ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 23 ಅಕ್ಟೋಬರ್ 2019 (08:28 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಘನತೆಗೆ ಕುಂದು ತರುವ ಘಟನೆಗಳು ನಡೆಯಬಹುದು. ಎಚ್ಚರಿಕೆಯಿಂದಿರಿ. ಮಹಿಳೆಯರಿಂದ ಮಾನ ಹಾನಿ ಸಂಭವವಿದೆ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಕೆಲಸ ಕೆಟ್ಟೀತು. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಮಕ್ಕಳಿಂದ ಶುಭ ಫಲ ನಿರೀಕ್ಷಿಸಬಹುದು. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಕೈ ಹಿಡಿದ ಕೆಲಸಗಳು ಫಲಗೂಡುವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುವುದು.

ಮಿಥುನ: ಶುಭ ಮಂಗಲ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಮಾನಸಿಕವಾಗಿ ಗೊಂದಲಗಳು, ಖಿನ್ನತೆ ಕಾಡಲಿದೆ. ತಾಳ್ಮೆ, ಸಮಾಧಾನ ಅಗತ್ಯ. ಸಂಗಾತಿಯ ಸಲಹೆಗೆ ಕಿವಿಗೊಡಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚುವುದು. ಆರ್ಥಿಕ ಪರಿಸ್ಥಿತಿ ಬಗ್ಗೆ ಎಚ್ಚರ.

ಕರ್ಕಟಕ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಸಂತಾನ ಸೂಚಕ ಫಲ ಸಿಗಲಿದೆ. ಮನೆಯಲ್ಲಿ ಸಂತಸದ ವಾತಾವರಣವಿರುವುದು. ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ಬೇಸರವಾಗಬಹುದು.

ಸಿಂಹ: ಅನಿರೀಕ್ಷಿತವಾಗಿ ಹಣದ ಹರಿವು ಬರಲಿದ್ದು, ಅಂದುಕೊಂಡ ಕೆಲಸಗಳನ್ನು ನೆರವೇರಿಸುವಿರಿ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಿ. ದಾಯಾದಿ ಕಲಹಗಳಿಗೆ ಅಂತ್ಯ ಸಿಗುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

 
ಕನ್ಯಾ: ವಿದ್ಯಾರ್ಥಿಗಳಿಗೆ ಓದಿದ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎಂಬ ಹತಾಶೆ ಕಾಡಲಿದೆ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆಯ ಭಾಗ್ಯವಿದೆ. ಖರ್ಚು ವೆಚ್ಚದ ಬಗ್ಗೆ ಎಚ್ಚರವಿರಲಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗುವುದು.

ತುಲಾ: ಶಾರೀರಕವಾಗಿ ಆರೋಗ್ಯದಿಂದಿದ್ದರೂ ಮಾನಸಿಕವಾಗಿ ಯಾವುದೋ ಚಿಂತೆ ಕಾಡುವುದು. ಅನಗತ್ಯ ವಿವಾದಗಳಿಂದ ದೂರವಿರುವುದೇ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ನಿರುತ್ಸಾಹ ಕಾಡಬಹುದು. ಕೌಟುಂಬಿಕವಾಗಿ ಮಕ್ಕಳಿಂದ ಸಂತಸ ನಿರೀಕ್ಷಿಸಬಹುದು.

ವೃಶ್ಚಿಕ: ಉತ್ಸಾಹದಿಂದ ಹೊಸ ಕೆಲಸಕ್ಕೆ ಕೈ ಹಾಕಿದರೂ ಅಡೆತಡೆಗಳಿಂದ ಉತ್ಸಾಹ ಕಳೆದುಕೊಳ್ಳುವಿರಿ. ಮಾನಸಿಕವಾಗಿ ದೃಢಸಂಕಲ್ಪ ಅಗತ್ಯ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಹಿರಿಯರೊಡನೆ ವ್ಯವಹರಿಸುವಾಗ ದುಡುಕಿ ಮಾತನಾಡಬೇಡಿ.

ಧನು: ಬಂಧು ಮಿತ್ರರ ಸಹಾಯದಿಂದ ಬರುವಂತಹ ಕಷ್ಟಗಳನ್ನು ಎದುರಿಸಿ ನಿಲ್ಲುವಿರಿ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯ ಭಾಗ್ಯವಿದೆ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ.

ಮಕರ: ಕಾರ್ಯನಿಮಿತ್ತ ದೂರ ಸಂಚಾರ ಮಾಡುವುದರಿಂದ ಕಾರ್ಯಸಿದ್ಧಿಯಾಗುವುದು. ಆದರೆ ಪ್ರಯಾಣದಲ್ಲಿ ಎಚ್ಚರ ಅಗತ್ಯ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ, ವ್ಯವಹಾರಗಳು ಲಾಭ ತಂದುಕೊಡಲಿವೆ. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ವೃತ್ತಿಮಾತ್ಸರ್ಯ ಅನುಭವಕ್ಕೆ ಬರುವುದು. ಮಾನಸಿಕವಾಗಿ ಅಸ್ಥಿರತೆ ಕಾಡಲಿದೆ. ತಾಳ್ಮೆ ಕಳೆದುಕೊಳ್ಳಬೇಡಿ.
ಮೀನ: ಬಂಧು ಬಳಗದವರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾಗಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದೇವಾಲಯ ಸಂದರ್ಶಿಸುವಿರಿ. ಗೃಹೋಪಯೋಗಿ ವಸ್ತುಗಳಿಗೆ ಅಧಿಕ ಧನವ್ಯಯಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಮುಂದಿನ ಸುದ್ದಿ
Show comments