Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 11 ಅಕ್ಟೋಬರ್ 2019 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ವ್ಯಾಪಾರ ವ್ಯವಹಾರದಲ್ಲಿ ಪೈಪೋಟಿ ಅನುಭವಕ್ಕೆ ಬರುವುದು. ದಂಪತಿಗಳ ನಡುವೆ ಹೊಂದಾಣಿಕೆ ಕೊರತೆ ಉಂಟಾಗಬಹುದು. ತಾಳ್ಮೆಯಿಂದ ನಡೆದುಕೊಳ್ಳಬೇಕು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಷಭ: ಕಾರ್ಯರಂಗದಲ್ಲಿ ಕ್ರಿಯಾಶೀಲತೆ ಉಪಯೋಗಕ್ಕೆ ಬರುವುದು. ನಿಮ್ಮ ಉದ್ದೇಶಿತ ಕಾರ್ಯಗಳು ಸುಗಮವಾಗಿ ನೆರವೇರುವುದು. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ನಿರುದ್ಯೋಗಿಗಳು ಸರ್ಕಾರಿ ಉದ್ಯೋಗಕ್ಕಾಗಿ ನಡೆಸುವ ಪ್ರಯತ್ನದಲ್ಲಿ ಮುನ್ನಡೆ ಸಿಗುವುದು.

ಮಿಥುನ: ಮೇಲ್ವರ್ಗದ  ಅಧಿಕಾರಿಗಳಿಗೆ ಉದ್ಯೋಗದಲ್ಲಿ ತೊಂದರೆ ತಪ್ಪಿದ್ದಲ್ಲ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯ ಸ್ವಭಾವ ಬೆಳೆಸಿಕೊಳ್ಳಿ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ದೂರ ಸಂಚಾರದಿಂದ ಕಾರ್ಯಸಿದ್ಧಿ. ಆದರೆ ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಹಿತಶತ್ರುಗಳ ಬೆನ್ನ ಹಿಂದೆಯೇ ಇರುತ್ತಾರೆ. ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮ ಕ್ರಿಯಾಶೀಲತೆಗೆ ಮನ್ನಣೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ದೈಹಿಕ ಆರೋಗ್ಯದಲ್ಲಿ ಸುಧಾರಣೆಯಾದರೂ ಮಾನಸಿಕವಾಗಿ ಚಿಂತೆ ಕಾಡಲಿದೆ. ಅರ್ಧಕ್ಕೇ ಸ್ಥಗಿತಗೊಂಡ ಕೆಲಸಗಳಿಗೆ ಚಾಲನೆ ಸಿಗಲಿದೆ. ಕಾರ್ಮಿಕ ವರ್ಗದವರಿಗೆ ಕಿರಿ ಕಿರಿ ತಪ್ಪದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.

 
ಕನ್ಯಾ: ಉದ್ಯೋಗದಲ್ಲಿ ಪರಸ್ಪರ ಸಹಕಾರವಿದ್ದರೆ ಮುನ್ನಡೆ ಸಿಗುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾದ ತೀರ್ಪು ಸಿಗಲಿದೆ. ಆಸ್ತಿ, ಮನೆ ಖರೀದಿಗೆ ಇದು ಸಕಾಲ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ಅನವಶ್ಯಕವಾಗಿ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋದರೆ ಮಾನ ಹಾನಿಗೆ ಗುರಿಯಾಗುವಿರಿ. ಕಾರ್ಯರಂಗದಲ್ಲಿ ಕ್ರಿಯಾಶೀಲತೆ ವ್ಯಕ್ತವಾಗುವುದು. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯವಾಗಲಿದೆ. ದಾಂಪತ್ಯದಲ್ಲಿ ಸುಖ ಸಮೃದ್ಧಿ ಇರಲಿದೆ.

ವೃಶ್ಚಿಕ: ಮಕ್ಕಳ ವಿಚಾರವಾಗಿ ಚಿಂತೆಗೀಡಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವಿರಿ. ಕುಟುಂಬ ವರ್ಗದವರಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿವಹಿಸಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ನಿರೀಕ್ಷೆಯಂತೇ ಕಾರ್ಯಗಳು ನಡೆಯಲಿವೆ.

ಧನು: ಆದಾಯದ ಮೂಲಗಳನ್ನು ಹೆಚ್ಚಿಸಲು ನಾನಾ ಮಾರ್ಗಗಳನ್ನು ಹುಡುಕುವಿರಿ. ಸಾಂಸಾರಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ವಿವಾಹ ಪ್ರಯತ್ನಗಳಿಗೆ ಕೆಲವು ಅಡ್ಡಿ ಆತಂಕಗಳು ಎದುರಾಗಬಹುದು. ಚಾಡಿ ಮಾತುಗಳನ್ನು ಅಲಕ್ಷಿಸಿ.

ಮಕರ: ಆಸ್ತಿ ವ್ಯವಹಾರಗಳಲ್ಲಿ  ಜಯ ನಿಮ್ಮದಾಗುವುದು. ಆದರೆ ವಂಚನೆಗೊಳಗಾದಂತೆ ಎಚ್ಚರಿಕೆ ವಹಿಸಿ. ಮಾನಸಿಕವಾಗಿ ಚಿತ್ತ ಚಾಂಚಲ್ಯತೆಯಿಂದ ನಿರ್ಧಾರ ಕೈಗೊಳ್ಳುವಲ್ಲಿ ಎಡವಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಎದುರಾಗಬಹುದು. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ, ಮುನ್ನಡೆ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮೀನ: ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಿದೇಶ ಯಾನ ಸಾಧ್ಯತೆಯಿದೆ. ಕಷ್ಟದ ಸಂದರ್ಭದಲ್ಲಿ ಮಿತ್ರರ ನೆರವು ಸಿಗಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು ಮನಸ್ಸಿಗೆ ಸಂತಸವಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments