Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 19 ಅಕ್ಟೋಬರ್ 2019 (08:28 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಹೊಸತನ ರೂಢಿಸಿಕೊಳ್ಳಲು ಪ್ರಯತ್ನಿಸಿ. ಕ್ರಿಯಾಶೀಲತೆಯಿಂದ ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗುವುದು. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಎದುರಾಗಲಿವೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ದಿನದಂತ್ಯಕ್ಕೆ ಶುಭಸುದ್ದಿ.

ವೃಷಭ: ಹೊಂದಾಣಿಕೆಯಿಂದ ನಡೆದುಕೊಂಡರೆ ಸಾಂಸಾರಿಕವಾಗಿ ಸುಖ ಪ್ರಾಪ್ತಿಯಾಗುವುದು. ಆರ್ಥಿಕವಾಗಿ ಧನಾಗಮನ ಉತ್ತಮಗೊಳ್ಳಲಿದ್ದು ಆದಾಯ ವೃದ್ಧಿಯಾಗುವುದು. ಆರೋಗ್ಯದಲ್ಲಿ ಇದ್ದ ಸಮಸ್ಯೆಗಳು ನಿವಾರಣೆಯಾಗುವುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.

ಮಿಥುನ: ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥಿರತೆಯ ಕೊರತೆ ಕಾಡುವುದು. ಗೊಂದಲದ ವಾತಾವರಣವಿರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಅಡೆತಡೆಗಳು ಬಂದರೂ ಅಂದುಕೊಂಡ ಕಾರ್ಯಸಾಧನೆ ಮಾಡುವಿರಿ. ಅರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ದೈನಂದಿನ ಚಟುವಟಿಕೆಗಳಲ್ಲಿ ಮುನ್ನಡೆ, ಅಭಿವೃದ್ಧಿ ತೋರಿಬರುವುದು. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳು ಮೂಡಬಹುದು. ತಾಳ್ಮೆಯಿಂದ ವ್ಯವಹರಿಸುವುದು ಅಗತ್ಯ. ಕಾರ್ಯ ಸಾಧನೆಗಾಗಿ ದೂರ ಸಂಚಾರ ಮಾಡಿದರೆ ಯಶಸ್ವಿಯಾಗುವಿರಿ.

ಸಿಂಹ: ಖಾಸಗಿ ಜೀವನದಲ್ಲಿ ಏರುಪೇರಾಗಬಹುದು. ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಲಿದೆ. ವ್ಯಾವಹಾರಿಕವಾಗಿ ಹೆಚ್ಚು ಲಾಭ ಗಳಿಸುವಿರಿ. ದೇವತಾ ಪ್ರಾರ್ಥನೆ ಮಾಡಿ.

 
ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯಕ್ಕಾಗಿ ಅಲೆದಾಟ ತಪ್ಪದು. ಕಠಿಣ ಪರಿಶ್ರಮಪಟ್ಟರಷ್ಟೇ ಫಲ ಸಿಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಧಾರ್ಮಿಕವಾಗಿ ಧನವಿನಿಯೋಗ ಮಾಡುವಿರಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಕಾಳಜಿ ವಹಿಸಬೇಕು.

ತುಲಾ: ನಿಮ್ಮ ಮಾನಸಿಕ ಸಮತೋಲನ ತಪ್ಪದಂತೆ ಎಚ್ಚರಿಕೆವಹಿಸಬೇಕು. ತಾಳ್ಮೆ ಕಳೆದುಕೊಳ್ಳುವಂತಹ ಘಟನೆಗಳು ಬಂದರೂ ಎಚ್ಚರಿಕೆಯಿಂದ ವ್ಯವಹರಿಸುವುದು ಉತ್ತಮ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಬಂದ  ಅವಕಾಶ ಬಳಸಿಕೊಳ್ಳಿ.

ವೃಶ್ಚಿಕ: ವೃತ್ತಿರಂಗದಲ್ಲಿ ತುಸು ಎಚ್ಚರಿಕೆಯಿಂದ ಹೆಜ್ಜೆಯಿಡುವುದು ಉತ್ತಮ. ಮಾಡದ ತಪ್ಪಿಗೆ ಬೆಲೆ ತೆರಬೇಕಾದ ಸಂದರ್ಭ ಬರಬಹುದು. ಅಡೆತಡೆಗಳಿದ್ದರೂ ಕಾರ್ಯಸಾಧನೆಗೆ ತೊಂದರೆಯಾಗದು. ದೂರ ಸಂಚಾರದಲ್ಲಿ ಎಚ್ಚರಿಕೆಯಿಂದಿರಿ. ವಾಹನ ಖರೀದಿ ಯೋಗವಿದೆ.

ಧನು: ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ಸಾಧ‍್ಯ. ವೃತ್ತಿರಂಗದಲ್ಲಿ ನಿಮ್ಮ ಮನೋಬಲ ಪ್ರದರ್ಶಿಸಬೇಕಾದ ಅಗತ್ಯವಿದೆ. ದೇವತಾ ದರ್ಶನಕ್ಕಾಗಿ ಕಿರು ಸಂಚಾರ ಮಾಡುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

ಮಕರ: ಮನಸ್ಸಿಗೆ ಏನೋ ಒಂದು ರೀತಿಯ ಋಣಾತ್ಮಕ ಚಿಂತೆಗಳು ಕಾಡಲಿವೆ. ವೃತ್ತಿರಂಗದಲ್ಲಿ ಹೆಚ್ಚಿನ ಹೊಣೆಗಾರಿಕೆ ಹೊತ್ತುಕೊಳ್ಳಬೇಕಾಗುತ್ತದೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಧನ ವ್ಯಯವಾಗುವುದು.

ಕುಂಭ: ನಿಮಗೆ ಇಷ್ಟವಿಲ್ಲದೇ ಹೋದರೂ ಕೆಲವೊಂದು ಕೆಲಸಗಳನ್ನು ಮಾಡಲೇಬಾಕಾದ ಅನಿವಾರ್ಯ ಪರಿಸ್ಥಿತಿ ಬರಲಿದೆ. ಶುಭ ಮಂಗಲ ಕಾರ್ಯಗಳ ಸಿದ್ಧತೆಗೆ ಓಡಾಟ ನಡೆಸಬೇಕಾಗುತ್ತದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಬಹುದು.

ಮೀನ: ನಿಮ್ಮ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗುವುದು. ನೂತನ ದಂಪತಿಗಳಿಗೆ ವಿಲಾಸೀ ಜೀವನದ ಸುಖ ಸಿಗುವುದು. ಮಹಿಳಾ ಉದ್ಯೋಗಿಗಳಿಗೆ ಅಪವಾದದ ಭೀತಿಯಿರಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ದಿನದಂತ್ಯಕ್ಕೆ ಶುಭ ಸುದ್ದಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments