Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 13 ಸೆಪ್ಟಂಬರ್ 2019 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಲಸ ಕಾರ್ಯಗಳಿಗಾಗಿ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ದೃಢ ನಿರ್ಧಾರದಿಂದ ಮುನ್ನಡೆಯಬೇಕಾದ ದಿನವಿದು. ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಮುನ್ನಡೆ.

ವೃಷಭ: ಸಾಂಸಾರಿಕವಾಗಿ ತಾಳ್ಮೆ ಕಳೆದುಕೊಳ್ಳುವಂತಹ ಪ್ರಸಂಗ ಎದುರಾಗಬಹುದು. ದುಡುಕಿನ ಮಾತನಾಡಬೇಡಿ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆ ಬರದು. ಆದರೆ ಮಿತ್ರರ ಅಸಮಾಧಾನಕ್ಕೆ ಗುರಿಯಾಗಬೇಕಾಗುತ್ತದೆ. ಮಾನಸಿಕವಾಗಿ ತಾಳ್ಮೆ ಮುಖ್ಯ.

ಮಿಥುನ: ಸಾಂಸಾರಿಕವಾಗಿ ಹೆಚ್ಚಿನ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಧನಾಗಮನವಾಗಲಿದೆ. ಮಿತ್ರರ ಸಹಕಾರ ದೊರೆಯುವುದು. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಕರ್ಕಟಕ: ವೃತ್ತಿರಂಗದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ವ್ಯಾಪಾರದಲ್ಲಿ ಲಾಭ, ವ್ಯವಹಾರದಲ್ಲಿ ಹೊಸ ಶತ್ರುಗಳು ಸೃಷ್ಟಿಯಾಗುವರು. ಹಿತಶತ್ರುಗಳ ಬಗ್ಗೆ ಎಚ್ಚರವಾಗಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಅನಗತ್ಯವಾಗಿ ತೊಂದರೆಗೆ ಸಿಲುಕಿಕೊಳ್ಳುವಿರಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರದಿಂದಿರಿ. ಮನೆಯಲ್ಲಿ ಶುಭಮಂಗಲ ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಕೌಟುಂಬಿಕವಾಗಿ ಸಂತಸದ ದಿನಗಳಿವು. ಹೊಸ ಮಿತ್ರರ ಭೇಟಿಯಾಗುವಿರಿ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಆರ್ಥಿಕವಾಗಿ ಹಣಕಾಸಿಗೆ ಸಮಸ್ಯೆಯಾಗದು. ದಿನದಂತ್ಯಕ್ಕೆ ಮತ್ತಷ್ಟು ಶುಭ ಫಲ.

ತುಲಾ: ಆರ್ಥಿಕವಾಗಿ  ಅಧಿಕ ಧನವ್ಯಯವಾದೀತು. ಹಾಗಿದ್ದರೂ ಕಾರ್ಯಸಾಧನೆಯಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಬಂದು ಸಂತಸವಾಗುವುದು. ವೃತ್ತಿರಂಗದಲ್ಲಿ ಅನಿರೀಕ್ಷಿತ ಬಡ್ತಿ, ಮುನ್ನಡೆ ಯೋಗವಿದೆ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರಾಗಲಿದೆ. ಕಾಳಜಿವಹಿಸಬೇಕು. ಉದ್ಯೋಗಿಗಳಿಗೆ ಸಮಾಧಾನಕರ ದಿನ. ಬಿಡುವಿಲ್ಲದೇ ದುಡಿಯಬೇಕಾದರೂ ತಕ್ಕ ಫಲಿತಾಂಶ ಸಿಗುವುದರಿಂದ ಸಂತಸವಾಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಧನು: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಯೋಗವಿದೆ. ಇಷ್ಟು ದಿನ ದೂರವಾಗಿದ್ದ ಸಂಬಂಧಗಳು ಮರಳಿ ಬೆಸೆಯಲಿವೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಸಂಗಾತಿಯೊಂದಿಗೆ ಅಸಮಾಧಾನವಾಗಲಿದೆ.

ಮಕರ: ಅಂದುಕೊಂಡ ಕಾರ್ಯಗಳು ನೆರವೇರಿ ಮುನ್ನಡೆ ಅನುಭವಕ್ಕೆ ಬರುವುದು. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರುವುದು. ಸಂಗಾತಿಯೊಡನೆ ಇಷ್ಟು ದಿನ ಮುಚ್ಚಿಟ್ಟ ವಿಚಾರ ಬಹಿರಂಗವಾಗಲಿದೆ. ವ್ಯವಹಾರದಲ್ಲಿ ಎಚ್ಚರವಿರಲಿ.

ಕುಂಭ: ದೈನಂದಿನ ಕೆಲಸಗಳಲ್ಲಿ ಬೇಸರ ಮೂಡುವುದು. ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಯತ್ನಿಸುವಿರಿ. ಅನಗತ್ಯ ವಿವಾದಗಳಿಂದ ದೂರವಿರುವುದೇ ಉತ್ತಮ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ವೃತ್ತಿರಂಗದಲ್ಲಿ ಮುನ್ನಡೆಯಿದೆ.

ಮೀನ: ಆರ್ಥಿಕವಾಗಿ ಗಮನಾರ್ಹ  ಅಭಿವೃದ್ಧಿ ಕಂಡುಬಂದು ಅಂದುಕೊಂಡ ಕೆಲಸಗಳಿಗೆ ಚಾಲನೆ ನೀಡುವಿರಿ. ಕಷ್ಟಗಳು ಕರಗಲಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ. ಸಂಸಾರದಲ್ಲಿ ಭಿನ್ನಮತ ಶಮನವಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments