Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 27 ಅಕ್ಟೋಬರ್ 2019 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ನಿಭಾಯಿಸಬೇಕಾಗುತ್ತದೆ. ಬಂಧು ಮಿತ್ರರ ಆಗಮನದಿಂದ ಓಡಾಟ ಹೆಚ್ಚಲಿದೆ. ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ದೇಹಾರೋಗ್ಯ ಹದತಪ್ಪದಂತೆ ಎಚ್ಚರವಹಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ವೃಷಭ: ಅವಿವಾಹಿತರು ಸಂಗಾತಿ ಆಯ್ಕೆ ಮಾಡಿಕೊಳ್ಳುವ ಸಂದರ್ಭ ಬಂದಾಗ ಎಚ್ಚರಿಕೆಯಿಂದ ಮಾಡಬೇಕು. ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆ ಎದುರಾಗಬಹುದು. ಹಿರಿಯರ ಮಾತಿಗೆ ಕಿವಿಗೊಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಿಥುನ: ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ ಮಾಡುವಿರಿ. ಆದಾಯವಿದ್ದಷ್ಟೇ ಖರ್ಚೂ ಇರುವುದು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ಸ್ವ ವ್ಯವಹಾರ ಮಾಡುವವರಿಗೆ ಅಧಿಕ ಲಾಭ ಸಿಗಲಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಅದೃಷ್ಟವಿದೆ. ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆ  ಇದ್ದರೆ ಒಳಿತು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಹೆಚ್ಚಿನ ಧನಾರ್ಜನೆಗಾಗಿ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ವ್ಯವಹಾರದಲ್ಲಿ ವಂಚನೆಯ ಭೀತಿಯಿದೆ. ನಯ ವಂಚಕರಿಂದ ದೂರವಿರುವುದು ಒಳಿತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ.

 
ಕನ್ಯಾ: ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿದೆ. ವಿದ್ಯಾವಂತರಿಗೆ ನಿರೀಕ್ಷೆಗೆ ತಕ್ಕ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ಸ್ವ ಉದ್ಯೋಗದಿಂದ ಲಾಭ ಬರಬಹುದು. ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವ ಮೊದಲು ದೇವತಾ ಪ್ರಾರ್ಥನೆ ಮಾಡಿ.

ತುಲಾ: ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ. ಇಷ್ಟ ಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿ ನೀಡುವುದು. ಆದರೆ ದೇಹಾರೋಗ್ಯ ತಪ್ಪದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ಕಿರು ಸಂಚಾರ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಆರ್ಥಿಕವಾಗಿ ಚೇತರಿಕೆ ಕಂಡುಬರವುದು. ವ್ಯಾಪಾರ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಅಂದುಕೊಂಡ ಕೆಲಸಗಳು ದೈವಾನುಕೂಲದಿಂದ ನೆರವೇರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಹಳೆಯ ಮಿತ್ರರ ಭೇಟಿಯಾಗುವಿರಿ.

ಧನು: ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಆದರೆ ನಿಮ್ಮ ದುಡುಕು, ವರ್ತನೆ, ಮಾತು ಇತರರ ಮನಸ್ಸಿಗೆ ನೋವುಂಟು ಮಾಡಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು. ದೇವಾಲಯ ಭೇಟಿ ಸಾಧ‍್ಯತೆ.

ಮಕರ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕುವ ಮೊದಲು ಸಂಗಾತಿಯ ಸಲಹೆಗೆ ಕಿವಿಗೊಡಿ. ವಾಸಸ್ಥಳ ಬದಲಾವಣೆಗೆ ಮನಸ್ಸು ಮಾಡುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ.

ಕುಂಭ: ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಎಚ್ಚರಿಕೆಯಿಂದಿರಿ. ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಮಕ್ಕಳಿಂದ ಸಂತಸ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.
ಮೀನ: ಮಹಿಳಾ ಉದ್ಯೋಗಿಗಳಿಗೆ ಮುನ್ನಡೆಯ ಲಾಭವಾಗಲಿದೆ. ಗೃಹೋಪಯೋಗಿ ವಸ್ತುಗಳಿಗೆ ಧನವಿನಿಯೋಗ ಮಾಡುವಿರಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು. ನಿರಾಸೆ ಬೇಡ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments