Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 22 ಅಕ್ಟೋಬರ್ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆತ್ಮಸ್ಥೈರ್ಯದಿಂದ ಮುನ್ನಡೆದರೆ ನಿಮ್ಮ ಕಾರ್ಯಸಾಧನೆಗೆ ಸುಸ್ರೂತ್ರವಾಗಿ ನಡೆಯಲಿದೆ. ನಿಮ್ಮ ಕುಟುಂಬ ಜೀವನ ಮತ್ತು ವೃತ್ತಿ ಜೀವನದ ನಡುವೆ ಹೊಂದಾಣಿಕೆ ಮಾಡಬೇಕಾದ ಅನಿವಾರ್ಯತೆ ಬರಲಿದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ.

ವೃಷಭ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಏಕಾಗ್ರತೆಗೆ ಭಂಗ ತರುವ ವಿಚಾರಗಳು ಎದುರಾಗಲಿವೆ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ವಿಚಾರಗಳಿಗೆ ಮನ್ನಣೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ಮುನ್ನಡೆ ಅನುಭವಕ್ಕೆ ಬರುವುದು. ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಕರ್ಕಟಕ: ಋಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಆಳಲು ಬಿಡಬೇಡಿ. ಇದರಿಂದ ಕೆಲಸದಲ್ಲಿ ನಿರುತ್ಸಾಹ ಕಾಡಬಹುದು. ದೈವಾನುಗ್ರಹದಿಂದ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಗಣ್ಯ ವ್ಯಕ್ತಿಗಳ ಭೇಟಿ ಮಾಡುವಿರಿ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಸಿಗಲಿದೆ.

ಸಿಂಹ: ದೃಢ ನಿರ್ಧಾರದಿಂದ ಮುನ್ನಡೆದರೆ ಅಂದುಕೊಂಡ ಕೆಲಸ ಸುಗಮವಾಗಿ ನೆರವೇರುವುದು. ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿಯಿರಲಿದೆ. ವೈಯಕ್ತಿಕ ಜೀವನದಲ್ಲಿ ಏರುಪೇರಾಗಬಹುದು. ತಾಳ್ಮೆಯಿಂದ ಮಾತನಾಡುವುದು ಮುಖ್ಯ.

 
ಕನ್ಯಾ: ವೃತ್ತಿರಂಗದಲ್ಲಿ ಗಮನಾರ್ಹ ಬದಲಾವಣೆಗೆ ಸಿದ್ಧತೆ ಮಾಡಿಕೊಳ್ಳಿ. ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಹೊಸ ಕೆಲಸಗಳಿಗೆ ಕೈ ಹಾಕುವಿರಿ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರಬಹುದು. ಗೃಹೋಪಯೋಗಿ ವಸ್ತುಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ.

ತುಲಾ: ನಿರುದ್ಯೋಗಿಗಳು ಉದ್ಯೋಗಕ್ಕಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಪಾಲಿಗೆ ಬಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹಿರಿಯರ ತೀರ್ಥ ಯಾತ್ರೆಗೆ ತಯಾರಿ ನಡೆಸುವಿರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಎಚ್ಚರವಾಗಿರಿ.

ವೃಶ್ಚಿಕ: ನಿಮ್ಮ ಕ್ರಿಯಾಶೀಲತೆಗೆ ತಕ್ಕ ಪ್ರತಿಫಲ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುವುದು. ಸಂಗಾತಿಯ ಪ್ರೀತಿ ಸಿಗಲಿದೆ. ದಾಯಾದಿಗಳೊಂದಿಗೆ ಆಸ್ತಿ ವಿಚಾರವಾಗಿ ವಿವಾದಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿ.

ಧನು: ತೀರ್ಥಕ್ಷೇತ್ರಗಳ ಸಂದರ್ಶನ ನಡೆಸುವಿರಿ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮದ ಅಗತ್ಯವಿದೆ. ವಾಸ ಸ್ಥಳದ ಬದಲಾವಣೆಗೆ ಸಿದ್ಧತೆ ನಡೆಸುತ್ತೀರಿ. ಕಾರ್ಯಕ್ಷೇತ್ರದಲ್ಲಿ ತಾಳ್ಮೆ ಸಮಾಧಾನದಿಂದ ಮುನ್ನಡೆಯಿರಿ.

ಮಕರ: ಅವಿವಾಹಿತರು ಯೋಗ್ಯ ಸಂಬಂಧ ಆರಿಸುವಾಗ ಎಚ್ಚರಿಕೆಯಿಂದಿರಿ. ಭವಿಷ್ಯ ರೂಪಿಸುವ ಬಗ್ಗೆ ಯೋಚನೆ ಮಾಡಬೇಕು. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆಯಿಂದಿರಿ.

ಕುಂಭ: ವಿವಿಧ ಮೂಲಗಳಿಂದ ಆದಾಯ ಬರುವ ನಿರೀಕ್ಷೆಯಿದೆ. ಆದರೆ ಆರ್ಥಿಕ ಯೋಜನೆಗಳ ಬಗ್ಗೆ ಎಚ್ಚರಿಕೆಯಿಂದ ಹೆಜ್ಜೆಯಿಡಿ. ನಿರುದ್ಯೋಗಿಗಳು ಉತ್ತಮ ಉದ್ಯೋಗ ಗಿಟ್ಟಿಸಲಿದ್ದಾರೆ. ಹೊಸ ಕೆಲಸಗಳಿಗೆ ಕೆಲವೊಂದು ಅಡ್ಡಿ ಆತಂಕಗಳು ಎದುರಾಗಬಹುದು. ತಾಳ್ಮೆಯಿಂದಿರಿ.
ಮೀನ: ರಾಜಕೀಯ ವರ್ಗದವರಿಗೆ ಮುನ್ನಡೆಯ ಭಾಗ್ಯವಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಲಿದ್ದೀರಿ. ಪ್ರಯತ್ನದಿಂದ ಯಶಸ್ಸು ಸಾಧ‍್ಯ ಎಂಬುದನ್ನು ಮರೆಯಬೇಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments