Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 5 ಅಕ್ಟೋಬರ್ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಒಣ ಪ್ರತಿಷ್ಠೆಗಳಿಂದ ಪ್ರೀತಿ ಪಾತ್ರರ ಮನನೋಯಿಸುವಿರಿ. ಕಾರ್ಯಕ್ಷೇತ್ರದಲ್ಲಿ ವಿನಾಕಾರಣ ಸಮಯ ವ್ಯರ್ಥವಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಭಾಗ್ಯವಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ನಿಮ್ಮ ದುಡುಕು ಮಾತು, ಪ್ರವೃತ್ತಿಯಿಂದ ಕಾರ್ಯ ಹಾಳು. ಶುಭ ಮಂಗಲ ಕಾರ್ಯಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಸಂಸಾರದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.

ಮಿಥುನ: ಹಲವು ಅಡ್ಡಿ ಆತಂಕಗಳಿದ್ದರೂ ದೈವಾನುಕೂಲದಿಂದ ಅಂದುಕೊಂಡ ಕಾರ್ಯ ನೆರವೇರಿಸುವಿರಿ. ದಾಂಪತ್ಯದಲ್ಲಿ ವಿರಸ ಮೂಡಬಹುದು, ತಾಳ್ಮೆ ಅಗತ್ಯ. ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿದ್ದರೂ ವಂಚನೆಯ ಬಗ್ಗೆ ಎಚ್ಚರಿಕೆಯಿಂದಿರುವುದು ಅಗತ್ಯ.

ಕರ್ಕಟಕ: ನಿಮ್ಮ ಕೆಲವೊಂದು ನಿರ್ಧಾರಗಳಿಂದ ಸ್ನೇಹಿತ ವರ್ಗದವರಿಗೆ ನಿರಾಸೆಯುಂಟುಮಾಡುವಿರಿ. ವಿರಸಗಳೂ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕಿರು ಸಂಚಾರ ಸಾಧ್ಯತೆ.

ಸಿಂಹ: ಅನಿರೀಕ್ಷಿತ ರೀತಿಯಲ್ಲಿ ಅಂದುಕೊಂಡ ಕೆಲಸಗಳು ನೆರವೇರಿ ಮನಸ್ಸಿಗೆ ಖುಷಿಯಾಗುವುದು. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ತಾಳ್ಮೆ, ಸಮಾಧಾನದಿಂದ ಮುಂದುವರಿದರೆ ವೃತ್ತಿರಂಗದಲ್ಲಿ ಮುನ್ನಡೆ ಸಿಗುವುದು. ದಿನದಂತ್ಯಕ್ಕೆ ಸಂತಸದ ವಾರ್ತೆಯಿದೆ.

 
ಕನ್ಯಾ: ಉದ್ಯೋಗಿಗಳಿಗೆ ವರ್ಗಾವಣೆಯ ಭೀತಿಯಿದೆ. ಮನೆ ಅಥವಾ ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ಅವಿವಾಹಿತರಿಗೆ ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾಗಬಹುದು. ಆದರೆ ಚಿಂತೆ ಬೇಡ. ಹಿರಿಯರ ಸಲಹೆಗಳಿಗೆ ಕಿವಿಗೊಡಿ.

ತುಲಾ: ಮೇಲ್ವರ್ಗದ ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ವೈದ್ಯಕೀಯ ವೃತ್ತಿಯವರಿಗೆ ಉನ್ನತ ಸ್ಥಾನ ಮಾನ ಸಾಧ್ಯತೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಾಗಲಿದೆ. ಆದಾಯವಿದ್ದಷ್ಟೇ ಖರ್ಚೂ ಇರುವುದು. ಹಿಡಿತ ಅಗತ್ಯ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಅನುಭವಿಸುವಿರಿ. ಇಲ್ಲ ಸಲ್ಲದ ಆರೋಪ ಎದುರಿಸುವಂತಾದೀತು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಧನು: ಕೌಟುಂಬಿಕವಾಗಿ ನೆಮ್ಮದಿಯ ದಿನಗಳು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಪಾಲು ಬಂಡವಾಳ ವ್ಯವಹಾರ ಮಾಡುವವರಿಗೆ ಸಣ್ಣ ಮಟ್ಟಿನ ಲಾಭ ಕಂಡುಬರುವುದು. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ಮಕರ: ಆರ್ಥಿಕ ಪರಿಸ್ಥಿತಿಯಲ್ಲಿ ಗಮನಾರ್ಹ ಚೇತರಿಕೆ ಕಂಡುಬಂದು ಹಂತ ಹಂತವಾಗಿ ಅಭಿವೃದ್ಧಿ ಕಾಣುವಿರಿ. ಹೊಸ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಮನೆಯಲ್ಲಿ ಶುಭ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ದೇವಾಲಯ ಸಂದರ್ಶನ ಯೋಗವಿದೆ.

ಕುಂಭ: ಧಾರ್ಮಿಕ ಕಾರ್ಯಗಳು ಅಂದುಕೊಂಡಂತೇ ನಿರ್ವಿಘ್ನವಾಗಿ ನೆರವೇರಲಿದೆ. ಮಾನಸಿಕವಾಗಿ ಆಲಸ್ಯತನ ಕಂಡುಬರುವುದು. ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳಲ್ಲಿ ಉತ್ಸಾಹ ಕಳೆದುಕೊಳ್ಳುವಿರಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ತಾಳ್ಮೆಯಿರಲಿ.

ಮೀನ: ಆರ್ಥಿಕವಾಗಿ ಬೇಕಾದ ಸಮಯದಲ್ಲಿ ಹಣ ಕೈಗೆ ಸಿಗದೇ ಪರದಾಡುವ ಸ್ಥಿತಿ ಎದುರಾಗಲಿದೆ. ಸಂಗಾತಿಯ ಮಾತಿಗೆ ಬೆಲೆಕೊಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು.ಮಕ್ಕಳಿಂದ ಸಂತಸ ಸಿಗುವುದು. ನಿರುದ್ಯೋಗಿಗಳು ಬಂದ  ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments