Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 2 ನವೆಂಬರ್ 2019 (07:13 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಹುದಿನಗಳಿಂದ ಕಾಡುತ್ತಿದ್ದ ಮನಃಪ್ರಯಾಸಕ್ಕೆ ಇಂದು ತೆರೆ ಕಾಣಲಿದೆ. ಕೌಟುಂಬಿಕವಾಗಿ ನೆಮ್ಮದಿ ಮೂಡುವುದು. ನೀವು ಅಂದುಕೊಂಡ ಕೆಲಸಗಳನ್ನು ನಿರ್ವಹಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಪ್ರೀತಿ ಪಾತ್ರರ ಅಗಲಿಕೆಯ ನೋವು ಕಾಡಬಹುದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಅವಕಾಶ ಕೊಡದಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಕಂಡುಬರಬಹುದು. ಆದರೆ ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ವಹಿಸುವುದು ಉತ್ತಮ.

ಮಿಥುನ: ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಅಂದುಕೊಂಡ ರೀತಿಯಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಮೇಲಧಿಕಾರಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕೃಷಿಕರಿಗೆ ತಮ್ಮ ಚಟುವಟಿಕೆಗಳಿಗೆ ಕೊಂಚ ವಿಘ್ನಗಳು ಎದುರಾದೀತು. ತಾಳ್ಮೆಯಿಂದಿರಿ.

ಸಿಂಹ: ಸಾಮಾಜಿಕವಾಗಿ ನೀವು ಕೈಗೊಂಡ ಕೆಲಸಗಳಿಗೆ ಜನಮನ್ನಣೆ ಸಿಗುವುದು. ಇಷ್ಟಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟ ಭೀತಿಯಿದೆ. ಕೆಳಹಂತದ ನೌಕರರಿಗೆ ಮುನ್ನಡೆ ಸಿಗುವುದು. ವಿದ್ಯಾರ್ಥಿಗಳು ಕಠಿಣ ಪ್ರಯತ್ನ ನಡೆಸಬೇಕು.

 
ಕನ್ಯಾ: ಅಧಿಕಾರಿ ವರ್ಗದವರಿಂದ ಉದ್ಯೋಗ ಕ್ಷೇತ್ರದಲ್ಲಿ ಕಿರಿ ಕಿರಿ ಅನುಭವಿಸಬೇಕಾಗುತ್ತದೆ. ದುಡುಕಿನ ವರ್ತನೆ ತೋರದಿರಿ. ಪಾಲು ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರವಿರಲಿ. ಅಧಿಕ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ.

ತುಲಾ: ವಿದ್ಯಾರ್ಥಿಗಳಿಗೆ ಅಭ್ಯಾಸ ನಿಮಿತ್ತ ವಿದೇಶಯಾನ ಮಾಡುವ ಯೋಗವಿದೆ. ಎಷ್ಟೋ ದಿನದಿಂದ ಬಾಕಿ ಬರಬೇಕಿದ್ದ ಹಣ ಸಂದಾಯವಾಗುವುದು. ಆರ್ಥಿಕವಾಗಿ ಚೇತರಿಕೆ ಕಂಡುಬಂದರೂ ಅನಿರೀಕ್ಷಿತ ಖರ್ಚುಗಳು ಬಂದೀತು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ.

ವೃಶ್ಚಿಕ: ಹೊಸ ಕೆಲಸಗಳನ್ನು ಆರಂಭಿಸುವಾಗ ಹಲವು ಅಡ್ಡಿ ಆತಂಕಗಳು ಎದುರಾದೀತು. ಆದರೆ ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ.

ಧನು: ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಲ್ಲಿ ಅಂತ್ಯ ಸಿಗುವುದು. ನಿಮ್ಮ ದುಡುಕು ಮಾತಿನಿಂದ ಸಂಗಾತಿಯ ಮನಸ್ಸಿಗೆ ಬೇಸರವಾಗಬಹುದು. ಮಕ್ಕಳಿಂದ ಸಂತಸದ ವಾರ್ತೆ ಸಿಗುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ಮಕರ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಕಳ್ಳತನದ ಭೀತಿಯಿದೆ. ಎಚ್ಚರವಾಗಿರಬೇಕು. ಇಷ್ಟಮಿತ್ರರೊಂದಿಗೆ ಭೋಜನ ಸಾಧ‍್ಯತೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ಅಗತ್ಯ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕುಂಭ: ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಬಹುದು. ಹಿರಿಯರಿಗೆ ಆರೋಗ್ಯದಲ್ಲಿ ಸಮಸ್ಯೆಯಾಗಬಹುದು. ಕೌಟುಂಬಿಕವಾಗಿ ಬಿಡುವಿಲ್ಲದ ಓಡಾಟವಿರಬಹುದು. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಲಭಿಸುವುದು. ನೆರೆಹೊರೆಯವರೊಂದಿಗೆ ವಾಗ್ವಾಗವಾದಂತೆ ಎಚ್ಚರವಹಿಸಿ. ಸ್ವಯಂ ಉದ್ಯೋಗಿಗಳಿಗೆ ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾಗಬಹುದು. ತಾಳ್ಮೆಗೆಡಬೇಡಿ. ಮನೆಯಲ್ಲಿ ಶಾಂತಿ ಕದಡದಂತೆ ನೋಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

ಮುಂದಿನ ಸುದ್ದಿ
Show comments