Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 26 ಅಕ್ಟೋಬರ್ 2019 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನೆಯಲ್ಲಿ ಬಂಧು ಮಿತ್ರರ ಆಗಮನದಿಂದ ಓಡಾಟ ಹೆಚ್ಚಾಗಲಿದೆ. ಮಕ್ಕಳ ವಿಚಾರವಾಗಿ ಹಲವು ಜವಾಬ್ಧಾರಿಗಳನ್ನು ನಿಭಾಯಿಸಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ.

ವೃಷಭ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಆದರೆ ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗದ ಕರೆ ಬರದೇ ನಿರಾಶೆಯಾಗಬಹುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ವ್ಯಾಪಾರ ವ್ಯವಹಾರದಲ್ಲಿ ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರಿಕೆಯಿಂದಿರಿ.

ಮಿಥುನ: ಸ್ವ ಉದ್ಯೋಗಿಗಳಿಗೆ ವ್ಯಾಪಾರದಲ್ಲಿ ಲಾಭವಾಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕೌಟುಂಬಿಕವಾಗಿ ಹೊಸದೊಂದು ಜವಾಬ್ಧಾರಿಗೆ ಸಿದ್ಧರಾಗಬೇಕಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ಸಿಗಲಿದೆ. ನೆರೆಹೊರೆಯವರ ಚಾಡಿ ಮಾತಿನಿಂದ ಮನಸ್ಸಿಗೆ ಬೇಸರವಾಗಬಹುದು. ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಿಂಹ: ಸಾಮಾಜಿಕವಾಗಿ ಸ್ಥಾನ ಮಾನಗಳ ಬಗ್ಗೆ ಚಿಂತೆ ಮಾಡದೇ ಕೆಲಸ ಮಾಡಿ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಭಾಗ್ಯವಿದೆ. ದೇವತಾ ಪ್ರಾರ್ಥನೆ ಮಾಡಿ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಲಾಭವಾಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಮನಸ್ಸು ಮಾಡುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳಿಗೆ ಧನವಿನಿಯೋಗ ಮಾಡುವಿರಿ.

ತುಲಾ: ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ವ್ಯಾಪಾರ ವ್ಯವಹಾರದಲ್ಲಿ ಉನ್ನತಿ ಕಾಣಲಿದ್ದೀರಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಾಣುವಿರಿ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ.

ವೃಶ್ಚಿಕ: ಸ್ವ ಉದ್ಯೋಗಿಗಳಿಗೆ ಆರ್ಥಿಕವಾಗಿ ಹಿನ್ನಡೆಯಾಗಬಹುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಹಿರಿಯರ ಸಲಹೆ ಕೇಳಿ ಮುನ್ನಡೆದರೆ ಕೈಗೊಂಡ ಕೆಲಸದಲ್ಲಿ ಯಶಸ್ಸು ಸಾಧಿಸಬಹುದು. ಕೌಟುಂಬಿಕವಾಗಿ ಅಚ್ಚರಿಯ ವಾರ್ತೆಗಳು ಕೇಳಿಬರಲಿದೆ.

ಧನು: ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ನಿಮ್ಮ ದುಡುಕು ಮಾತಿನಿಂದ ಪ್ರೀತಿ ಪಾತ್ರ ಮನ ನೋಯಿಸದಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಹನೆಯಿಂದ ವರ್ತಿಸಬೇಕಾಗುತ್ತದೆ. ದುಡುಕಿ ಕೈಗೊಳ್ಳುವ ನಿರ್ಧಾರಗಳಿಂದ ಮುಂದೆ ತೊಂದರೆಯಾಗಬಹುದು. ಕೃಷಿಕರಿಗೆ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು. ಕೋರ್ಟು ಕಚೇರಿ ವ್ಯವಹಾರದಲ್ಲಿ ಮುನ್ನಡೆ ಸಿಗುವುದು.

ಕುಂಭ: ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಅಂದುಕೊಂಡ ಕೆಲಸಗಳನ್ನು ನೆರವೇರಿಸಲು ಕೆಲವೊಂದು ಅಡ್ಡಿ ಆತಂಕಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆಯೊಂದಿಗೆ ದಿನ ಆರಂಭಿಸಿದರೆ ಎಲ್ಲವೂ ಶುಭವಾಗುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಸಿಗಲಿದೆ.
ಮೀನ: ಹೊಸ ಆಸ್ತಿ, ಮನೆ ಖರೀದಿಗೆ ಮನಸ್ಸು ಮಾಡುವಿರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯ ಸಲಹೆ ಪಾಲಿಸಿ. ಹಿತ ಶತ್ರುಗಳ ಬಗ್ಗೆ ಎಚ್ಚರವಾಗಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments