Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 11 ಸೆಪ್ಟಂಬರ್ 2019 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಹಿಳೆಯರಿಂದ ಧನಲಾಭವಾಗಲಿದೆ. ಆದರೂ ಮಾನಸಿಕವಾಹಿ ಹಲವು ಚಿಂತೆಗಳು ಕಾಡಲಿವೆ.ಸಂಗಾತಿಯ ಮನೋಕಾಮನೆ ಪೂರೈಸಲು ಮುಂದಾಗಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಎಂದಿನ ಕಾರ್ಯದೊತ್ತಡದಿಂದ ಹೈರಾಣಾಗುವಿರಿ.

ವೃಷಭ: ವಿನಾಕಾರಣ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ಕಿರಿ ಕಿರಿ ಉಂಟಾಗಬಹುದು. ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ಹೊಂದಿರುವವರಿಗೆ ಶುಭ ಫಲ ಸಿಗುವುದು.

ಮಿಥುನ: ಆರ್ಥಿಕವಾಗಿ ಆದಾಯ ಕಡಿಮೆಯಾಗಿ ಹಣಕಾಸಿನ ಮುಗ್ಗಟ್ಟುಗಳು ತಲೆದೋರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸವಿರುವುದು. ಆದರೆ ಸಕಾಲದಲ್ಲಿ ಮಿತ್ರರಿಂದ ಸಹಕಾರ ದೊರೆಯುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಹಿರಿಯರ ಆಶೀರ್ವಾದ ನಿಮ್ಮ ಮೇಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡುವಿರಿ. ದೇವಾಲಯ ಸಂದರ್ಶನ ಮಾಡುವಿರಿ. ಬಂಧು ಮಿತ್ರರ ಆಗಮನವಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ವೆಚ್ಚಗಳಾಬಹುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಾಡಲಿದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಕಿರಿ ಕಿರಿ.

ಕನ್ಯಾ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಹಿತಶತ್ರುಗಳು ಬೆನ್ನ ಹಿಂದೆಯೇ ಇರುತ್ತಾರೆ, ಎಚ್ಚರದಿಂದಿರುವುದು ಮುಖ್ಯ. ಆರ್ಥಿಕವಾಗಿ ನಾನಾ ಬಗೆಯ ಖರ್ಚು ವೆಚ್ಚಗಳು ಎದುರಾಗಲಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮನೆ ಬಳಕೆಗಾಗಿ ನೂತನ ವಸ್ತುಗಳ ಖರೀದಿ ಮಾಡುವಿರಿ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವವರಿಗೆ ಉನ್ನತಿ ಸಿಗುವುದು. ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ವಾಹನ ಸವಾರರಿಗೆ ಅಪಘಾತದ ಭೀತಿಯಿದೆ, ಎಚ್ಚರಿಕೆಯಿಂದಿರಬೇಕಾಗುತ್ತದೆ.

ಧನು: ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಲಾಭ ಪಡೆಯುವಿರಿ. ಹೂಡಿಕೆ ಮಾಡಲು ಇದು ಸಕಾಲ. ಹೊಸ ವಾಹನ, ಮನೆ ಖರೀದಿ ಬಗ್ಗೆಯೂ ಚಿಂತನೆ ನಡೆಸುವಿರಿ. ಆದರೆ ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಿ.

ಮಕರ: ನಿಮ್ಮ ಉತ್ತಮ ನಡುವಳಿಕೆ ಎಲ್ಲರಿಂದ ಪ್ರಶಂಸೆಗೊಳಗಾಗುವುದು. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸಲಿದ್ದೀರಿ. ಹಿರಿಯರು ಆರೋಗ್ಯದ ಮೇಲೆ ಕಾಳಜಿ ವಹಿಸಬೇಕು. ಕಷ್ಟದ ಸಮಯದಲ್ಲಿ ಸನ್ಮಿತ್ರರ ಸಹಕಾರ ದೊರೆಯುವುದು.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ, ಮುನ್ನಡೆ ಯೋಗವಿದೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದರಿಂದ ಮನಸ್ಸಿಗೆ ಸಂತಸವಾಗುವುದು. ಮಹಿಳಾ ಅಧಿಕಾರಿಗಳಿಗೆ ಶುಭ ಫಲ. ಸಾಂಸಾರಿಕವಾಗಿ ನೆಮ್ಮದಿಯಿರುತ್ತದೆ.

ಮೀನ: ಇಷ್ಟಮಿತ್ರರ ಭೇಟಿ, ಭೋಜನ ಸಾಧ್ಯತೆಯಿದೆ. ಉದ್ಯೋಗ ಕ್ಷೇತ್ರದಲ್ಲಿ ಏನೋ ಒಂದು ರೀತಿಯ  ಅಸಮಾಧಾನವಿರುವುದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಅವಕಾಶಕೊಡಬೇಡಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕೇಳುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ದೇವಸ್ಥಾನದಿಂದ ತಂದ ನಿಂಬೆ ಹಣ್ಣನ್ನು ಮನೆಯ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ