Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 9 ಅಕ್ಟೋಬರ್ 2019 (07:17 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಏನೋ ಒಂದು ರೀತಿಯ ಚಿಂತೆ ಮನಸ್ಸು ಕೊರೆಯುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ದಿನದಂತ್ಯಕ್ಕೆ ಸಂತಸ.

ವೃಷಭ: ಉದ್ದೇಶಿತ ಕೆಲಸಗಳನ್ನು ನೆರವೇರಿಸಲು ವಿಘ್ನಗಳನ್ನು ಎದುರಿಸಿ ನಿಲ್ಲಬೇಕಾಗುತ್ತದೆ. ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಕಷ್ಟದ ಸಂದರ್ಭದಲ್ಲಿ ಮಿತ್ರರ ಸಹಾಯ ದೊರಕಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ.

ಮಿಥುನ: ಇಷ್ಟಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿ ನೀಡುವುದು. ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಗೆ ಬಡ್ತಿ, ವರ್ಗಾವಣೆಯ ಸಾಧ‍್ಯತೆಯಗಳಿರುತ್ತವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ವ್ಯಾಪಾರ, ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ತೋರಿಬರುವುದು. ಆದರೆ ಹಿತ ಶತ್ರುಗಳು ಬೆನ್ನ ಹಿಂದೆಯೇ ಇದ್ದು, ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗುವುದು. ಎಷ್ಟೋ ದಿನಗಳಿಂದ ಕಾದಿದ್ದ ಸಂತೋಷದ ಸುದ್ದಿ ಇಂದು ಕೇಳಿಬರಲಿದೆ.

ಸಿಂಹ: ಮಕ್ಕಳ ವಿಚಾರವಾಗಿ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ‍ಧನ, ಉದ್ಯೋಗ ಲಾಭವಾಗಬಹುದು. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆಯೂ ನಿಗಾ ವಹಿಸಿ. ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಅಗತ್ಯ. ವಿದ್ಯಾರ್ಥಿಗಳಿಗೆ ಶುಭ ಪ್ರಾಪ್ತಿ.

 
ಕನ್ಯಾ: ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಡು ಮಾಡುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗುವುದು. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಕಾಳಜಿ ಅಗತ್ಯ.

ತುಲಾ: ದುಡುಕು ಮಾತಿನಿಂದ ಪ್ರೀತಿ ಪಾತ್ರರ ಮನ ನೋಯಿಸದಿರಿ. ಸಂಗಾತಿಯ ಮನೋಕಾಮನೆಗಳನ್ನು ಪೂರೈಸಬೇಕಾಗುತ್ತದೆ. ಆಸ್ತಿ ವಿಚಾರಗಳಲ್ಲಿ ದಾಯಾದಿಗಳೊಂದಿಗೆ ಕಲಹಗಳಾಗದಂತೆ ಎಚ್ಚರಿಕೆ  ವಹಿಸಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಶ್ಚಿಕ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ಮಾತುಗಳಿಗೆ ಕಿವಿಗೊಡಿ. ಸ್ವ ಉದ್ಯೋಗಿಗಳು ಲಾಭ ಗಳಿಸುವರು. ಖರ್ಚು ವೆಚ್ಚಗಳು ಹಿಡಿತದಲ್ಲಿರಲಿ.

ಧನು: ನೆರೆಹೊರೆಯವರೊಂದಿಗೆ ನೀರಿನ ವಿಚಾರವಾಗಿ ವಾಗ್ವಾದವಾಗಬಹುದು. ತಾಳ್ಮೆಯಿಂದ ವ್ಯವಹರಿಸಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಮಕರ: ಆರ್ಥಿಕವಾಗಿ ಲಾಭವಾಗಿ ನಿಧಾನವಾಗಿ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ದೈವಾನುಕೂಲದಿಂದ ಉದ್ದೇಶಿತ ಕಾರ್ಯಗಳನ್ನು ನೆರವೇರಿಸುವಿರಿ. ಪ್ರೀತಿ ಪಾತ್ರರೊಂದಿಗೆ ಸುಮಧುರ ಸಮಯ ಕಳೆಯವಿರಿ. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ನಾಲಿಗೆ ಚಪಲಗಳಿಗೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ತೊಂದರೆಗಳು ತಪ್ಪಿದ್ದಲ್ಲ. ಸತತ ಓಡಾಟ ನಡೆಸಬೇಕಾಗಿದ್ದು, ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.  ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗುವಿರಿ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಮೀನ: ಋಣಾತ್ಮಕ ಚಿಂತನೆಗಳಿಂದ ಕೆಲಸದ ಮೇಲೆ ನಿರುತ್ಸಾಹ ಮೂಡಬಹುದು. ಮೇಲಧಿಕಾರಿಗಳ ಅಸಹನೆಗೆ ಗುರಿಯಾಗುವಿರಿ. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ದೊರಕಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments