Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 4 ನವೆಂಬರ್ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕ ವಾತಾವರಣವಿರಲಿದೆ. ಕೌಟುಂಬಿಕವಾಗಿ ಕೆಲವೊಂದು ಮಾನಸಿಕ ಕಿರಿ ಕಿರಿಗಳು ಕೊನೆಯಾಗಲಿವೆ. ಆದರೆ ಋಣಾತ್ಮಕ ಚಿಂತೆಗಳು ಕಾಡುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.

ವೃಷಭ: ವ್ಯಾಪಾರ ವ್ಯವಹಾರದಲ್ಲಿ ಉನ್ನತಿ ಕಂಡುಬರುವುದು. ಆದರೆ ಹಿತ ಶತ್ರುಗಳು ವಂಚನೆ ಮಾಡುವ ಭೀತಿಯಿರಲಿದೆ. ಎಚ್ಚರಿಕೆಯಿಂದ ವ್ಯವಹರಿಸಬೇಕು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಸಂಗಾತಿಯೊಂದಿಗೆ ಕಲಹವಾಗಬಹುದು. ಮನೆಯಲ್ಲಿ ಅಶಾಂತಿಯ ವಾತಾವರಣವಿರಲಿದೆ. ದುಡುಕು ಮಾತು, ವರ್ತನೆಗೆ ಕಡಿವಾಣ ಹಾಕಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಹೆಚ್ಚಿ ಆದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಯೋಚಿಸುವಿರಿ. ಆದರೆ ಅಧಿಕ ಖರ್ಚುಗಳಿಗೆ ಕಡಿವಾಣ ಹಾಕುವುದು ಅಗತ್ಯ. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಾಗುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಅಗತ್ಯ.

ಸಿಂಹ: ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಪಡೆಯುವಿರಿ. ಕಲಾ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸುವರು. ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿ ಯೋಗವಿದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

 
ಕನ್ಯಾ: ವಿದ್ಯಾರ್ಥಿಗಳಿಗೆ ಅಭ್ಯಾಸ ನಿಮಿತ್ತ ದೂರ ಸಂಚಾರ ಅಥವಾ ವಿದೇಶ ಯಾನದ ಯೋಗವಿದೆ. ಪಾಲಿಗೆ ಬಂದ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಪ್ರೇಮಿಗಳ ಗುಟ್ಟು ಮನೆಯವರೆದುರು ಬಹಿರಂಗವಾಗಲಿದೆ. ಹಿರಿಯರಿಂದ ಬಳವಳಿಯಾಗಿ ಬಂದ ವಸ್ತುಗಳನ್ನು ಜತನವಾಗಿ ಕಾಪಾಡಿಕೊಳ್ಳಬೇಕಿದೆ. ದಾಯಾದಿಗಳೊಂದಿಗೆ ಮನಸ್ತಾಪವಾಗದಂತೆ ನೋಡಿಕೊಳ್ಳಿ.

ವೃಶ್ಚಿಕ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಅನಾರೋಗ್ಯ ಖಂಡಿತಾ. ಮನೆ ವಿಚಾರದಲ್ಲಿ ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಹೊಸ ಮನೆ, ಭೂಮಿ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ಕೌಟುಂಬಿಕ ಜವಾಬ್ಧಾರಿಗಳನ್ನು ಸಮರ್ಥವಾಗಿ ನಿಭಾಯಿಸಬೇಕಾದ ಕಾಲವಿದು. ಬಿಡುವಿಲ್ಲದ ಕೆಲಸಗಳಿಂದಾಗಿ ದೇಹ ಹೈರಾಣಾಗಬಹುದು. ದೇಹಾರೋಗ್ಯದ ಮೇಲೆ ಕಾಳಜಿಯಿರಲಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಮಕ್ಕಳ ವಿಚಾರದಲ್ಲಿ ಚಿಂತೆಯಾಗಬಹುದು.

ಮಕರ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾದ ತೀರ್ಪು ಬರಲಿದೆ. ಆರ್ಥಿಕವಾಗಿ ಧನಾಗಮನವಿದ್ದು, ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚದ ಬಗ್ಗೆ ನಿಗಾ ಅಗತ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ದೂರ ಸಂಚಾರದಿಂದ ದೇಹಾಯಾಸವಾಗಬಹುದು. ಒಂದು ರೀತಿಯ ಜಡತೆ ಆವರಿಸುವುದು. ಆದರೆ ಕರ್ತವ್ಯದ ಕರೆಗೆ ಓಗೊಡಲೇ ಬೇಕಾದ ಅನಿವಾರ್ಯತೆ ಎದುರಾಗುವುದು. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗುವುದು. ವಿದ್ಯಾರ್ಥಿಗಳಿಗೆ ಮುನ್ನಡೆ.

ಮೀನ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ. ಪ್ರೀತಿ ಪಾತ್ರರ ಭೇಟಿ, ಸಹ ಭೋಜನ ಮನಸ್ಸಿಗೆ ಖುಷಿ ನೀಡುವುದು. ದೈವಾನುಕೂಲದಿಂದ ವ್ಯವಹಾರಗಳು ಇಂದು ನೀವಂದುಕೊಂಡಂತೆ ನಡೆಯಲಿವೆ. ಆತ್ಮವಿಶ್ವಾಸದಿಂದ ಮುನ್ನಡೆಯಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments