Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 1 ಅಕ್ಟೋಬರ್ 2019 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೇಹಾರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಹಿತಶತ್ರುಗಳ ಬಗ್ಗೆ ಎಚ್ಚರದಿಂದಿರಬೇಕು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.  ಸರಕಾರಿ ಕೆಲಸದಲ್ಲಿ ವಿಘ್ನಗಳು ಎದುರಾಗಬಹುದು. ದಿನದಂತ್ಯಕ್ಕೆ ಶುಭ ಸುದ್ದಿ.

ವೃಷಭ: ಹಿರಿಯರಿಗೆ ದೇವತಾ ಕಾರ್ಯಗಳನ್ನು ಪೂರೈಸಲು ದೇವಾಲಯ ಸಂದರ್ಶನ ನಡೆಸುವ ಭಾಗ್ಯವಿದೆ. ಸ್ವಯಂ ವೃತ್ತಿಯವರಿಗೆ ಹಿನ್ನಡೆಯ ಅಪಾಯವಿದೆ. ಆದಾಯಕ್ಕೆ ಕೊರತೆಯಿರದು. ಬಾಕಿ ಹಣ ಪಾವತಿಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರುತ್ತದೆ.

ಮಿಥುನ: ದೇವತಾ ಕಾರ್ಯಗಳಿಗೆ ಓಡಾಟ, ಖರ್ಚುವೆಚ್ಚಗಳಾಗಬಹುದು. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗುವುದು. ಚಾಡಿ ಮಾತುಗಳು ಕೇಳಿಬಂದೀತು, ಅಲಕ್ಷಿಸುವುದು ಒಳಿತು. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿಯಾಗಿ ಮನಸ್ಸಿಗೆ ಸಂತಸವಾಗುವುದು.

ಕರ್ಕಟಕ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡುವಿರಿ ಮತ್ತು ಅದರಲ್ಲಿ ಯಶಸ್ವಿಯೂ ಆಗುವಿರಿ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಜಯ ನಿಮ್ಮದಾಗುವುದು. ಸಹನೆ ಪರೀಕ್ಷಿಸುವ ಕಾಲವಿದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಿಂಹ: ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ಗಳಿಸಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಅಂದುಕೊಂಡ ಕೆಲಸ ಕಾರ್ಯ ನೆರವೇರಿಸಲು ಪರಿಶ್ರಮ ಪಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

 
ಕನ್ಯಾ: ವ್ಯವಹಾರದಲ್ಲಿ ಕಷ್ಟದಲ್ಲಿದ್ದಾಗ ಮಿತ್ರರ ನೆರವು ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಧಾರ್ಮಿಕ ಕ್ಷೇತ್ರದ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಕೌಟುಂಬಿಕವಾಗಿ ಸಂತೋಷ ಸಿಗುವುದು. ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ಮಕ್ಕಳ ಬಗ್ಗೆ ಕೇಳಿಬರುವ ಮಾತುಗಳು ಮನಸ್ಸಿಗೆ ಬೇಸರ ಕೊಡಬಹುದು. ಅಗತ್ಯ ಸಂದರ್ಭದಲ್ಲಿ ಸಹಾಯ ಸಿಗದೇ ಬೇಸರವಾಗುವುದು. ಶತ್ರುಗಳ ಕಾಟದ ನಡುವೆಯೂ ಅಂತಿಮ ಜಯ ನಿಮ್ಮದಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ವೃಶ್ಚಿಕ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ. ಅಧಿಕ ಖರ್ಚು ವೆಚ್ಚಗಳಾಗಲಿದ್ದು, ಚಿಂತೆಗೆ ಕಾರಣವಾಗಲಿದೆ. ವಿವಾಹಿತರಿಗೆ ಸಂಗಾತಿಯೊಂದಿಗೆ ಹೊಂದಾಣಿಕೆಯ ಕೊರತೆಯುಂಟಾಗುವುದು. ತಾಳ್ಮೆಯಿರಲಿ.

ಧನು: ನಾನಾ ರೀತಿಯ ಖರ್ಚು ವೆಚ್ಚಗಳು ಎದುರಾಗಲಿವೆ. ದೂರ ಸಂಚಾರದಿಂದ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಸಂತಸದ ವಾರ್ತೆ ಆಲಿಸುವಿರಿ. ಕೌಟುಂಬಿಕವಾಗಿ ತಾಳ್ಮೆ ಅಗತ್ಯ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ. ಅಂದುಕೊಂಡ ಯೋಜನೆಗಳನ್ನು ಕಾರ್ಯಗತಗೊಳಿಸಲು ಇದುವೇ ಸಕಾಲ. ಮಾನಸಿಕವಾಗಿ ಋಣಾತ್ಮಕ ಯೋಚನೆಗಳನ್ನು ದೂರವಿಡಿ.

ಕುಂಭ: ಕೌಟುಂಬಿಕ ಕಲಹಗಳಿಂದ ಮನಸ್ಸು ಬೇಸರಗೊಳ್ಳಲಿದೆ. ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವಿರಿ. ವೃತ್ತಿರಂಗದಲ್ಲಿ ಎಷ್ಟೇ ದುಡಿದರೂ ತೃಪ್ತಿಯ ಕೊರತೆ ಕಾಣಲಿದೆ. ಕೆಳಹಂತದ ನೌಕರರಿಗೆ ಬಡ್ತಿಯೋಗವಿದೆ.

ಮೀನ: ಕೃಷಿಕರಿಗೆ ಕೆಲಸ ಕಾರ್ಯದಲ್ಲಿ ವಿಘ್ನ ತೋರಿಬಂದೀತು. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯಿರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಸಂಗಾತಿಯ ಅಲಂಕಾರಿಕ ವಸ್ತುಗಳಿಗೆ ಧನವಿನಿಯೋಗ ಮಾಡುವಿರಿ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಕೇಳಿಬರುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments