Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 21 ಅಕ್ಟೋಬರ್ 2019 (08:34 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯೊಂದಿಗಿನ ಮನಸ್ತಾಪಗಳಿಂದ ಮನಸ್ಸಿಗೆ ಬೇಸರವಾಗುವುದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಖರ್ಚು ವೆಚ್ಚಗಳು ಹೆಚ್ಚುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅಂದುಕೊಂಡ ಕೆಲಸಗಳಿಗೆ ಹಲವು ಅಡೆತಡೆಗಳು ಎದುರಾದರೂ ಧೈರ್ಯದಿಂದ ಮುನ್ನುಗ್ಗಿದ್ದರೆ ಯಶಸ್ಸು ಸಿಗುವುದು. ವಾಹನ ಖರೀದಿ ಯೋಗವಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕಾರ್ಯನಿಮಿತ್ತ ಕಿರು ಸಂಚಾರ ಯೋಗವಿದೆ.

ಮಿಥುನ: ಅನಿವಾರ್ಯವಾಗಿ ವೃತ್ತಿಂರಗದಲ್ಲಿ ಹೊಸ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ನೆರೆಹೊರೆಯವರೊಂದಿಗೆ ವರ್ತಿಸುವಾಗ ಎಚ್ಚರವಹಿಸಿ. ಹಿರಿಯರ ತೀರ್ಥಯಾತ್ರೆಗೆ ಏರ್ಪಾಟು ಮಾಡುವಿರಿ. ಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಕೆಲಸದೊತ್ತಡ ಹೆಚ್ಚುವುದು. ಸಹೋದ್ಯೋಗಿಗಳ ಅಸಹಕಾರ ಮನಸ್ಸಿಗೆ ಬೇಸರವುಂಟುಮಾಡಬಹುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆರ್ಥಿಕವಾಗಿ ಆದಾಯ ವೃದ್ಧಿಯಾಗುವುದು. ಆದರೆ ಖರ್ಚಿನ ಬಗ್ಗೆ ಎಚ್ಚರವಿರಲಿ.

ಸಿಂಹ: ವಿದ್ಯಾರ್ಥಿಗಳಿಗೆ ನಿರೀಕ್ಷತ ಫಲ ಸಿಕ್ಕಿ ಮನಸ್ಸಿಗೆ ಸಂತಸವಾಗುವುದು. ಸಾಮಾಜಿಕವಾಗಿ ಸ್ಥಾನ ಮಾನ ಉತ್ತಮವಾಗಲಿದೆ. ಕಲಾ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸುವರು. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ.

 
ಕನ್ಯಾ: ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವಾಗ ವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ. ಲೆಕ್ಕ ಪತ್ರಗಳ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಿ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಗೃಹೋಪಯೋಗಿ ವಸ್ತುಳಿಗೆ ಧನವ್ಯಯ ಮಾಡಬೇಕಾಗಬಹುದು.

ತುಲಾ: ಇಷ್ಟ ಮಿತ್ರರೊಂದಿಗೆ ಪ್ರವಾಸ,  ಭೋಜನ ಸಾಧ‍್ಯತೆಯಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳಿತು. ಸಾಧು ಸಂತರ ಭೇಟಿಯಾಗುವಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗುವುದು.

ವೃಶ್ಚಿಕ: ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಾಡಬಹುದು. ವಿನಾಕಾರಣ ನಿಮ್ಮ ಸಂಸಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ.

ಧನು: ನಿಮ್ಮ ದುಡುಕು, ವರ್ತನೆ, ಮಾತು ಸಂಗಾತಿಯ ಕೋಪಕ್ಕೆ ಕಾರಣವಾಗಬಹುದು. ವಿನಾಕಾರಣ ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ಮಕರ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ಇಂದಿನ ದಿನ ಆರಂಭಿಸಿದರೆ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡುವಿರಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆಯಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ಆರ್ಥಿಕವಾಗಿ ಚೇತರಿಕೆ, ಅಭಿವೃದ್ಧಿ ನಿಧಾನವಾಗಿ ಗೋಚರಕ್ಕೆ ಬರುವುದು. ಹೊಸ ಯೋಜನೆಗಳು ಫಲಗೂಡಲಿವೆ. ಆದರೆ ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಸ್ವ ಉದ್ಯೋಗಿಗಳಿಗೆ ಲಾಭದಾಯಕ ದಿನವಾಗಲಿದೆ.
ಮೀನ: ಮಹಿಳಾ ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಆಸ್ತಿ, ಮನೆ ಖರೀದಿಗೆ ಮುಂದಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕುಜ ದೋಷವಿದ್ದರೆ ಈ ಸ್ತೋತ್ರವನ್ನು ತಪ್ಪದೇ ಓದಿ

Lakshmi Mantra: ಲಕ್ಷ್ಮೀ ಕವಚ ಸ್ತೋತ್ರಂ ಕನ್ನಡದಲ್ಲಿ

Ganesha Mantra: ವಿಘ್ನಗಳನ್ನು ನಿವಾರಿಸಲು ಗಣೇಶನ ಈ ಸ್ತೋತ್ರವನ್ನು ತಪ್ಪದೇ ಓದಿ

Devi Mantra: ಮಂಗಳವಾರದಂದು ತಪ್ಪದೇ ಲಲಿತಾ ದೇವಿಯ ಈ ಸ್ತೋತ್ರ ಓದಿ

Mrthyunjaya mantra: ರೋಗ ಭಯ, ಅಕಾಲ ಮೃತ್ಯುಭಯ ನಾಶಕ್ಕೆ ಮೃತ್ಯುಂಜಯ ಅಷ್ಟೋತ್ತರ

ಮುಂದಿನ ಸುದ್ದಿ
Show comments