Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 29 ಸೆಪ್ಟಂಬರ್ 2019 (08:26 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೂರ ಸಂಚಾರದಿಂದ ಕಾರ್ಯಸಿದ್ಧಿ. ವೈಯಕ್ತಿಕವಾಗಿ ಆರೋಗ್ಯದ ಮೇಲೆ ಕಾಳಜಿ ಇರಲಿ. ಸಂಗಾತಿಯೊಂದಿಗೆ ಸಾಮರಸ್ಯದ ಕೊರತೆ ಕಾಡುವುದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ಧಾರ್ಮಿಕ ಕಾರ್ಯಳಿಗಾಗಿ ಧನವಿನಿಯೋಗವಾಗಲಿದೆ.

ವೃಷಭ: ಅನಗತ್ಯವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಹಣಕಾಸಿನ ಮುಗ್ಗಟ್ಟಿನ ಪರಿಸ್ಥಿತಿ ಎದುರಿಸಲು ಇಂದೇ ಸಜ್ಜಾಗಿ. ದೂರ ಪ್ರಯಾಣದಲ್ಲಿ ವಿಘ್ನಗಳ ಸಾಧ್ಯತೆಯಿದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ.

ಮಿಥುನ: ಹಳೆ ಮಿತ್ರರ ಭೇಟಿ ಮನಸ್ಸಿಗೆ ಖುಷಿ ಕೊಡುವುದು. ಕಷ್ಟದ ಸಮಯದಲ್ಲಿ ಪ್ರೀತಿ ಪಾತ್ರರಿಂದ ಸಹಾಯ ಸಿಗುವುದು. ಹಿರಿಯರ ಆರೋಗ್ಯದ ಮೇಲೆ ನಿಗಾ ವಹಿಸಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಪ್ರೇಮಿಗಳ ವಿಚಾರ ಮನೆಯವರೆದುರು ಬಹಿರಂಗವಾಗಲಿದೆ. ವಾಹನ, ಭೂಮಿ ಖರೀದಿಗೆ ಇದು ಸಕಾಲ. ಆದರೆ ವಿಶ್ವಾಸ ಘಾತುಕರು ಇರುತ್ತಾರೆ, ಎಚ್ಚರಿಕೆಯಿಂದಿರಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ.

ಸಿಂಹ: ಕಾರ್ಮಿಕ ವರ್ಗದವರಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿಯಾಗಬಹುದು. ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ಗಳಿಸಬಹುದು. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

 
ಕನ್ಯಾ: ಕೋರ್ಟು ಕಚೇರಿ ವ್ಯವಹಾರಗಳು ನಿಮ್ಮ ಪರವಾಗಿ ಬಂದು ನೆಮ್ಮದಿಯಾಗಲಿದೆ. ಕಾರ್ಯನಿಮಿತ್ತ ದೂರ ಪ್ರಯಾಣ ಮಾಡುವಿರಿ. ದೇವತಾ ದರ್ಶನ ಭಾಗ್ಯವಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಯಾವುದಕ್ಕೂ ಸರಿಯಾಗಿ ಆಲೋಚಿಸಿ ಹೆಜ್ಜೆಯಿಡುವುದು ಮುಖ್ಯ.

ತುಲಾ: ಕೌಟುಂಬಿಕವಾಗಿ ಕೆಲವೊಂದು ಬದಲಾವಣೆಗಳಾಗಲಿವೆ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಕಂಡುಬರಬಹುದು. ಸ್ವ ಉದ್ಯೋಗಿಗಳು ಲಾಭ ಗಳಿಸುವರು. ಅವಿವಾಹಿತರಿಗೆಕ ಕಂಕಣ ಬಲ ಕೂಡಿಬರುವುದು. ಬಂಧು ಬಳಗದವರ ಚಾಡಿ ಮಾತುಗಳನ್ನು ಅಲಕ್ಷಿಸಿ.

ವೃಶ್ಚಿಕ: ಹಿರಿಯರ ಸಲಹೆಗಳನ್ನು ಪಾಲಿಸಿದರೆ ಮನೆಯಲ್ಲಿ ನೆಮ್ಮದಿ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ, ಓಡಾಟ ನಡೆಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯ ವಿಶ್ವಾಸ ಗಳಿಸುವಿರಿ. ವಾಹನ ಚಾಲಕರಿಗೆ ಅಪಘಾತ ಭಯವಿದ್ದು, ಎಚ್ಚರಿಕೆಯಿಂದಿರಿ.

ಧನು: ಪ್ರೀತಿ ಪಾತ್ರರೊಂದಿಗೆ ಪ್ರವಾಸ, ದೂರ ಸಂಚಾರ ಸಾಧ‍್ಯತೆಯಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಕಾರ್ಯರಂಗದಲ್ಲಿ ದುಡುಕದೇ ಮುಂದುವರಿಯಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಋಣಾತ್ಮಕ ಚಿಂತನೆಗಳು ನಿಮ್ಮನ್ನು ಹೊಸ ನಿರ್ಧಾರ ತೆಗೆದುಕೊಳ್ಳಲು ಅಡ್ಡಿ ಮಾಡುವುದು. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸುವಿರಿ. ಸಂಗಾತಿ ಪ್ರೀತಿ ಆದರಗಳಿಗೆ ಪಾತ್ರರಾಗುವಿರಿ. ಚಿಂತೆ ಬೇಡ.

ಕುಂಭ: ದೂರ ಸಂಚಾರದಿಂದ ದೇಹಾಯಾಸವಾಗುವುದು. ಮಕ್ಕಳ ವಿರೋಧ ಕಟ್ಟಿಕೊಳ್ಳುವಿರಿ. ಸಂಗಾತಿಯ ನಿರ್ಧಾರಗಳಿಗೆ ತಲೆದೂಗಬೇಕಾಗುತ್ತದೆ. ದೇವತಾ ಕಾರ್ಯಗಳಿಗಾಗಿ ಖರ್ಚು ವೆಚ್ಚಗಳಾಗುವುದು. ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು.

ಮೀನ: ಹಿರಿಯರ ಹಿತ ವಚನಗಳು ಪಥ್ಯವಾಗದೇ ಹೋಗಬಹುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಸಂಗಾತಿಯ ಮನೋಕಾಮನೆ ಪೂರೈಸುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ. ಮಕ್ಕಳಿಂದ ಸಂತಸದ ವಾರ್ತೆ ಆಲಿಸುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಪಶಕುನವೆನ್ನುವ ಕಾಗೆ ಕೆಲವು ಶುಭಶಕುನವನ್ನೂ ನೀಡುತ್ತದೆಯಂತೆ