Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 20 ಅಕ್ಟೋಬರ್ 2019 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಿವಾಹಿತರಿಗೆ ವಿವಾಹ ಪ್ರಯತ್ನಗಳು ಬರಲಿವೆ. ವೃತ್ತಿರಂಗದಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಿದ್ದೀರಿ. ಹಾಗಿದ್ದರೂ ಕಠಿಣ ಪರಿಶ್ರಮ ಅಗತ್ಯ. ಆರ್ಥಿಕ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ವೃಷಭ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಸಾಕಷ್ಟು ಧನಾಗಮನವಾಗಲಿದ್ದು, ಮುನ್ನಡೆ ಸಾಧಿಸುವಿರಿ. ಸಾಂಸಾರಿಕ ಸಂಬಂಧಗಳನ್ನು ಗಟ್ಟಿಗೊಳಿಸಲು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ವೈಯಕ್ತಿಕ ಬದುಕಿನಲ್ಲಿ ಹಲವು ತೊಂದರೆಗಳು ಎದುರಾಗಲಿವೆ. ಅಡೆತಡೆಗಳನ್ನು ದಾಟಿ ಮುನ್ನುಗ್ಗುವ ಧೈರ್ಯ ಬೆಳೆಸಿಕೊಳ್ಳಿ. ದೈಹಿಕ ಆರೋಗ್ಯ ಏರುಪೇರಾಗಬಹುದು, ಹೆಚ್ಚಿನ ಕಾಳಜಿ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಕರ್ಕಟಕ: ಮನಸ್ಸಿಗೆ ಸಂತೋಷ ನೀಡುವಂತಹ ಕೆಲಸಗಳಲ್ಲಿ ಭಾಗಿಯಾಗುವಿರಿ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನ ವ್ಯಯ ಮಾಡಬೇಕಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಸಿಂಹ: ಭಾವನೆಗಳನ್ನು ಅದುಮಿಟ್ಟುಕೊಳ್ಳುವುದನ್ನು ಕಲಿಯಬೇಕು. ದುಡುಕಿನ ವರ್ತನೆ, ಮಾತಿನಿಂದ ಬೇರೆಯವರ ಮನ ನೋಯಿಸದಂತೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಕ್ಕಿ ಸಂತಸವಾಗುವುದು. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಯೋಚಿಸುವುದು ಒಳಿತು.

 
ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೀರಿದ ಜವಾಬ್ಧಾರಿಗಳು ಹೆಗಲಿಗೇರಲಿವೆ. ಇದರಿಂದ ಮಾನಸಿಕವಾಗಿ ಗೊಂದಲಕ್ಕೊಳಗಾಗುವಿರಿ. ದಾಂಒತ್ಯ ಜೀವನದಲ್ಲಿ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರ ವಹಿಸಿ. ತಾಳ್ಮೆಯಿಂದಿರುವುದು ಮುಖ್ಯ.

ತುಲಾ: ವೈಯಕ್ತಿಕ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಹಿರಿಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಆರ್ಥಿಕವಾಗಿ ಧನಾಗಮನವಾಗಲಿದೆ.

ವೃಶ್ಚಿಕ: ಆರ್ಥಿಕವಾಗಿ ಸಾಕಷ್ಟು ಆದಾಯವಿದ್ದರೂ ಖರ್ಚು ವೆಚ್ಚಗಳೂ ಇರುತ್ತವೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವೃತ್ತಿರಂಗದಲ್ಲಿ ಚೇತರಿಕೆ ಕಂಡುಬರುವುದು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಸಂಗಾತಿಯ ಜತೆಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಮಾನಸಿಕವಾಗಿ ಬೇಡದ ಯೋಚನೆಗಳಿಗೆ ಕಡಿವಾಣ ಹಾಕಿದರೆ ಒಳಿತು. ಧನಾಗಮನಕ್ಕೆ ಕೊರತೆಯಾಗದು. ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವುದು.

ಮಕರ: ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ಫಲ ಸಿಗುವುದು. ಕಾರ್ಯಸಾಧನೆಗಾಗಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದ್ದು, ಖರ್ಚು ವೆಚ್ಚದ ಬಗ್ಗೆಯೂ ಕಡಿವಾಣ ಅಗತ್ಯ.

ಕುಂಭ: ಸಾಂಸಾರಿಕವಾಗಿ ಹಲವು ಹೊಸ ಜವಾಬ್ಧಾರಿಗಳನ್ನು ಹೊತ್ತುಕೊಳ್ಳಬೇಕಾಗುತ್ತದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರುವುದು. ವಾಹನ ಸವಾರರು ಅಪಾಘತದ ಬಗ್ಗೆ ಎಚ್ಚರಿಕೆಯಿಂದಿರಬೇಕು.

ಮೀನ: ಗೃಹ ಸಂಬಂಧೀ ಕೆಲಸಗಳಲ್ಲಿ ಓಡಾಟ ನಡೆಸಬೇಕಾಗುತ್ತದೆ. ಶುಭ ಮಂಗಲ ಕಾರ್ಯ ನೆರವೇರಿಸಲು ಉತ್ತಮ ಸಮಯ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments