Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 16 ಸೆಪ್ಟಂಬರ್ 2019 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಿರಿಯರ ಸಲಹೆಗಳು ಅಪಥ್ಯವೆನಿಸಲಿದೆ. ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಾಡಬಹುದು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹ ಹೈರಾಣಾಗಲಿದೆ. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆರೋಗ್ಯ ಸುಧಾರಿಸುವುದು.

ವೃಷಭ: ಅಂದುಕೊಂಡ ಕಾರ್ಯ ನೆರವೇರಿಸಲು ಹಲವು ಅಡ್ಡಿ ಆತಂಕಗಳು ಎದುರಾಗಬಹುದು. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು. ಸಂಗಾತಿಯ ಮನೋಕಾಮನೆ ಪೂರೈಸಲು ಖರ್ಚು ವೆಚ್ಚಗಳಾಗಬಹುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ಸರಕಾರಿ ಕೆಲಸಗಳಲ್ಲಿ ಜಯ ಪ್ರಾಪ್ತಿಯಾಗುವುದು. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುವುದು. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಲಭ್ಯವಾಗಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಸ್ಥಾನ ಪಲ್ಲಟ ಭೀತಿಯಿದೆ. ದುಡುಕಿ ಮಾತನಾಡಿ ಇನ್ನೊಬ್ಬರ ಮನ ನೋಯಿಸದಿರಿ. ತಾಳ್ಮೆಯಿಂದಿರುವುದು ಅಗತ್ಯ.

ಕನ್ಯಾ: ಕುಟುಂಬ ಸದಸ್ಯರೊಂದಿಗೆ ದೂರ ಸಂಚಾರ ಮಾಡುವಿರಿ. ಈ ಸಂದರ್ಭದಲ್ಲಿ ಕಳ್ಳತನದ ಭೀತಿಯಿದ್ದು, ಎಚ್ಚರಿಕೆ ವಹಿಸಿ. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಸಂಗಾತಿಯಿಂದ ಸಂತಸ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ವೇತನ ಹೆಚ್ಚಳ ಸಾಧ್ಯತೆಯಿದೆ. ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗುವುದು. ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಡೆ ಸಂಗಾತಿಗೆ ಇಷ್ಟವಾಗದೇ ಹೋಗಬಹುದು. ತಾಳ್ಮೆಯಿಂದ ವ್ಯವಹರಿಸಿ.

ವೃಶ್ಚಿಕ: ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು. ಅಪರಿಚಿತರನ್ನು ನಂಬಿ ಹೂಡಿಕೆ ಮಾಡುವಾಗ ಎರಡು ಬಾರಿ ಯೋಚಿಸುವುದು ಉತ್ತಮ. ಅನಿರೀಕ್ಷಿತವಾಗಿ ಮನೆಗೆ ನೆಂಟರ ಆಗಮನವಾಗಲಿದೆ. ಆಸ್ತಿ ವಿವಾದಗಳಿಗೆ ಪರಿಹಾರ ದೊರಕಲಿದೆ.

ಧನು: ಕಾರ್ಯನಿಮಿತ್ತ ದೂರ ಸಂಚಾರ ಮಾಡುವಿರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಂಡುಬರಬಹುದು. ಇಷ್ಟ ಮಿತ್ರ ಕಷ್ಟದ ಸಮಯದಲ್ಲಿ ನೆರವಾಗುವಿರಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಮಕರ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಚಾಡಿ ಮಾತುಗಳು ಕೇಳಿಬಂದೀತು, ಅದಕ್ಕೆ ಕಿವಿಗೊಡಬೇಕಾಗಿಲ್ಲ. ದಾಯಾದಿಗಳು ನಿಮ್ಮ ಏಳಿಗೆಗೆ ಅಸೂಯೆಪಡುವರು. ಮೌನವೇ ಎಲ್ಲದಕ್ಕೂ ಉತ್ತರವಾಗಲಿ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗಾವಕಾಶದ ಯೋಗವಿದೆ.

ಮೀನ: ಸಹೋದರರ ವಿವಾಹ ಪ್ರಯತ್ನಕ್ಕೆ ಕೈಜೋಡಿಸುವಿರಿ. ನೂತನ ದಂಪತಿಗಳಲ್ಲಿ ವಿರಸ ಮೂಡಬಹುದು. ಮಹಿಳಾ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವಾಗಿರಬಹುದು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಬಂಡವಾಳ ಹೂಡಿಕೆಗೆ ಸಕಾಲ.

Share this Story:

Follow Webdunia kannada

ಮುಂದಿನ ಸುದ್ದಿ

ದಾರಿದ್ರ್ಯ ಲಕ್ಷ್ಮೀ ಮನೆಯೊಳಗೆ ಪ್ರವೇಶ ಮಾಡಿದ್ದಾಳಾ? ಇಲ್ಲವೋ? ಎಂಬುದನ್ನು ಈ ಸೂಚನೆಗಳಿಂದ ತಿಳಿಯಿರಿ