Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 28 ಸೆಪ್ಟಂಬರ್ 2019 (08:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರತಿಭೆ ಸಾಬೀತುಪಡಿಸಲು ಹಲವು ಅವಕಾಶಗಳು ಹುಡುಕಿಕೊಂಡು ಬರಲಿವೆ. ಅದನ್ನು ಬಳಸಿಕೊಳ್ಳುವ ಜಾಣತನ ಬೆಳೆಸಿಕೊಳ್ಳಬೇಕು. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗುವುದು. ದೂರ ಸಂಚಾರದಲ್ಲಿ ಜಾಗ್ರತೆಯಿರಲಿ.

ವೃಷಭ: ಕೆಲಸದ ಒತ್ತಡ ಅಧಿಕವಾಗುವುದು. ನಿಮ್ಮ ಏಳಿಗೆಗೆ ಹಿತಶತ್ರುಗಳೂ ಅಸೂಯೆಪಡುವರು. ಆದರೂ ಎಷ್ಟೇ ದುಡಿದರೂ ತೃಪ್ತಿಯಿಲ್ಲದ ಭಾವ ಕಾಡಲಿದೆ. ಆಲಸ್ಯತನ, ಗೊಂದಲದ ಮನಸ್ಥಿತಿಯಿಂದಾಗಿ ಅಂದುಕೊಂಡ ಕೆಲಸಗಳು ನಿಧಾನವಾಗುವುದು.

ಮಿಥುನ: ಬಂಧು ಬಳಗದವರಿಗೆ ನಿಮ್ಮ ನಿರ್ಧಾರಗಳು ಇಷ್ಟವಾಗದೇ ಹೋಗಬಹುದು. ಆದರೆ ವಾಗ್ವಾದಕ್ಕಿಳಿಯಬೇಡಿ. ದುಡುಕು ವರ್ತನೆ ತೋರದಿರಿ. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮಿಶ್ರಫಲ ಸಿಗಲಿದೆ.

ಕರ್ಕಟಕ: ಹಲವಾರು ಬೆಳವಣಿಗೆಗಳು ನಡೆದು ಮನಸ್ಸು ಗೊಂದಲದ ಗೂಡಾಗುವುದು. ಹಾಗಿದ್ದರೂ ವೃತ್ತಿ ಜೀವನದಲ್ಲಿ ನಿಮ್ಮ ಏಳಿಗೆಯನ್ನು ಯಾರಿಂದಲೂ ತಡೆಯಲು ಸಾಧ‍್ಯವಿಲ್ಲ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯುವಿರಿ.

ಸಿಂಹ: ಆಪ್ತರೊಂದಿಗೆ ಸಹನೆಯಿಂದ ನಡೆದುಕೊಳ್ಳುವುದು ಮುಖ್ಯ. ಕೋಪದ ಕೈಗೆ ಬುದ್ಧಿ ಕೊಡಬೇಡಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಕೊರತೆ ಕಂಡುಬರುವುದು. ಉದರ ಸಂಬಂಧೀ ಆರೋಗ್ಯದ ಕಡೆಗೆ ಕಾಳಜಿ ವಹಿಸಿ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಾಗದು.

 
ಕನ್ಯಾ: ಆರ್ಥಿಕವಾಗಿ ಹಲವು ರೀತಿಯಲ್ಲಿ ಖರ್ಚು ವೆಚ್ಚಗಳು ಎದುರಾಗಲಿವೆ. ಹೊಸ ವ್ಯವಹಾರಗಳಿಗೆ ಹೂಡಿಕೆ ಮಾಡುವ ನಿಮ್ಮ ಆಲೋಚನೆ ಅರ್ಧಕ್ಕೇ ನಿಲ್ಲುವುದು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಗಮನಕೊಡಿ. ಕಾರ್ಯನಿಮಿತ್ತ ಕಿರು ಸಂಚಾರ ಸಾಧ್ಯತೆ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಅಧಿಕ ಓಡಾಟದಿಂದ ದೇಹಾಯಾಸವಾದೀತು. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದಂತೇ ಉತ್ತಮ ಫಲ ದೊರೆಯುವುದು. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಶ್ಚಿಕ: ವ್ಯವಹಾರದಲ್ಲಿ ಬರುವ ಕಷ್ಟ ನಷ್ಟಗಳನ್ನು ಎದುರಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ಆದಾಯದಷ್ಟೇ ಖರ್ಚೂ ಕಂಡುಬರಲಿವೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ. ಉದ್ಯೋಗ ನಿಮಿತ್ತ ಕಿರು ಸಂಚಾರ ಸಾಧ್ಯತೆ.

ಧನು: ಅನಿರೀಕ್ಷಿತವಾಗಿ ಅಚ್ಚರಿಯ ವಾರ್ತೆಗಳು ಕೇಳಿಬರುವುದು. ಧಾರ್ಮಿಕ ಕ್ಷೇತ್ರಗಳಿಗೆ ಸಂದರ್ಶನ ಯೋಗವಿದೆ. ದೂರ ಸಂಚಾರದಿಂದ ದೇಹಾಯಾಸವಾದೀತು. ಆಪ್ತರ ಜತೆ ಮಾತನಾಡುವಾಗ ದುಡುಕಬೇಡಿ. ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ.

ಮಕರ: ಹಿತಶತ್ರುಗಳಿಂದ ನಿಮ್ಮ ಕೆಲಸಗಳಿಗೆ ತೊಂದರೆಯಾಗಬಹುದು. ನಿಮ್ಮ ಕ್ರಿಯಾಶೀತಲೆಯಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗುವುದು. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗುವುದು. ವೃತ್ತಿ ಬದಲಾವಣೆಗೆ ಇದು ಸಕಾಲ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿ, ಆತಂಕಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆಯೊಂದಿಗೆ ಇಂದಿನ ದಿನ ಆರಂಭಿಸಿದರೆ ಶುಭವಾಗಲಿದೆ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಕೌಟುಂಬಿಕವಾಗಿ ಯಾರನ್ನೂ ನಂಬದ ಸ್ಥಿತಿ.

ಮೀನ: ಆಕಸ್ಮಿಕ ಧನ ಹಾನಿ, ಮಾನ ಹಾನಿ ಸಂಭವ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಮಹಿಳಾ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments