Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 9 ಸೆಪ್ಟಂಬರ್ 2019 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯೊಂದಿಗಿನ ಮನಸ್ತಾಪಗಳಿಗೆ ಅಂತ್ಯ ಕಾಣಿಸುವಿರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಹೊಸ ಕೆಲಸಗಳಿಗೆ ಕೈ ಹಾಕಲು ಸೂಕ್ತ ದಿನ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ಋಣಾತ್ಮಕ ಚಿಂತನೆಗಳನ್ನು ದೂರ ಮಾಡಿ.

ವೃಷಭ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡುವಿರಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ತೋರಿಬರುವುದು. ಮಿತ್ರರ ಸಹಕಾರದಿಂದ ಉದ್ಯೋಗ ಕ್ಷೇತ್ರದಲ್ಲಿ ಬರುವ  ಅಡೆತಡೆಗಳನ್ನು ದಾಟುವಿರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಸಂಗಾತಿಯ ಸಲಹೆಗಳಿಗೆ ಕಿವಿಗೊಡದಿದ್ದರೆ ಅಪಾಯ ತಪ್ಪಿದ್ದಲ್ಲ. ಉದ್ಯೋಗದಲ್ಲಿ ಮುನ್ನಡೆಯಿರುವುದು. ಆರ್ಥಿಕವಾಗಿ ಖರ್ಚಿನ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಅಧಿಕ ಲಾಭ ತಂದುಕೊಡುವ ಉದ್ಯೋಗದ ಬಗ್ಗೆ ಚಿಂತನೆ ನಡೆಸುವಿರಿ. ನಿಮ್ಮ ಕ್ರಿಯಾಶೀಲತೆಯನ್ನು ಬಳಸಿಕೊಳ್ಳಲು ಸಕಾಲವಿದು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕೌಟುಂಬಿಕವಾಗಿ ಹೊಂದಾಣಿಕೆಯಿಂದಿರಬೇಕು.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಉತ್ತಮವಾಗುವುದು. ಹಣಕಾಸಿನ ಪರಿಸ್ಥಿತಿ ಸುಧಾರಿಸಿ ಆದಾಯ ದ್ವಿಗುಣಗೊಳ್ಳುವುದು. ಹೊಸ ಕೆಲಸಗಳಿಗೆ ಕೈ ಹಾಕಲು ಸೂಕ್ತ ದಿನ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಆಸ್ತಿ ವಿವಾದಗಳಿಗೆ ಅಂತ್ಯ ಸಿಗಲಿದೆ. ಮನೆ ರಿಪೇರಿ ಕೆಲಸಗಳಿಗೆ ಹೆಚ್ಚಿನ ಧನವ್ಯಯವಾಗಲಿದೆ. ನೂತನ ದಂಪತಿಗಳಿಗೆ ಸಂತಾನ ಪಲ ಸೂಚನೆ ಸಿಗುವುದು. ಇಷ್ಟ ಮಿತ್ರರ ಭೇಟಿಯಾಗುವಿರಿ. ಕೌಟುಂಬಿಕವಾಗಿ ನೆಮ್ಮದಿಯಿರುವುದು.

ತುಲಾ: ಕೃಷಿ ಕ್ಷೇತ್ರದಲ್ಲಿರುವವರಿಗೆ ಕೊಂಚ ವಾತಾವರಣದ ಅನಾನುಕೂಲ ಕೆಲಸದ ಮೇಲೆ ಪರಿಣಾಮ ಬೀರಬಹುದು. ಆರ್ಥಿಕವಾಗಿ ಕೊಂಚ ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗುತ್ತದೆ. ಪ್ರೀತಿ ಪಾತ್ರರಿಗಾಗಿ ಅಮೂಲ್ಯ ಸಮಯ ಮೀಸಲಿಡಬೇಕಾಗುತ್ತದೆ.

ವೃಶ್ಚಿಕ: ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ್ಯೆತೆಯಿದೆ. ಆದರೆ ಉದರ ಸಂಬಂಧೀ ಅನಾರೋಗ್ಯ ಕಾಡಬಹುದು, ಎಚ್ಚರಿಕೆ ಅಗತ್ಯ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾಗುತ್ತದೆ, ಪ್ರಯಾಣದಲ್ಲಿ ಕಳ್ಳತನವಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗದಲ್ಲಿ ಕಾರ್ಯದೊತ್ತಡ ಅಧಿಕವಾಗಿರುವುದು.

ಧನು: ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಧನವಿನಿಯೋಗ ಮಾಡಬೇಕಾಗುತ್ತದೆ. ದುಡುಕಿನ ವರ್ತನೆ ತೋರದಿರಿ. ಮಾತಿನ ಮೇಲೆ ನಿಗಾ ಇರಲಿ. ಸಹೋದರರೊಂದಿಗೆ ಆಸ್ತಿ ವಿಚಾರಕ್ಕೆ ವಿವಾದವಾಗಬಹುದು. ತಾಳ್ಮೆಯಿಂದಿರಿ.

ಮಕರ: ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಭೂಮಿ ವಿಚಾರಕ್ಕೆ ಸಂಬಂಧಿಸಿದ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಸಿಗುವುದು. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳ ಸಂಭವ.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳನ್ನು ದೂರ ಮಾಡಿ ಗಟ್ಟಿ ನಿರ್ಧಾರ ಕೈಗೊಳ್ಳಬೇಕಾದ ದಿನವಿದು. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಹೆಚ್ಚಿನ ಧನಾರ್ಜನೆಗೆ ಮಾರ್ಗ ಹುಡುಕುವಿರಿ. ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು.

ಮೀನ: ಮಹಿಳಾ ಉದ್ಯೋಗಿಗಳು ಉದ್ಯೋಗದಲ್ಲಿ ಶುಭ ಫಲ ಪಡೆಯುವರು. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ಶೈಕ್ಷಣಿಕ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದನ್ನೇ ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಾಷಾಢ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?