Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 29 ಅಕ್ಟೋಬರ್ 2019 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದಿನದಾರಂಭದಲ್ಲಿ ಕಿರಿ ಕಿರಿಯಿದ್ದರೂ ನಿಧಾನವಾಗಿ ನಿಮ್ಮ ಮನೋಬಲದಿಂದ ನೆಮ್ಮದಿ ಕಂಡುಕೊಳ್ಳುವಿರಿ. ಸಂಗಾತಿ ಜತೆಗೆ ಹೊಂದಾಣಿಕೆಯಿಂದ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುವುದು ಮುಖ್ಯ. ದೇಹಾರೋಗ್ಯದಲ್ಲಿ ಏರುಪೇರಾದೀತು. ಕಾಳಜಿ ಅಗತ್ಯ.

ವೃಷಭ: ಪ್ರಿಯ ಜನರ ಭೇಟಿ ಮನಸ್ಸಿಗೆ ಖುಷಿ ಕೊಡುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಸ್ಥಾನದಲ್ಲಿ ಬಡ್ತಿ ಸಂಭವವಿದೆ. ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾಗಬಹುದು. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಸಫಲತೆ ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ಆದರೆ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಅಪ್ಪಿ ತಪ್ಪಿಯೂ ಇಂದು ಸಾಲ ಕೊಡಲು ಹೋಗಬೇಡಿ. ಪ್ರೀತಿ ಪಾತ್ರರೊಂದಿಗೆ ಸುಮಧುರ ಕ್ಷಣ ಕಳೆಯುವಿರಿ. ದಾಯಾದಿ ಕಲಹಗಳು ಅಂತ್ಯವಾಗಿ ನೆಮ್ಮದಿ ಮೂಡುವುದು.

ಕರ್ಕಟಕ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿಗಳು ಬಂದರೂ ನೆಮ್ಮದಿಗೆ ಕೊರತೆಯಿರದು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗುವುದು. ದೇವಾಲಯ ಸಂದರ್ಶನ ಸಾಧ್ಯತೆಯಿದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಸ್ಥಾನ ಪಲ್ಲಟ ಭೀತಿಯಿರಲಿದೆ. ಸಂಗಾತಿಯ ಸಹಕಾರ ಸಿಗುವುದು. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರವಾಗಿರಬೇಕು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

 
ಕನ್ಯಾ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಮನೆಯಲ್ಲಿ ಅತಿಥಿಗಳ ಆಮನವಾಗಲಿದ್ದು, ಮನಸ್ಸಿಗೆ ಖುಷಿಯಾಗುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಹೆಚ್ಚಿನ ಧನಾದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಅಲೆದಾಡುವುದು ತಪ್ಪದು. ತಾಳ್ಮೆ ಕಳೆದುಕೊಳ್ಳಬೇಡಿ. ವ್ಯವಹಾರದಿಂದ ಲಾಭವಾಗಲಿದೆ.

ವೃಶ್ಚಿಕ: ಪ್ರೀತಿ ಪಾತ್ರರಿಂದ ದೂರವಾಗುವ ಅಗಲಿಕೆಯ ನೋವು ಕಾಡಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಶೈಕ್ಷಣಿಕ ರಂಗದಲ್ಲಿರುವವರು ಮೆಚ್ಚುಗೆಗೆ ಪಾತ್ರರಾಗುವರು. ಕಲಾರಾಧಕರಿಗೆ ಕೀರ್ತಿ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಧನು: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಎದುರಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಕೃಷಿ ಕ್ಷೇತ್ರದಲ್ಲಿರುವವರಿಗೆ ವ್ಯವಹಾರದಲ್ಲಿ ನೂರೆಂಟು ವಿಘ್ನಗಳು ಎದುರಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೇ ನಿಮ್ಮ ಏಳಿಗೆಗೆ ಅಸೂಯೆಪಡುವ ಪರಿಸ್ಥಿತಿ ಇರಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ.

ಕುಂಭ: ಪ್ರೀತಿ ಪಾತ್ರರೊಂದಿಗಿನ ಒಡನಾಟ ಮನಸ್ಸಿಗೆ ಖುಷಿ ನೀಡುವುದು. ಆದರೆ ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯದ ಬಗ್ಗೆ ಕೊಂಚ ಕಾಳಜಿ ಮಾಡಬೇಕಾಗುತ್ತದೆ. ಕಷ್ಟಗಳು ಬಂದಾಗ ಮಿತ್ರರ ನೆರವು ಸಿಗಲಿದೆ. ಸಂಗಾತಿಯ ಅಸಹಕಾರ ಮನಸ್ಸಿಗೆ ನೋವುಂಟುಮಾಡಬಹುದು.

ಮೀನ: ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಎದುರಾಗಬಹುದು. ವಾಹನ ಖರೀದಿ ಯೋಗವಿದೆ. ಆದರೆ ಖರ್ಚು ವೆಚ್ಚದ ಬಗ್ಗೆ ಹಿಡಿತ ಅಗತ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments