Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 25 ಸೆಪ್ಟಂಬರ್ 2019 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ವ್ಯಾಪಾರ ವ್ಯವಹಾರದಲ್ಲಿ ಅಧಿಕ ಲಾಭವಾಗಲಿದೆ. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಯಾವುದೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೂ ಯಶಸ್ಸು ಕಾಣುವಿರಿ. ವಿದ್ಯಾರ್ಥಿಗಳೂ ಮುನ್ನಡೆ ಸಾಧಿಸುವರು.

ವೃಷಭ: ಮನೆಯಲ್ಲಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಿ ತುಸು ಸಮಾಧಾನಕರ ವಾತಾವರಣವಿರುವುದು. ಅನಿರೀಕ್ಷಿತ ಖರ್ಚು ವೆಚ್ಚಗಳು ಬಂದೊದಗಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು.

ಮಿಥುನ: ಆರ್ಥಿಕವಾಗಿ ನಾನಾ ರೀತಿಯಲ್ಲಿ ಖರ್ಚು ವೆಚ್ಚಗಳು ಕಂಡುಬರಲಿವೆ. ದುರ್ಜನರ ಸಂಗದಿಂದ ಆದಷ್ಟು ದೂರವಿರುವುದೇ ಉತ್ತಮ. ಪ್ರೇಮಿಗಳ ವಿಚಾರ ಮನೆಯವರ ಮುಂದೆ ಪ್ರಕಟವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ನಿಮ್ಮ ವ್ಯಾಪಾರ  ವ್ಯವಹಾರದಲ್ಲಿ ಸಾಕಷ್ಟು ಅಭಿವೃದ್ಧಿ ತೋರಿಬರಲಿದ್ದು, ಉತ್ತಮ ಆದಾಯ ಗಳಿಸುವಿರಿ. ಆದರೆ ಅತಿಯಾದ ವಿಶ್ವಾಸದಿಂದ ತೊಂದರೆಗೆ ಸಿಲುಕಿಕೊಳ್ಳಬೇಕಾಗಬಹುದು. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.

ಸಿಂಹ: ಅನಿರೀಕ್ಷಿತ ರೂಪದಲ್ಲಿ ಧನಲಾಭವಾಗಲಿದೆ. ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಸಂಗಾತಿಯ ಮನಸ್ಸು ಅರ್ಥಮಾಡಿಕೊಂಡು ನಡೆಯಬೇಕಿದೆ. ದೇಹಾರೋಗ್ಯದ ಸಮಸ್ಯೆಗಳು ಕಂಡುಬರಲಿವೆ. ಎಚ್ಚರಿಕೆ ಅಗತ್ಯ.

 
ಕನ್ಯಾ: ನಿಮ್ಮ ಆಲಸ್ಯತನ ಮನೋಭಾವದಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗುವುದು. ಉದ್ಯೋಗದಲ್ಲಿ ಕಾರ್ಯದೊತ್ತಡವಿದ್ದು, ಮೇಲಧಿಕಾರಿಗಳ ಕಿರಿ ಕಿರಿ ಅನುಭವಿಸಬೇಕಾಗುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ.

ತುಲಾ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವೈವಾಹಿಕ ಸಂಬಂಧಗಳಲ್ಲಿ ಮುನ್ನಡೆ. ನಿಮ್ಮ ಆತ್ಮ ಸ್ಥೈರ್ಯ ಕಷ್ಟ ಕಾಲದಲ್ಲಿ ನೆರವಿಗೆ ಬರಲಿದೆ. ದೇವತಾ ದರ್ಶನ ಪಡೆಯುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ‍್ಯತೆ. ಕಿರು ಸಂಚಾರ ಯೋಗವಿದೆ.

ವೃಶ್ಚಿಕ: ನೀವು ಮಾಡುವ ಸಣ್ಣ ತಪ್ಪಿಗೆ ದೊಡ್ಡ ಬೆಲೆ ತೆರಬೇಕಾದೀತು. ನಿವಾರಣೆಯಾಗಿದೆ ಎಂದು ಅಂದುಕೊಂಡಿದ್ದ ಸಮಸ್ಯೆಗಳು ಮತ್ತೆ ಪ್ರತ್ಯಕ್ಷವಾಗಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ.

ಧನು: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ಹೆಚ್ಚಾಗುವುದು. ಹಾಗಿದ್ದರೂ ನಿಮ್ಮ ನಿಲುವು ಬದಲಿಸದೇ ಇರುವುದು ಉತ್ತಮ. ನಿಮಗೆ ಆಸಕ್ತಿ ಇರುವ ಕೆಲಸಗಳನ್ನು ಮಾಡುತ್ತಿರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ವಿದ್ಯಾರ್ಥಿಗಳಿಗೆ ಶುಭ ಫಲವಿದೆ.

ಮಕರ: ಹೊಸ ಗೆಳೆಯರನ್ನು ಸಂಪಾದಿಸುವಿರಿ. ಆರ್ಥಿಕ ಕ್ಷೇತ್ರದಲ್ಲಿ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಹೊಸ ವಸ್ತುಗಳ ಖರೀದಿಗೆ ಮುಂದಾಗುವಿರಿ. ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಹಿರಿಯರ ಸಲಹೆ ಪಾಲಿಸಿ. ಆರೋಗ್ಯದ ಬಗ್ಗೆ ಎಚ್ಚರವಾಗಿರಿ.

ಕುಂಭ: ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸುವಿರಿ. ವಾಗ್ವಾದಗಳಿಂದ ದೂರವಿದ್ದಷ್ಟು ಉತ್ತಮ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಾಹನ ಸವಾರರು ಎಚ್ಚರವಾಗಿರಬೇಕು.

ಮೀನ: ಸಾಂಸಾರಿಕ ಸಂಬಂಧಗಳಲ್ಲಿ ಇದ್ದ ಮುನಿಸು ಮರೆಯಾಗಿ ನೆಮ್ಮದಿ ಮೂಡುವುದು. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ. ನಿರುದ್ಯೋಗಿಗಳಿಗೆ ಹಲವು ಉದ್ಯೋಗಾವಕಾಶಗಳು ಒದಗಿ ಬರಲಿವೆ. ಗೃಹಿಣಿಯರಿಗೆ ವಸ್ತ್ರ, ಧನ ಲಾಭವಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments