Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 20 ಸೆಪ್ಟಂಬರ್ 2019 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ಅಡಚಣೆಗಳು ಕಂಡುಬರಲಿದೆ. ನಿಮ್ಮ ಮನಸ್ಸಿಗೆ ವಿರುದ್ಧವಾದ ಕೆಲಸಗಳನ್ನು ಬಲವಂತವಾಗಿ ಮಾಡಬೇಕಾಗುತ್ತದೆ. ಸ್ತ್ರೀಯರಿಗೆ ಸಾಂಸಾರಿಕವಾಗಿ ಶುಭಫಲಗಳಿವೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಕೃಷಿಕರಿಗೆ ಅಂದುಕೊಂಡ ಕೆಲಸಗಳು ನೆರವೇರಿ ನಿವ್ವಳ ಲಾಭ ಕೈಗೆ  ಬರಲಿವೆ. ಆದಾಯಕ್ಕೆ ತೊಂದರೆಯಾಗದು. ಆದರೆ ಖರ್ಚು ವೆಚ್ಚಗಳು ಅಧಿಕವಾಗುವುದು. ಸಾಂಸಾರಿಕವಾಗಿ ದಂಪತಿಗಳಲ್ಲಿ ಮನಸ್ತಾಪವಾಗದಂತೆ ಎಚ್ಚರವಹಿಸಬೇಕು.

ಮಿಥುನ: ಇಂದು ನೀವು ಎಷ್ಟು ಮೌನವಾಗಿರುತ್ತೀರೋ ಅಷ್ಟು ಒಳ್ಳೆಯದು. ದುಡುಕಿ ಮಾತನಾಡಿ ಸಂಬಂಧದಲ್ಲಿ ತೊಂದರೆ ತಂದುಕೊಳ್ಳುವಿರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಸಾಲಗಾರರಿಂದ ಮುಕ್ತಿ ಸಿಗಲಿದೆ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಹೊಸ ವ್ಯವಹಾರಗಳು ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಸಕಾಲ. ಸಂಗಾತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆಯಿರುವುದು.

ಸಿಂಹ: ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯ ಮಾಡುವಿರಿ. ಸರಕಾರಿ ಉದ್ಯೋಗಿಗಳಿಗೆ ಬಡ್ತಿ ಯೋಗವಿದೆ. ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ ಕಾಣುವಿರಿ. ಮನಸ್ಸಿನ  ನೆಮ್ಮದಿಗೆ ಭಂಗ ತರುವ ಘಟನೆಗಳು ಸಂಭವಿಸೀತು. ತಾಳ್ಮೆ ಕಳೆದುಕೊಳ್ಳಬೇಡಿ.

ಕನ್ಯಾ: ಪತಿ-ಪತ್ನಿಯರ ಹೊಂದಾಣಿಕೆ ಉತ್ತಮವಾಗಿರಲಿದ್ದು, ಸುಮಧುರ ಕ್ಷಣ ಕಳೆಯುವಿರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗುವುದರಿಂದ ಅಂದುಕೊಂಡ ಕೆಲಸಗಳಿಗೆ ವಿಘ‍್ನಗಳು ಎದುರಾಗಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ತುಲಾ: ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಯೋಗವಿದೆ. ಆರ್ಥಿಕವಾಗಿ ಲಾಭ ಕಂಡುಬರಲಿದೆ. ದೈವಾನುಕೂಲದಿಂದ ಮನೆಯಲ್ಲೂ ನೆಮ್ಮದಿಯ ವಾತಾವರಣವಿರುವುದು. ದಿನದಂತ್ಯಕ್ಕೆ ಮತ್ತಷ್ಟು ಶುಭಫಲವಿದೆ.

ವೃಶ್ಚಿಕ: ದೈವಾನುಕೂಲ ನಿಮಗಿಂದ ಕೊಂಚ ಕಡಿಮೆ. ಹೀಗಾಗಿ ಅಂದುಕೊಂಡ ಕಾರ್ಯಗಳಿಗೆ ವಿಘ್ನ,  ಅಡಚಣೆಗಳು ತೋರಿಬಂದೀತು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ. ಮುಂದೆ ಗೃಹ ವಾಹನಾದಿ ಲಾಭಗಳಿವೆ. ವ್ಯವಹಾರದಲ್ಲಿ ಎಚ್ಚರಿಕೆಯಿರಲಿ.

ಧನು: ಸಾಂಸಾರಿಕವಾಗಿ ಸಂತಸದ ಕ್ಷಣ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುವುದು. ಮಕ್ಕಳಿಂದ ಸಂತಸ ಸಿಗುವುದು. ಆದರೆ ದೇಹಾರೋಗ್ಯ ಏರುಪೇರಾಗಬಹುದು. ಅನಿರೀಕ್ಷಿತವಾಗಿ ಕೆಲವು ಖರ್ಚು ವೆಚ್ಚಗಳು ಎದುರಾಗಬಹುದು.

ಮಕರ: ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ವ್ಯವಹಾರದಲ್ಲಿ ಏಳಿಗೆ ಕಂಡುಬರುವುದು. ಆರ್ಥಿಕವಾಗಿ ಸ್ಥಿತಿ ಗತಿ ಸುಧಾರಿಸುವುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪಗಳಾದಂತೆ ಎಚ್ಚರ ವಹಿಸಿ.

ಕುಂಭ: ಸಂಗಾತಿಯ ಮನೋಕಾಮನೆಗಳನ್ನು ಪೂರೈಸಲು ಶ್ರಮಪಡಬೇಕಾಗುತ್ತದೆ. ಕೆಲಸ ಕಾರ್ಯದಲ್ಲಿ ವಿಳಂಬ ಕಂಡುಬಂದೀತು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಧಾರ್ಮಿಕ ಕೆಲಸಗಳಿಗೆ ಧನವಿನಿಯೋಗ ಮಾಡುವಿರಿ.

ಮೀನ: ಉದರ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು ಸಾಧಿಸುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಸಮಸ್ಯೆಗಳೆಲ್ಲಾ ದೂರವಾಗಲು ತುಳಸಿ ಎಲೆಯಿಂದ ಹೀಗೆ ಮಾಡಿ