ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 23 ಸೆಪ್ಟಂಬರ್ 2019 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ದೂರಾಲೋಚನೆಯ ಚಿಂತನೆಗಳು ಕಷ್ಟಕಾಲದಲ್ಲಿ ನಿಮ್ಮ ನೆರವಿಗೆ ಬರಲಿದೆ. ವಿರೋಧಿಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ. ಉದ್ಯೋಗದಲ್ಲಿ ಕಾರ್ಯದೊತ್ತಡವಿರಲಿದೆ. ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ವೃಷಭ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಮಾತಿನ ಮೇಲೆ ನಿಗಾ ಇರಲಿ. ಆರೋಗ್ಯದಲ್ಲಿ ಬಗ್ಗೆ ಕಾಳಜಿವಹಿಸಬೇಕು.

ಮಿಥುನ: ವೃತ್ತಿ ರಂಗದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗದೇ ಬೇಸರವಾಗಬಹುದು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ. ಗೆಳೆಯರ ಸಹಾಯ ಸಿಗುವುದು. ಮಹಿಳೆಯರೊಂದಿಗೆ ಅತೀ ಸಲುಗೆ ಅಪವಾದಕ್ಕೆ ದಾರಿಯಾದೀತು. ಆರ್ಥಿಕ ವ್ಯವಹಾರದ ಬಗ್ಗೆ ಎಚ್ಚರ.

ಕರ್ಕಟಕ: ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ನಿಮ್ಮ ಕೈ ಮೇಲಾಗುವುದು. ಆದಾಯವಿದ್ದಷ್ಟೇ ಖರ್ಚೂ ಇರುವುದು. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಇಷ್ಟಮಿತ್ರರ ಭೇಟಿ ಸಾಧ‍್ಯತೆಯಿದೆ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ವಿದ್ಯಾರ್ಥಿಗಳಿಗೆ ಶುಭವಾಗಲಿದೆ.

ಸಿಂಹ: ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳಿಗೆ ಸಜ್ಜಾಗಬೇಕಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯಾರನ್ನೂ ಅತಿಯಾಗಿ ನಂಬಿ ವ್ಯವಹಾರಕ್ಕಿಳಿಯಬೇಡಿ. ವ್ಯಾಪಾರ ವ್ಯವಹಾರದಲ್ಲಿ ಸಮಾಧಾನಕರ ಸ್ಥಿತಿಯಿರಲಿದೆ.

 
ಕನ್ಯಾ: ಉದ್ಯೋಗದಲ್ಲಿ ಮುನ್ನಡೆ ತೋರಿಬಂದು ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ನಿರಾಸೆಯಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಖರ್ಚಿನ ಬಗ್ಗೆ ಕಡಿವಾಣ ಹಾಕಬೇಕಾಗುತ್ತದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಸರಕಾರಿ ಕೆಲಸಗಳಲ್ಲಿ ಮುನ್ನಡೆಯಿರಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಬರಬಹುದು. ಕಾಳಜಿ ಅಗತ್ಯ.

ವೃಶ್ಚಿಕ: ದುಡುಕು ಮಾತಿನಿಂದ ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟುಮಾಡುವಿರಿ. ಸಂಬಂಧಗಳನ್ನು ಕಾಯ್ದುಕೊಳ್ಳಬೇಕಾದ ಅನಿವಾರ್ಯತೆಯಿದೆ. ಸಾಮಾಜಿಕ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗವಾಗುವುದು. ಸಾಂಸಾರಿಕವಾಗಿ ನೆಮ್ಮದಿ.

ಧನು: ನಿರುದ್ಯೋಗಿಗಳಿಗೆ ಮನಸ್ಸಿಗೆ ಹಿಡಿಸಿದ ಉದ್ಯೋಗ ಸಿಗಲಿದೆ. ಉದ್ಯೋಗಸ್ಥರು ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವರು. ಅಂದುಕೊಂಡ ಕಾರ್ಯ ನೆರವೇರಿಸಲು ಆಲಸ್ಯತನ ಕಾಡುವುದು. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಅರೋಗ್ಯದಲ್ಲಿ ಸುಧಾರಣೆಯಿರಲಿದೆ.

ಮಕರ: ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಕ್ಷುಲ್ಲುಕ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ದುಡುಕು ನಿರ್ಧಾರಗಳಿಂದ ಕಾರ್ಯ ಹಾಳು ಎಂಬುದನ್ನು ಮರೆಯಬೇಡಿ. ಕುಟುಂಬ ಸಮೇತ ಕಿರು ಪ್ರವಾಸ ಕೈಗೊಳ್ಳುವಿರಿ. ನೂತನ ದಂಪತಿಗಳಲ್ಲಿ ವಿರಸ ಮೂಡಬಹುದು. ಹೊಸ ಮಿತ್ರರ ಭೇಟಿಯಾಗುವಿರಿ. ವ್ಯವಹಾರದಲ್ಲಿ ಎಚ್ಚರ.

ಮೀನ: ನಿರುದ್ಯೋಗಿಗಳಿಗೆ ಉತ್ತಮ  ಅವಕಾಶಗಳು ಹುಡುಕಿಕೊಂಡು ಬರಲಿವೆ, ಬಳಸಿಕೊಳ್ಳುವ ಜಾಣತನ ಪ್ರದರ್ಶಿಸಬೇಕು. ಹಿರಿಯರ ಸಲಹೆ ಸೂಚನೆಗಳನ್ನು ಅಲಕ್ಷಿಸಬೇಡಿ. ಮಹಿಳೆಯರಿಗೆ ಇಂದು ಕೈ ಹಿಡಿದ ಕಾರ್ಯಗಳು ಸುಗಮವಾಗಿ ನೆರವೇರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments