ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 1 ನವೆಂಬರ್ 2019 (08:22 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿಗಳು ನಿಮ್ಮ ಮನಸ್ಸನ್ನು ಹೈರಾಣಾಗಿಸಲಿದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳು ಮೂಡಬಹುದು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕ ವಾತಾವರಣವಿರಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ನಿಮ್ಮ ಬಗ್ಗೆ ಪ್ರಶಂಸೆ ವ್ಯಕ್ತವಾಗುವುದು. ನಿಮ್ಮ ಕ್ರಿಯಾತ್ಮಕತೆಯಿಂದ ಉತ್ತಮ ಫಲ ಪಡೆಯುವಿರಿ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರದಿಂದಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಹುಡುಕಾಟದಲ್ಲಿ ಯಶಸ್ಸು ಸಿಗಲಿದೆ.

ಮಿಥುನ: ವ್ಯಾಪಾರ, ವ್ಯವಹಾರಗಳು ಹೆಚ್ಚು ಲಾಭದಾಯಕವೆನಿಸಲಿದೆ ವೃತ್ತಿರಂಗದಲ್ಲಿ ಕಾರ್ಯದೊತ್ತಡದವಿದ್ದರೂ ನಿಮ್ಮ ಜವಾಬ್ಧಾರಿಯನ್ನು ನಿಭಾಯಿಸಬೇಕಾಗುತ್ತದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ಶುಭ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಹಿರಿಯರ ಸಲಹೆಗಳು ಇಷ್ಟವಾಗದೇ ಹೋಗಬಹುದು. ನಿರೀಕ್ಷಿತ ಮೂಲಗಳಿಂದ ಆದಾಯ ಬರಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಿ ಅಂದುಕೊಂಡಿದ್ದನ್ನು ಸಾಧಿಸುವಿರಿ.

ಸಿಂಹ: ಅನಗತ್ಯ ವಿಚಾರಗಳಲ್ಲಿ ವಾದ ವಿವಾದಗಳುಂಟಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ದುಡುಕಿನ ವರ್ತನೆಯಿಂದ ಕಾರ್ಯ ಹಾಳಾಗಬಹುದು. ಮಕ್ಕಳ ವಿಚಾರದಲ್ಲಿ ಚಿಂತೆಯಾಗಬಹುದು. ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರ.

 
ಕನ್ಯಾ: ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ಆದರೆ ಪ್ರಯಾಣದಲ್ಲಿ ವಾಹನ ಸವಾರರು ಎಚ್ಚರವಾಗಿರಬೇಕು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಕೈ ತಪ್ಪಿ ಹೋದ ಅವಕಾಶಗಳ ಬಗ್ಗೆ ಚಿಂತೆ ಮಾಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ.

ತುಲಾ: ಕುಟುಂಬದಲ್ಲಿ ಶುಭ ಕಾರ್ಯ ನಿಮಿತ್ತ ತಯಾರಿಗಳು ನಡೆಯಲಿವೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಸಂಭ್ರಮದ ವಾತಾವರಣ ಮನೆ ಮಾಡಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಲಭ್ಯವಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ:ಆರ್ಥಿಕವಾಗಿ ಚೇತರಿಕೆ ಕಂಡುಬಂದು ಕೈಗೊಂಡ ಯೋಜನೆಗಳು ಫಲಗೂಡಲಿವೆ. ಆದರೆ ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಸಂಗಾತಿಯ ಮನೋಕಾಮನೆ ಪೂರೈಸಲು ಧನವ್ಯಯವಾಗಬಹುದು. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಕೈ ತಪ್ಪಿ ಹೋದ ಅವಕಾಶಗಳನ್ನು ಮರಳಿ ಪಡೆಯಲು ಇದು ಸಕಾಲ. ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ ಮಿತ್ರರ ನೆರವು ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರವಹಿಸಬೇಕು. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುತ್ತದೆ.

ಮಕರ: ನಿಮ್ಮ ಪ್ರಯತ್ನಬಲದಲ್ಲಿ ನಂಬಿಕೆಯಿಡಿ. ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಮನೆ, ಆಸ್ತಿ ಖರೀದಿಗೆ ಚಿಂತನೆ ನಡೆಸುವಿರಿ. ಉದ್ಯೋಗ ಬದಲಾವಣೆ ಮಾಡುವ ಮನಸ್ಸಾಗುವುದು. ಸಾಲಗಳು ಮರುಪಾವತಿಯಾಗಲಿವೆ. ವ್ಯವಹಾರದಲ್ಲಿ ಎಚ್ಚರ.

ಕುಂಭ: ಆಗಾಗ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಕಾಳಜಿ ವಹಿಸುವುದು ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಸಹೋದ್ಯೋಗಿಗಳೇ ಅಸೂಯೆಪಡುವರು. ಮೇಲಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವರ್ತಿಸಿ.

ಮೀನ: ಹೊಸ ಕೆಲಸಗಳಿಗೆ ಕೈ ಹಾಕಲು ಉತ್ಸಾಹ ಮೂಡಬಹುದು. ಆದರೆ ಸಮಯ ಕಳೆದಂತೆ ನಿರುತ್ಸಾಹ ಕಾಡಿ ಅರ್ಧಕ್ಕೇ ಕುಂಠಿತವಾಗಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಮುಂದಿನ ಸುದ್ದಿ
Show comments