Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 15 ಸೆಪ್ಟಂಬರ್ 2019 (08:34 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಣಕಾಸಿನ ವಿಚಾರದಲ್ಲಿ ಹಲವು ಲಾಭದಾಯಕ ದಾರಿಗಳು ಸಿಗಲಿವೆ. ಆದರೆ ವಿಪರೀತ ಖರ್ಚಿಗೆ ಕಡಿವಾಣ ಹಾಕುವುದು ಅಗತ್ಯ. ಪ್ರೀತಿ ಪಾತ್ರರೊಂದಿಗೆ ಪ್ರವಾಸ, ಸಂಚಾರ ಸಾಧ‍್ಯತೆಯಿದೆ. ಹಿತಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರವಹಿಸಿ.

ವೃಷಭ: ದೈವಾನುಗ್ರಹದಿಂದ ಇಂದು ಎಲ್ಲವೂ ನಿಮಗೆ ಅನುಕೂಲಕರವಾಗಿ ನಡೆಯಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ವಹಿಸಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವುದು. ಸಹನೆ ಪರೀಕ್ಷಿಸುವಂತಹ ಪ್ರಸಂಗಗಳು ಎದುರಾಗಬಹುದು. ತಾಳ್ಮೆಯಿಂದಿರಬೇಕು. ಅವಿವಾಹಿತರಿಗೆ ವಿವಾಹ ಭಾಗ್ಯ ಸದ್ಯದಲ್ಲೇ ಕೂಡಿಬರುವುದು. ಐಶ್ವರ್ಯ ಪ್ರಾಪ್ತಿಯಾದರೂ ಅದನ್ನು ಜತನದಿಂದ ಕೂಡಿಡುವುದು ಮುಖ್ಯ.

ಕರ್ಕಟಕ: ತಾಳ್ಮೆ ಸಮಾಧಾನದಿಂದ ಮುನ್ನಡೆದರೆ ನೀವುಂ ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸಬಹುದು. ನಿಮ್ಮ ಮನಸ್ಸಿಗೆ ಹಿಡಿಸಿದ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಬೆಳ್ಳಂ ಬೆಳಿಗ್ಗೆಯೇ ಕೆಲವೊಂದು ಅಶುಭ ಸೂಚಕ ಘಟನೆಗಳು ನಡೆದು ಮನಸ್ಸಿಗೆ ಬೇಸರವಾಗಬಹುದು. ಸಾಂಸಾರಿಕವಾಗಿ ಸಂಗಾತಿಯಿಂದ ಸಮಯೋಚಿತ ಸಲಹೆ ಸಿಗುವುದು. ಕುಲದೇವರ ಆರಾಧನೆ ಮಾಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಪ್ರಯತ್ನ ಬಲದಿಂದಲೇ ನೀವು ಅಂದುಕೊಂಡ ಕಾರ್ಯಗಳಲ್ಲಿ ಜಯ ಗಳಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ ತೋರಿಬರುವುದು. ನಿರುದ್ಯೋಗಿಗಳಿಗೆ ಅಚ್ಚರಿಯ ವಾರ್ತೆ ಕಾದಿದೆ. ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರ.

ತುಲಾ: ಸಾಂಸಾರಿಕವಾಗಿ ಶಾಂತಿ ಸಮಾಧಾನ ನೆಲೆಸಿರುತ್ತದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಸಣ್ಣ ಮಟ್ಟಿಗಿನ ಲಾಭ ಕಂಡುಬರಲಿದೆ.

ವೃಶ್ಚಿಕ: ಆರೋಗ್ಯ ಸಮಸ್ಯೆಗೆ ಉಪೇಕ್ಷೆ ಮಾಡದೇ ವೈದ್ಯರ ಸಲಹೆ ಪಡೆಯಿರಿ. ಉದ್ಯೋಗ ಕ್ಷೇತ್ರದಲ್ಲಿ ನಿಧಾನವಾಗಿ ಮೇಲಧಿಕಾರಿಗಳ ಹಿಡಿತ ತಪ್ಪಿ ನೆಮ್ಮದಿಯ ನಿಟ್ಟುಸಿರುವ ಬಿಡುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಧನು: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮಗೆ ಮುನ್ನಡೆ ಸಿಗಲಿದೆ.  ಅನಿರೀಕ್ಷಿತವಾಗಿ ಪ್ರೀತಿ ಪಾತ್ರರ ಆಗಮನದಿಂದ ಮನೆಯಲ್ಲಿ ಸಂತಸವಿರುವುದು. ದೂರ ಸಂಚಾರಕ್ಕೆ ಸಿದ್ಧತೆ ಮಾಡುವಿರಿ. ವಿದ್ಯಾರ್ಥಿಗಳಿಗೆ ಕಠಿಣ  ಅಭ್ಯಾಸ ಮಾಡಬೇಕಾಗುತ್ತದೆ.

ಮಕರ: ಮಾನಸಿಕವಾಗಿ ಅಸ್ಥಿರತೆ ಕಾಡುವುದು. ಇದರಿಂದ ನಿರ್ಧಾರ ಕೈಗೊಳ್ಳುವಲ್ಲಿ ಸೋಲಾಗಬಹುದು. ನಿಮ್ಮ ಕ್ರಿಯಾಶೀಲ ವ್ಯಕ್ತಿತ್ವವನ್ನು ಹೊರಹಾಕಬೇಕಾದ ಸಮಯವಿದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯಿರಲಿದೆ. ಸಂಗಾತಿಯ ಪ್ರೀತಿ ಸಿಗುವುದು.

ಕುಂಭ: ಚರ್ಮಸಂಬಂಧೀ ಆರೋಗ್ಯ ಸಮಸ್ಯೆ ಚಿಂತೆಗೀಡು ಮಾಡುವುದು. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಸಂತಾನಾಪೇಕ್ಷಿತ ದಂಪತಿ ದೇವರ ಮೊರೆ ಹೋಗುವರು. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಮೀನ: ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡವಿರುವುದು. ಉದ್ಯೋಗ ಕ್ಷೇತ್ರದ ವಾತಾವರಣದಿಂದ ಮನಸ್ಸು, ದೇಹ ಹೈರಾಣಾಗುವುದು. ಸಾಮಾಜಿಕ ರಂಗದಲ್ಲಿ ಸೂಕ್ತ ಸ್ಥಾನ ಮಾನ ಲಭ್ಯವಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments