Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 13 ಅಕ್ಟೋಬರ್ 2019 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರ. ಮಕ್ಕಳ ವಿಚಾರದಲ್ಲಿ ಚಿಂತೆಯಾದೀತು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚು ವೆಚ್ಚಗಳಿರಲಿವೆ. ಗೃಹ ಸಂಬಂಧೀ ಕೆಲಸಗಳನ್ನು ಮಾಡಬೇಕಾಗುತ್ತದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರುವುದು. ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಭಿವೃದ್ಧಿ ಕಂಡುಬರುವುದು. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ.

ಮಿಥುನ: ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆಯಿಂದಿರುವುದು ಮುಖ್ಯ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಹೊಸ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ಕರ್ಕಟಕ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಸ್ಥಾನ ಮಾನ ಹೆಚ್ಚುವುದು. ಸಾಹಿತ್ಯ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸುವರು. ನೂತನ ದಂಪತಿಗಳಿಗೆ ಮಧು ಚಂದ್ರ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ತೋರಿಬರಲಿದೆ. ಆರ್ಥಿಕವಾಗಿ ಇದುವರೆಗೆ ಇದ್ದ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿವೆ. ಹಂತ ಹಂತವಾಗಿ ಅಭಿವೃದ್ಧಿ ತೋರಿಬರುವುದು. ಕಿರು ಸಂಚಾರ ಮಾಡುವಿರಿ.

 
ಕನ್ಯಾ: ದಾಯಾದಿಗಳೊಂದಿಗೆ ಆಸ್ತಿ ವ್ಯವಹಾರದಲ್ಲಿ ವಾಗ್ವಾದಗಳಾಗದಂತೆ ಎಚ್ಚರವಹಿಸಿ. ಹಿರಿಯರ ಮಾತಿಗೆ ಬೆಲೆಕೊಡಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ದೇಹಾರೋಗ್ಯದ ಮೇಲೆ ನಿಗಾ ಇಡಿ.

ತುಲಾ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಬಂಧುಗಳ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ವ್ಯಾಪಾರ, ವ್ಯವಹಾರದಲ್ಲಿ ಹಣಕಾಸಿನ ತೊಂದರೆಗಳು, ಅಡ್ಡಿ ಆತಂಕಗಳು ನಿವಾರಣೆಯಾಗಲಿವೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಖುಷಿಯಾಗುವುದು. ಕೌಟುಂಬಿಕವಾಗಿ ಸಂತೋಷ, ನೆಮ್ಮದಿ ಅನುಭವಿಸುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಕರ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಂಗಾತಿಯ ಮನೋಕಾಮನೆ ಪೂರೈಸುವಿರಿ. ಪುಣ್ಯ ಕ್ಷೇತ್ರಗಳ ಸಂದರ್ಶನ ಮಾಡುವಿರಿ. ಆದಾಯವಿದ್ದಷ್ಟೇ ಖರ್ಚೂ ಇರುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಕುಂಭ: ಹಲವು ವಿಚಾರಗಳು ಮನಸ್ಸಲ್ಲಿ ಮೂಡಿ ಒಂದು ರೀತಿಯ ಋಣಾತ್ಮಕ ಭಾವನೆ ಮೂಡುವುದು. ಕೆಲಸದಲ್ಲಿ ಆಲಸ್ಯತನ ಕಂಡುಬರಬಹುದು. ಆದರೆ ಆತ್ಮಸ್ಥೈರ್ಯದಿಂದ ಮುನ್ನಡೆಯಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಬಹುದು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಹೊಸ ಜಾಗಗಳಿಗೆ ಭೇಟಿ ನೀಡುವಿರಿ. ಸಾಧು ಸಂತರ ಭೇಟಿ ನೀಡುವ ಸಾಧ‍್ಯತೆಯಿದೆ. ಶೈಕ್ಷಕಣಿಕ ರಂಗದಲ್ಲಿರುವವರಿಗೆ ಮುನ್ನಡೆಯಿರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments