Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 18 ಅಕ್ಟೋಬರ್ 2019 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿಬರಲಿದೆ. ಆದರೆ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ಸಾಮಾಜಿಕವಾಗಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ. ಮಿತ್ರರ ಸಂಕಷ್ಟಕ್ಕೆ ಹೆಗಲುಕೊಡುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರೆತೆಯಿರದು. ಆದರೆ ಖರ್ಚಿಗೆ ಕಡಿವಾಣವಿರಲಿ.

ವೃಷಭ: ವೃತ್ತಿರಂಗದಲ್ಲಿ ದೃಢವಾದ ನಿರ್ಧಾರದಿಂದ ಅಂದುಕೊಂಡ ಕೆಲಸ ಸಾಧಿಸುವಿರಿ. ಕೆಲವೊಮ್ಮೆ ಬೇಡದ ಚಾಡಿ ಮತುಗಳು ಕೇಳಿಬಂದೀತು. ಅದನ್ನು ಉಪೇಕ್ಷಿಸುವುದೇ ಉತ್ತಮ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಿಥುನ: ವಿದ್ಯಾರ್ಥಿಗಳಲ್ಲಿ ಕಲಿಕೆಯಲ್ಲಿ ಆಸಕ್ತಿ ಕಡಿಮೆಯಾಗಬಹುದು. ನಿರುತ್ಸಾಹವಾಗದಂತೆ ನೋಡಿಕೊಳ್ಳಿ. ಪ್ರತಿಷ್ಠೆಗೆ ಕುಂದು ಬರುವಂತಹ ಘಟನೆಗಳು ನಡೆಯಬಹುದು. ದುಡುಕಿನ ಮಾತನಾಡಲು ಹೋಗಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ.

ಕರ್ಕಟಕ: ದೈವಾನುಗ್ರಹವಿರುವುದರಿಂದ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಯಶಸ್ಸು ಗಳಿಸುವಿರಿ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಿಂಹ: ಹೂಡಿಕೆ, ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ದೊರಕಲಿವೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಆಕಸ್ಮಿಕವಾಗಿ ಧನಲಾಭವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

 
ಕನ್ಯಾ: ವಿದ್ಯಾರ್ಥಿಗಳು ಕೆಟ್ಟ ಸ್ನೇಹಿತರ ಸಂಗದಿಂದ ಹಾಳಾಗದಂತೆ ಎಚ್ಚರಿಕೆ ವಹಿಸಬೇಕು. ಹಿತ ಶತ್ರುಗಳಿಂದ ತೊಂದರೆಯಾಗಲಿದೆ. ವ್ಯವಹಾರದಲ್ಲಿ ಎಚ್ಚರ ಅಗತ್ಯ. ವಿನಾಕಾರಣ ಮಾಡದ ತಪ್ಪಿಗೆ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗುತ್ತದೆ. ತಾಳ್ಮೆ ಅಗತ್ಯ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಕೆಳ ಹಂತದ ನೌಕರರಿಂದ ಸಹಾಯ ಸಿಗಲಿದೆ. ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡುವುದು.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ಕಠಿಣ ಪರಿಶ್ರಮ ಅಗತ್ಯ. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಆದರೆ ವೆಚ್ಚದ ಬಗ್ಗೆ ಕಡಿವಾಣ ಅಗತ್ಯ. ವ್ಯಾಪಾರಿಗಳಿಗೆ ಅಭಿವೃದ್ಧಿ ತೋರಿಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಕಾರ್ಯನಿಮಿತ್ತ ದೂರ ಸಂಚಾರ ಮಾಡುವಾಗ ಎಚ್ಚರ ಅಗತ್ಯ. ವಾಹನ ಸವಾರರು ಅಪಘಾತವಾಗದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಸುಧಾರಣೆಯಾಗಲಿವೆ. ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಸಂತಸ ನೀಡುವುದು.

ಮಕರ: ಆರೋಗ್ಯ ಭಾಗ್ಯವೇ ಮುಖ್ಯ ಎನ್ನುವುದು ಮರೆಯಬಾರದು. ನಾಲಿಗೆ ಚಪಲದಿಂದ ಉದರ ಸಂಬಂಧೀ ಆರೋಗ್ಯ ಸಮಸ್ಯೆ ತಂದುಕೊಳ್ಳುವಿರಿ. ಆದಾಯ ಹೆಚ್ಚಲಿದ್ದು, ಆರ್ಥಿಕ ಸಮಸ್ಯೆ ಸುಧಾರಿಸುವುದು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಬರಲಿದೆ.

ಕುಂಭ: ನೂತನ ವ್ಯವಹಾರಗಳಿಂದ ಆದಾಯ ಹೆಚ್ಚಬಹುದು. ಆದರೆ ದುಡುಕಿ ನಿರ್ಧಾರ ಕೈಗೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನೂತನ ಕೆಲಸ ಕಾರ್ಯಗಳಲ್ಲಿ ಸಂಗಾತಿಯ ಸಹಕಾರ ಸಿಗಲಿದೆ. ಧಾರ್ಮಿಕ ಕ್ಷೇತ್ರದ ಸಂದರ್ಶನ ಮಾಡುವಿರಿ.

ಮೀನ: ವಿದ್ಯಾರ್ಥಿಗಳಿಗೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಶಿಕ್ಷಕರ ಪ್ರಶಂಸೆ ಸಿಗುವುದು. ಸಾಮಾಜಿಕವಾಗಿ ಸ್ಥಾನ ಮಾನ ಉತ್ತಮಗೊಳ್ಳಲಿದೆ. ವಿಶ್ವಾಸ ಘಾತುಕರ ಬಗ್ಗೆ ಎಚ್ಚರಿಕೆಯಿಂದಿರಿ. ಆರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments