೆ ಚಿತ್ತಚಾಂಚಲ್ಯ ಕಾಡಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವಾಹನ ಚಾಲಕರು ಚಾಲನೆಯಲ್ಲಿ ಅತೀವ ಎಚ್ಚರಿಕೆ ವಹಿಸಬೇಕು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಂಬಿಕೊಂಡವರಿಂದಲೇ ವಂಚನೆಗೊಳಗಾಗುವ ಅಪಾಯವಿದೆ. ಮನಸ್ಸಿಗೆ ಬೇಸರವಾಗುವ ಘಟನೆಗಳು ನಡೆಯಬಹುದು. ನಿರುದ್ಯೋಗಿಗಳಿಗೆ ಹಲವು ಅವಕಾಶಗಳು ಒದಗಿಬರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು.

ಕರ್ಕಟಕ: ಅಂದುಕೊಂಡ ಕೆಲಸ ಕಾರ್ಯಗಳನ್ನು ನಿರೀಕ್ಷಿತ ರೀತಿಯಲ್ಲಿ ಮಾಡಿ ಮುಗಿಸುವಿರಿ. ಹಂತ ಹಂತವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ವ್ಯಾಪಾರ ವ್ಯವಹಾರಗಳಲ್ಲಿ ಹೂಡಿಕೆ ಮಾಡಿದ್ದರೆ ಲಾಭ ಕೈಗೆ ಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಬರಬಹುದು. ಅವಿವಾಹಿತರ ವಿವಾಹ ಪ್ರಯತ್ನ ಫಲಗೂಡಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ವ್ಯವಹಾರದಲ್ಲಿ ಮುನ್ನಡೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ಹಣಕಾಸಿನ ವ್ಯವಹಾರದಲ್ಲಿ ಕೆಸಲ ಮಾಡುತ್ತಿದ್ದರೆ ಇಂದು ಅದೃಷ್ಟ ನಿಮ್ಮ ಕೈ ಹಿಡಿಯಲಿದೆ. ಅಂದುಕೊಂಡ ಕಾರ್ಯ ನೆರವೇರುವುದು. ಉತ್ತಮ ಲಾಭ ಸಿಗುವುದು. ಕೌಟುಂಬಿಕವಾಗಿ ಬಂಧು ಮಿತ್ರರ ಆಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಫಲಿತಾಂಶ.

ತುಲಾ: ಹಿರಿಯರೊಡನೆ ಕೌಟುಂಬಿಕ ವಿಚಾರವಾಗಿ ಅನಗತ್ಯ ವಾದ ವಿವಾದವಾಗದಂತೆ ಎಚ್ಚರಿಕೆ ವಹಿಸಿ. ಅರ್ಧಕ್ಕೇ ನಿಂತು ಹೋದ ಕೆಲಸಗಳಿಗೆ ಚಾಲನೆ ನೀಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ಸಂಗಾತಿಯ ಮನೋಕಾಮನೆ ಪೂರೈಸುವಿರಿ.

ವೃಶ್ಚಿಕ: ಆರ್ಥಿಕವಾಗಿ ಚೇತರಿಕೆ ಕಂಡುಬರುವುದು, ಹಂತ ಹಂತವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ನಡೆಸುವಿರಿ. ಅಧಿಕಾರಿ ವರ್ಗದವರಿಗೆ ಮುನ್ನಡೆಯಿದೆ. ಅನಿರೀಕ್ಷಿತವಾಗಿ ಶುಭ ಸುದ್ದಿ ಕಾದಿದೆ.

ಧನು: ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ನಿಮ್ಮ ಮನೋಕಾಮನೆಗಳನ್ನು ಪೂರೈಸಲು ಪಣ ತೊಡುವಿರಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ವಿದ್ಯಾರ್ಥಿಗಳಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಬಹುದು. ಆರೋಗ್ಯದಲ್ಲಿ ಸುಧಾರಣೇಯಾಗುವುದು.

ಮಕರ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳನ್ನು ನೆರವೇರಿಸುವಿರಿ. ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಮನೋಕಾಮನೆಗಳು ಪೂರ್ತಿಯಾಗುವುದು. ಸಾಂಸಾರಿಕವಾಗಿಯೂ ನೆಮ್ಮದಿಯ ದಿನವಾಗಲಿದೆ.

ಕುಂಭ: ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆಯ ಕಂಡುಬರುವುದು. ಸಂಗಾತಿಯೊಂದಿಗೆ ಸಣ್ಣ ಪುಟ್ಟ ಮನಸ್ತಾಪಗಳು ಕಂಡುಬರುವುದು. ತಾಳ್ಮೆಯಿಂದ ವ್ಯವಹರಿಸಿ. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬರಲಿದೆ.

ಮೀನ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕೌಟುಂಭಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಬಹುದು. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಇಷ್ಟ ಮಿತ್ರರ ಭೇಟಿ, ಪ್ರವಾಸ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಾವಾಸ್ಯೆಯೆಂದು ಹೀಗೆ ಮಾಡಿದರೆ ಲಕ್ಷ್ಮೀದೇವಿ ಪ್ರಸನ್ನಳಾಗುತ್ತಾಳಂತೆ