Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 30 ಸೆಪ್ಟಂಬರ್ 2019 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಕ್ಕಳ ಭವಿಷ್ಯದ ನಿಟ್ಟಿನಿಂದ ಹೊಸ ಯೋಜನೆ ಕೈಗೆತ್ತಿಕೊಳ್ಳುವಿರಿ. ಹಲವು ವಿಘ್ನಗಳು ಎದುರಾದರೂ ಕಾರ್ಯದಲ್ಲಿ ಅಂತಿಮ ಜಯ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿರಿ.

ವೃಷಭ: ಎಷ್ಟೋ ದಿನದಿಂದ ಅಂದುಕೊಂಡ ಕಾರ್ಯಗಳು ಇಂದು ನೆರವೇರುವುದು. ವ್ಯವಹಾರಿಕವಾಗಿ ಸಾಕಷ್ಟು ಲಾಭ ಗಳಿಸುವಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಕಾಣುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ನೀವು ಪ್ರಯತ್ನಪಡುತ್ತಿದ್ದ ಕೆಲಸಗಳು ಫಲಗೂಡಲಿದ್ದು, ಮನಸ್ಸಿಗೆ ಸಂತಸವಾಗುವುದು. ಹಳೆಯ ಮಿತ್ರರ ಭೇಟಿ ಸಂತೋಷ ಇಮ್ಮಡಿಗೊಳಿಸುವುದು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಮಿತ್ರರಿಂದ ಪ್ರಶಂಸೆಗೊಳಗಾಗುವಿರಿ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಮಹಿಳಾ ಉದ್ಯೋಗಿಗಳು ಮುನ್ನಡೆ ಕಾಣುವರು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಸಿಂಹ: ಇಂದು ನಿಮ್ಮ ಮಾತಿನ ಮೇಲೆ ಹಿಡಿತವಿಟ್ಟುಕೊಳ್ಳುವುದು ಮುಖ್ಯ. ದುಡುಕಿ ಮಾತನಾಡಿ ಸಂಗಾತಿ ಅಥವಾ ಪ್ರೀತಿ ಪಾತ್ರರ ಮನನೋಯಿಸುತ್ತೀರಿ. ತಾಳ್ಮೆಯಿಂದಿರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

 
ಕನ್ಯಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಏರ್ಪಾಟು ಮಾಡುವಿರಿ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ್ಯತೆ.

ತುಲಾ: ಎಷ್ಟೇ ಮಾನಸಿಕ ಬೇಸರವಿದ್ದರೂ ದೇವರ ಪ್ರಾರ್ಥನೆಯಿಂದ ನೆಮ್ಮದಿ ಕಾಣುವಿರಿ. ಹೊಸ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ಸಾಲಗಾರರಿಂದ ಮುಕ್ತಿ ಸಿಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ವೃಶ್ಚಿಕ: ಆಸ್ತಿ, ಮನೆ, ವಾಹನ ಖರೀದಿ ಯೋಗವಿದೆ. ಆದರೆ ಅಪರಿಚಿತರನ್ನು ನಂಬಿ ಹೂಡಿಕೆ ಮಾಡುವಾಗ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆಯಿಂದಿರುವುದು ಮುಖ್ಯ. ಸಂಗಾತಿಯ ಪ್ರೀತಿಗೆ ಪಾತ್ರರಾಗುವಿರಿ. ಇಷ್ಟಭೋಜನ ಯೋಗವಿದೆ.

ಧನು: ಸಹೋದರರ ಸಂಬಂಧಿಗಳೊಂದಿಗೆ ಆಸ್ತಿ ವಿಚಾರವಾಗಿ ಕಿರಿ ಕಿರಿ ಉಂಟಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಉದ್ಯೋಗ ನಿಮಿತ್ತ ದೂರ ಸಂಚಾರ ಸಾಧ‍್ಯತೆ. ವಿದ್ಯಾರ್ಥಿಗಳಿಗೆ ಏಕಾಗ್ರತೆ ಕೊರತೆ ಉಂಟಾಗಬಹುದು.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಂದ  ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದಿರುವುದು ಮುಖ್ಯ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗದ ಯೋಗವಿದೆ. ಪ್ರಯತ್ನಬಲವಿದ್ದರೆ ಫಲಿತಾಂಶ ಸಿಗುವುದು. ಆರೋಗ್ಯದಲ್ಲಿ ಕಾಳಜಿಯಿರಲಿ.

ಕುಂಭ: ಇಷ್ಟಮಿತ್ರರ ಭೇಟಿ, ಪ್ರವಾಸ ಯೋಗವಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಆದರೆ ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಎದುರಾಗಬಹುದು. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಮಕ್ಕಳಿಂದ ಸಂತಸ.

ಮೀನ: ಸಂಗಾತಿಯ ಮನೋಕಾಮನೆ ಪೂರೈಸಲು ಸಾಕಷ್ಟು ಖರ್ಚು ವೆಚ್ಚಗಳನ್ನು ಮಾಡಬೇಕಾಗುತ್ತದೆ. ನಿಮ್ಮ ಕೆಲವೊಂದು ನಿರ್ಧಾರಗಳಿಂದ ಪ್ರೀತಿ ಪಾತ್ರರಲ್ಲಿ ಅಸಮಾಧಾನ ಮೂಡಿಸಬಹುದು. ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ದೇವತಾ ದರ್ಶನ ಪಡೆಯುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments