Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 16 ಅಕ್ಟೋಬರ್ 2019 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆದಾಯ ವೃದ್ಧಿಸಲು ಹೊಸ ಯೋಜನೆಗಳಿಗೆ ಕೈಹಾಕಿದರೆ ನಷ್ಟವಾಗುವ ಭೀತಿಯಿದೆ. ಕಷ್ಟದ ಸಂದರ್ಭದಲ್ಲಿ ಸ್ನೇಹಿತರ ಸಹಾಯ ಸಿಗುವುದು. ಸರಕಾರಿ ಕೆಲಸಗಾರರಿಗೆ ಮುನ್ನಡೆಯಿರಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯ ಕೊರತೆ ಉಂಟಾಗಬಹುದು.

ವೃಷಭ: ಮಹಿಳೆಯರಿಗೆ ನೂತನ ವಸ್ತ್ರಾಭರಣ ಖರೀದಿ ಯೋಗವಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಮನೆಯಲ್ಲಿ ಮಂಗಲ ಕಾರ್ಯಗಳು ನೆರವೇರಲಿವೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು.

ಮಿಥುನ: ವೃತ್ತಿರಂಗದಲ್ಲಿ ಕಾರ್ಯದೊತ್ತಡ ಕಂಡುಬರಲಿದೆ. ಅಂದುಕೊಂಡ ಕಾರ್ಯಗಳು ನೆರವೇರಲು ವಿಳಂಬವಾಗಬಹುದು. ತಾಳ್ಮೆ ಅತೀ ಅಗತ್ಯ. ಅಧಿಕಾರಿ ವರ್ಗದವರಿಗೆ ಅಡೆತಡೆಗಳು ತೋರಿಬರಲಿವೆ. ಮಾನಸಿಕವಾಗಿ ಗೊಂದಲ ಕಾಡಬಹುದು. ದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಸಕಾಲ. ಉದ್ದೇಶಿತ ಕಾರ್ಯ ನೆರವೇರಿಸಲು ಹಲವು ಮಾರ್ಗಗಳು ತೋರಿಬರಲಿವೆ.ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡಬಹುದು. ಅತಿಥಿಗಳ ಆಗಮನವಾಗಲಿದೆ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳ ನಿಮಿತ್ತ ಅತಿಥಿಗಳ ಆಗಮನವಾಗಲಿದೆ. ಒಂದು ರೀತಿಯ ಹಬ್ಬದ ವಾತಾವರಣವಿರಲಿದೆ. ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಧನಾದಾಯಕ್ಕೆ ಕೊರತೆಯಾಗದು. ಸರ್ಕಾರಿ ನೌಕರರಿಗೆ ಮುನ್ನಡೆಯಿದೆ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ಸಮಸ್ಯೆಗಳು ಗೊಂದಲದ ವಾತಾವರಣ ಸೃಷ್ಟಿಸಬಹುದು. ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ನ್ಯಾಯಾಲಯದ ಕಲಾಪಗಳಲ್ಲಿ ಜಯ ಸಿಗುವುದು. ಆಸ್ತಿ ವಿವಾದಗಳು ಬಗೆಹರಿಯಲಿವೆ. ಮಾನಸಿಕವಾಗಿ ಬೇಸರದ ಭಾವನೆ ಕಾಡುವುದು. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಬಂಧುಗಳಿಂದ ಚಾಡಿ ಮಾತುಗಳು ಕೇಳಿಬಂದೀತು. ತಾಳ್ಮೆಯಿಂದಿರಿ.

ವೃಶ್ಚಿಕ: ದೂರ ಸಂಚಾರದಲ್ಲಿ ಕಾರ್ಯಸಿದ್ಧಿಯಾಗುವುದು. ಆದರೆ ಕಳ್ಳತನವಾಗದಂತೆ ಎಚ್ಚರವಾಗಿರಿ. ವ್ಯಾಪಾರ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರೆ ಚೇತರಿಕೆ ಕಾಣುವಿರಿ. ದಾಯಾದಿಗಳಿಂದ ತಂಟೆ ತಕರಾರರುಗಳು ಬಂದೀತು. ಎಚ್ಚರಿಕೆಯಿಂದಿರಿ.

ಧನು: ಹಲವು ಅಡೆತಡೆಗಳಿದ್ದರೂ ಕಾರ್ಯ ಸಾಧನೆಗೆ ತೊಂದರೆಯಾಗದು. ಸಾಂಸಾರಿಕವಾಗಿ ಖುಷಿಯ ವಾತಾವರಣವಿರಲಿದೆ. ಸುಂದರ ಕ್ಷಣ ನಿಮ್ಮದಾಗುವುದು. ಪಾಲು ವ್ಯವಹಾರದಲ್ಲಿ ಲಾಭ ಕಂಡುಬರುವುದು. ಅಧಿಕಾರಿ ವರ್ಗದವರಿಗೆ ಮುನ್ನಡೆ.

ಮಕರ: ವೈಯಕ್ತಿಕ ಸಮಸ್ಯೆಗಳಿಂದ ಮನಸ್ಸು ಹೈರಾಣಾಗುವುದು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿಧಾನವಾಗಿ ದೂರವಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಲಹೆಗೆ ಕಿವಿಗೊಡಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.

ಕುಂಭ: ಎಷ್ಟೇ ಸಾಧನೆ ಮಾಡಿದರೂ ಮನಸ್ಸಿಗೆ ಸಮಾಧಾನವಾಗದು. ಏನೋ ಒಂದು ರೀತಿಯ ಋಣಾತ್ಮಕ ಚಿಂತೆ ಮನಸ್ಸನ್ನು ಕಾಡಲಿದೆ. ತಾಳ್ಮೆ ಸಮಾಧಾನದಿಂದ ಮುನ್ನಡೆಯಿರಿ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮೀನ: ನಿರುದ್ಯೋಗಿಗಳು ಬಂದ  ಅವಕಾಶಗಳನ್ನು ಬಳಸಿಕೊಳ್ಳಬೇಕು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಹಿರಿಯರ ಆರೋಗ್ಯದ ಕಾಳಜಿ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಕುಬೇರ ರಂಗೋಲಿಯನ್ನು ಈ ಬಣ್ಣದಲ್ಲಿ ಬರೆದು ಬೀರುವಿನಲ್ಲಿಟ್ಟರೆ ಸಂಪತ್ತು ವೃದ್ಧಿಯಾಗುತ್ತದೆ