Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 10 ಅಕ್ಟೋಬರ್ 2019 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಪ್ರೀತಿ ಪಾತ್ರರ ಭೇಟಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಲು ಮರೆಯದಿರಿ.

ವೃಷಭ: ಅಂದುಕೊಂಡ ಕಾರ್ಯ ನೆರವೇರಿಸಲು ಹಲವು ಅಡೆತಡೆಗಳು ಎದುರಾಗಲಿವೆ. ಸ್ವ ಉದ್ಯೋಗಿಗಳಿಗೆ ಮುನ್ನಡೆ ಸಿಗುವುದು. ಹಿತಶತ್ರುಗಳ ಬಗ್ಗೆ ಎಚ್ಚರವಾಗಿರಿ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಮಿಥುನ: ವ್ಯಾಪಾರ ವ್ಯವಹಾರದಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಕರ್ಕಟಕ: ಪಾಲು ಬಂಡವಾಳ ವ್ಯವಹಾರದಲ್ಲಿ ಎಚ್ಚರಿಕೆಯಿಂದ ಹೂಡಿಕೆ ಮಾಡಿ. ವಂಚನೆಗೊಳಗಾಗುವ ಭೀತಿಯಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಸಂಗಾತಿಯ ಮನೋಕಾಮನೆ ಪೂರೈಸುವಿರಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಹೆಚ್ಚಲಿದ್ದು, ಗೌರವ ಪ್ರಾಪ್ತಿಯಾಗುವುದು. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಪ್ರಾಪ್ತಿಯಾಗುವುದು. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

 
ಕನ್ಯಾ: ವ್ಯವಹಾರದಲ್ಲಿ ಹೆಚ್ಚಿನ ಧನಲಾಭವಾಗುವ ಸಾಧ‍್ಯತೆಯಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆಯಿಂದ ಉದ್ಯೋಗದಲ್ಲಿ ಉನ್ನತಿ ಸಿಗುವುದು.

ತುಲಾ: ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಬಹು ದಿನಗಳ ಕನಸು ನನಸಾಗಲಿವೆ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಶ್ಚಿಕ: ಸಂಗಾತಿಯ ಮಾತಿನಂತೆ ನಡೆದರೆ ಇಂದು ನಿಮಗೆ ಶುಭ ಫಲ ಸಿಗುವುದು. ದುಡುಕು ವರ್ತನೆ, ನಿರ್ಧಾರದಿಂದ ಕಾರ್ಯ ನಡೆಯದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನಸ್ಸಿಗೆ ಸಂತಸವಾಗುವುದು.

ಧನು: ನಿಮ್ಮ ನಿರ್ಧಾರಗಳೇ ನಡೆಯಬೇಕೆಂಬ ಹಠದಿಂದಾಗಿ ಬೇರೆಯವರ ಮನಸ್ಸಿಗೆ ಬೇಸರವಾಗಬಹುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ದುಂದುವೆಚ್ಚಗಳಿಗೆ ಕಡಿವಾಣ ಹಾಕಿ. ಸಾಧು ಸಂತರ ಭೇಟಿ ಸಾಧ‍್ಯತೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಹೆಚ್ಚಿನ ಧನಲಾಭಕ್ಕೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಶುಭ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ವಿದ್ಯಾರ್ಥಿಗಳಿಗೆ ಶುಭ ದಿನ.

ಕುಂಭ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಉದರ ಸಂಬಂಧೀ ಆರೋಗ್ಯದ ಸಮಸ್ಯೆಗಳು ಕಂಡುಬರಬಹುದು. ಎಚ್ಚರಿಕೆ ಅಗತ್ಯ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವುದರಿಂದ ಕಾರ್ಯ ಪ್ರಾಪ್ತಿಯಾಗುವುದು.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಮಾಡುವ ತಪ್ಪುಗಳಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಅನುಭವಿಸಬೇಕಾಗಬಹುದು. ಸ್ವ ಉದ್ಯೋಗಿಗಳಿಗೆ ಮುನ್ನಡೆ ಸಿಗಲಿದೆ. ಮನೆಯಲ್ಲಿ ಶುಭ ಕಾರ್ಯಗಳು ನೆರವೇರಲಿವೆ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗಕ್ಕಾಗಿ ಕರೆ ಬರುವುದು.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ತುಟಿಗಳ ಆಧಾರದ ಮೇಲೆ ನಿಮ್ಮ ಗುಣವನ್ನು ತಿಳಿಯಬಹುದು