Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 16 ಅಕ್ಟೋಬರ್ 2019 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆದಾಯ ವೃದ್ಧಿಸಲು ಹೊಸ ಯೋಜನೆಗಳಿಗೆ ಕೈಹಾಕಿದರೆ ನಷ್ಟವಾಗುವ ಭೀತಿಯಿದೆ. ಕಷ್ಟದ ಸಂದರ್ಭದಲ್ಲಿ ಸ್ನೇಹಿತರ ಸಹಾಯ ಸಿಗುವುದು. ಸರಕಾರಿ ಕೆಲಸಗಾರರಿಗೆ ಮುನ್ನಡೆಯಿರಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯ ಕೊರತೆ ಉಂಟಾಗಬಹುದು.

ವೃಷಭ: ಮಹಿಳೆಯರಿಗೆ ನೂತನ ವಸ್ತ್ರಾಭರಣ ಖರೀದಿ ಯೋಗವಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಮನೆಯಲ್ಲಿ ಮಂಗಲ ಕಾರ್ಯಗಳು ನೆರವೇರಲಿವೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು.

ಮಿಥುನ: ವೃತ್ತಿರಂಗದಲ್ಲಿ ಕಾರ್ಯದೊತ್ತಡ ಕಂಡುಬರಲಿದೆ. ಅಂದುಕೊಂಡ ಕಾರ್ಯಗಳು ನೆರವೇರಲು ವಿಳಂಬವಾಗಬಹುದು. ತಾಳ್ಮೆ ಅತೀ ಅಗತ್ಯ. ಅಧಿಕಾರಿ ವರ್ಗದವರಿಗೆ ಅಡೆತಡೆಗಳು ತೋರಿಬರಲಿವೆ. ಮಾನಸಿಕವಾಗಿ ಗೊಂದಲ ಕಾಡಬಹುದು. ದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಸಕಾಲ. ಉದ್ದೇಶಿತ ಕಾರ್ಯ ನೆರವೇರಿಸಲು ಹಲವು ಮಾರ್ಗಗಳು ತೋರಿಬರಲಿವೆ.ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡಬಹುದು. ಅತಿಥಿಗಳ ಆಗಮನವಾಗಲಿದೆ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳ ನಿಮಿತ್ತ ಅತಿಥಿಗಳ ಆಗಮನವಾಗಲಿದೆ. ಒಂದು ರೀತಿಯ ಹಬ್ಬದ ವಾತಾವರಣವಿರಲಿದೆ. ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಧನಾದಾಯಕ್ಕೆ ಕೊರತೆಯಾಗದು. ಸರ್ಕಾರಿ ನೌಕರರಿಗೆ ಮುನ್ನಡೆಯಿದೆ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ಸಮಸ್ಯೆಗಳು ಗೊಂದಲದ ವಾತಾವರಣ ಸೃಷ್ಟಿಸಬಹುದು. ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ನ್ಯಾಯಾಲಯದ ಕಲಾಪಗಳಲ್ಲಿ ಜಯ ಸಿಗುವುದು. ಆಸ್ತಿ ವಿವಾದಗಳು ಬಗೆಹರಿಯಲಿವೆ. ಮಾನಸಿಕವಾಗಿ ಬೇಸರದ ಭಾವನೆ ಕಾಡುವುದು. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಬಂಧುಗಳಿಂದ ಚಾಡಿ ಮಾತುಗಳು ಕೇಳಿಬಂದೀತು. ತಾಳ್ಮೆಯಿಂದಿರಿ.

ವೃಶ್ಚಿಕ: ದೂರ ಸಂಚಾರದಲ್ಲಿ ಕಾರ್ಯಸಿದ್ಧಿಯಾಗುವುದು. ಆದರೆ ಕಳ್ಳತನವಾಗದಂತೆ ಎಚ್ಚರವಾಗಿರಿ. ವ್ಯಾಪಾರ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರೆ ಚೇತರಿಕೆ ಕಾಣುವಿರಿ. ದಾಯಾದಿಗಳಿಂದ ತಂಟೆ ತಕರಾರರುಗಳು ಬಂದೀತು. ಎಚ್ಚರಿಕೆಯಿಂದಿರಿ.

ಧನು: ಹಲವು ಅಡೆತಡೆಗಳಿದ್ದರೂ ಕಾರ್ಯ ಸಾಧನೆಗೆ ತೊಂದರೆಯಾಗದು. ಸಾಂಸಾರಿಕವಾಗಿ ಖುಷಿಯ ವಾತಾವರಣವಿರಲಿದೆ. ಸುಂದರ ಕ್ಷಣ ನಿಮ್ಮದಾಗುವುದು. ಪಾಲು ವ್ಯವಹಾರದಲ್ಲಿ ಲಾಭ ಕಂಡುಬರುವುದು. ಅಧಿಕಾರಿ ವರ್ಗದವರಿಗೆ ಮುನ್ನಡೆ.

ಮಕರ: ವೈಯಕ್ತಿಕ ಸಮಸ್ಯೆಗಳಿಂದ ಮನಸ್ಸು ಹೈರಾಣಾಗುವುದು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿಧಾನವಾಗಿ ದೂರವಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಲಹೆಗೆ ಕಿವಿಗೊಡಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.

ಕುಂಭ: ಎಷ್ಟೇ ಸಾಧನೆ ಮಾಡಿದರೂ ಮನಸ್ಸಿಗೆ ಸಮಾಧಾನವಾಗದು. ಏನೋ ಒಂದು ರೀತಿಯ ಋಣಾತ್ಮಕ ಚಿಂತೆ ಮನಸ್ಸನ್ನು ಕಾಡಲಿದೆ. ತಾಳ್ಮೆ ಸಮಾಧಾನದಿಂದ ಮುನ್ನಡೆಯಿರಿ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮೀನ: ನಿರುದ್ಯೋಗಿಗಳು ಬಂದ  ಅವಕಾಶಗಳನ್ನು ಬಳಸಿಕೊಳ್ಳಬೇಕು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಹಿರಿಯರ ಆರೋಗ್ಯದ ಕಾಳಜಿ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments