Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 14 ಸೆಪ್ಟಂಬರ್ 2019 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹೊಸ ವ್ಯವಹಾರಗಳು ಆರ್ಥಿಕವಾಗಿ ಲಾಭ ತಂದುಕೊಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರೀಕ್ಷಿತ ಪ್ರಗತಿ ಉಂಟಾಗಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆ ಕಂಡುಬರಲಿದೆ.

ವೃಷಭ: ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಯಶಸ್ಸು ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಾಗಂತ ಉಪೇಕ್ಷೆ ಸಲ್ಲದು. ನ್ಯಾಯಾಲಯದ ಕಲಾಪಗಳಲ್ಲಿ ಜಯ. ಕಿರು ಸಂಚಾರದಿಂದ ಕಾರ್ಯಸಿದ್ಧಿಯಾಗುವುದು.

ಮಿಥುನ: ನಿರಂತರವಾಗಿ ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗಿರುವುದರಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಬಹುದು. ಉದ್ಯೋಗಿಗಳಿಗೆ ವರ್ಗಾವಣೆಯ ಭೀತಿಯಿರಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯಗಳು ನೆರವೇರಲಿವೆ. ಎಚ್ಚರಿಕೆಯಿಂದ ಹೆಜ್ಜೆಯಿಡಿ.

ಕರ್ಕಟಕ: ರಾಜಕೀಯ ರಂಗದಲ್ಲಿರುವವರಿಗೆ ಹಿತಶತ್ರುಗಳ ಕಾಟವಿರುವುದು. ಜಾಣತನ ಪ್ರದರ್ಶಿಸಬೇಕಾದ ಸಮಯವಿದು. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹೆಚ್ಚಿನ ಧನವ್ಯಯವಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಜಾಗ್ರತೆಯಿರಲಿ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ನೂತನ ದಂಪತಿಗೆ ಮಧುಚಂದ್ರದ ಭಾಗ್ಯವಿರಲಿದೆ. ಇಷ್ಟಮಿತ್ರರೊಂದಿಗೆ ಪ್ರವಾಸ ಮಾಡುವಿರಿ. ಹಿರಿಯರಿಗೆ ತೀರ್ಥ ಕ್ಷೇತ್ರಗಳ ಸಂದರ್ಶನ ಯೋಗವಿದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಅಧಿಕಾರಿ ವರ್ಗದವರಿಗೆ ಹಿನ್ನಡೆಯಾಗಬಹುದು.

ಕನ್ಯಾ: ಅಧಿಕಾರಿ ವರ್ಗದವರಿಗೆ ಸ್ಥಾನಪಲ್ಲಟ ಭೀತಿಯಿದೆ. ಕೃಷಿಕರಿಗೆ ಲಾಭದಾಯಕ ದಿನ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಜನೆ ರೂಪಿಸುವಿರಿ. ಸಂಗಾತಿಯ ಸಮಯೋಚಿತ ಸಲಹೆ ಉಪಯೋಗಕ್ಕೆ ಬರುವುದು. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ.

ತುಲಾ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕಾರ್ಯಗಳು ನೆರವೇರಲಿವೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾಗುತ್ತದೆ.

ವೃಶ್ಚಿಕ: ಇಂದು ನಿಮಗೆ ಸಮ್ಮಿಶ್ರ ಫಲ ಅನುಭವಕ್ಕೆ ಬರುವುದು. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಬಹುದು. ಆದರೆ ಅಂದುಕೊಂಡ ಕಾರ್ಯಗಳು ನೆರವೇರಿ ಮನಸ್ಸಿಗೆ ನೆಮ್ಮದಿಯೂ ಕೊಡುವುದು. ಪ್ರೀತಿ ಪಾತ್ರರೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆಯಿಂದ ನಡೆದುಕೊಳ್ಳಿ.

ಧನು: ಕೌಟುಂಬಿಕವಾಗಿ ನೆಮ್ಮದಿಯ ದಿನಗಳು. ಸಂಗಾತಿ, ಮಕ್ಕಳೊಂದಿಗೆ ಉತ್ತಮ ಸಮಯ ಕಳೆಯುವಿರಿ. ವಿದ್ಯಾರ್ಥಿಗಳಿಗೆ  ಅಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಇದುವರೆಗೆ ಗುಟ್ಟಾಗಿ ಇಟ್ಟಿದ್ದ ವಿಚಾರಗಳು ಬಹಿರಂಗವಾದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮಕರ: ಆತ್ಮಸ್ಥೈರ್ಯದಿಂದ ಹೆಜ್ಜೆಯಿಟ್ಟರೆ ನಿಮ್ಮ ಕಾರ್ಯಸಾಧನೆಯ ಹಾದಿ ಸುಲಭವಾಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ತಲೆದೋರುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಕುಂಭ: ಕೃಷಿಕರಿಗೆ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಕಂಡುಬಂದೀತು. ಉದ್ಯೋಗ ನಿಮಿತ್ತ ದೂರ ಪ್ರಯಾಣ ಮಾಡಬೇಕಾಗುತ್ತದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯವಾದೀತು. ಅನಗತ್ಯ ಖರ್ಚುಗಳು ತಲೆದೋರಲಿವೆ. ಎಚ್ಚರಿಕೆಯಿಂದಿರಿ.

ಮೀನ: ಸಂಗಾತಿಯ ಮನೋಭಿಲಾಷೆ ಈಡೇರಿಸಲು ಹೆಚ್ಚಿನ ಧನವ್ಯಯ ಮಾಡುವಿರಿ. ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಕಾಲ. ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುವುದು. ಶುಭ ವಾರ್ತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?