Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 5 ನವೆಂಬರ್ 2019 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪತ್ನಿಯ ಸಲುವಾಗಿ ಹೊಸ ವಸ್ತು, ಚಿನ್ನಾಭರಣ ಖರೀದಿ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಮಾನಸಿಕ ಚಿಂತೆಗಳಿಗೆ ಕೊಂಚ ಕಡಿವಾಣ ಹಾಕಬೇಕಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು.

ವೃಷಭ: ಇಂಜಿನಿಯರಿಂಗ್ ವೃತ್ತಿಯವರಿಗೆ ವೃತ್ತಿಯಲ್ಲಿ ಮುನ್ನಡೆಯ ಯೋಗವಿದೆ. ಸ್ವ ಉದ್ಯೋಗಿಗಳಿಗೆ ವ್ಯವಹಾರದಲ್ಲಿ ಪ್ರಗತಿ ಕಂಡುಬರುವುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.

ಮಿಥುನ: ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಒಂದು ರೀತಿಯ ಸಂಭ್ರಮದ ವಾತಾವರಣವಿರಲಿದೆ. ವಾಹನ ಖರೀದಿ ಯೋಗವಿದೆ. ಆಸ್ತಿ ವ್ಯವಹಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಲು ಇದುವೇ ಸಕಾಲ. ಆಸ್ತಿ ಖರೀದಿ ಮಾಡಲು ಮುಂದಾಗುವಿರಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಮಹಿಳೆಯರಿಂದ ಅಪವಾದದ ಭೀತಿಯಿರುತ್ತದೆ. ಎಚ್ಚರಿಕೆಯಿಂದ ವ್ಯವಹರಿಸಿ. ಸಂಗಾತಿಯ ದೇಹಾರೋಗ್ಯ ಸ್ಥಿತಿ ಹದಗೆಟ್ಟು ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಮಕ್ಕಳ ಭವಿಷ್ಯ ಸುಗಮವಾಗಲಿದೆ. ಅಧಿಕಾರಿ ವರ್ಗದವರಿಗೆ ಅಸಮಾಧಾನವಾಗಬಹುದು.

 
ಕನ್ಯಾ: ಮನೆಯಲ್ಲಿ ಶಾಂತಿ ಸಮಾಧಾನ ನೆಲೆಸಿರುತ್ತದೆ. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಸಾಲ ಮಾಡಲು ಹೋದರೆ ತೊಂದರೆ ತಪ್ಪಿದ್ದಲ್ಲ. ವಿದ್ಯಾರ್ಥಿಗಳಿಗೆ ಕೆಟ್ಟ ಸಂಗದ ಅಪಾಯವಿದೆ. ಪ್ರೀತಿ ಪಾತ್ರರ ಮಾತಿಗೆ ಕಿವಿಗೊಡಿ.

ತುಲಾ: ಇಂದು ನಿಮ್ಮ ಮಾತಿನ ಮೇಲೆ ನಿಗಾ ಇಡಬೇಕು. ತಾಳ್ಮೆ ಸಮಾಧಾನದಿಂದ ಮುನ್ನಡೆಯಬೇಕಾದ ಅಗತ್ಯವಿದೆ. ಮಕ್ಕಳ ವಿದ್ಯಾಭ‍್ಯಾಸಕ್ಕಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ವಿದೇಶಯಾನ ಯೋಗ ಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಶ್ಚಿಕ: ಹಿರಿಯರ ಮಾರ್ಗದರ್ಶನದಂತೆ ನಡೆದರೆ ಅಂದುಕೊಂಡ ಕಾರ್ಯಗಳು ಸುಗಮವಾಗಿ ನೆರವೇರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಹಣಕಾಸಿನ ಅಡಚಣೆ ಉಂಟಾಗಬಹುದು. ನೆರೆಹೊರೆಯವರಿಂದ ಚಾಡಿ ಮಾತು ಕೇಳಬೇಕಾಗಬಹುದು. ತಾಳ್ಮೆಯಿಂದಿರಿ.

ಧನು: ಅಲಂಕಾರಿಕ ವಸ್ತುಗಳಿಗಾಗಿ ಹೆಚ್ಚಿನ ಧನವಿನಿಯೋಗ ಮಾಡುವಿರಿ. ಪಾಲು ಬಂಡವಾಳ ಹೂಡಿಕೆಗೆ ಸದವಾಕಾಶಗಳು ಒದಗಿಬರಲಿವೆ. ಸಂತಾನಾಪೇಕ್ಷಿತ ದಂಪತಿಗೆ ಸಿಹಿ ಸುದ್ದಿ ದೊರಕಬಹುದು. ಆರ್ಥಿಕ ಸಮಸ್ಯೆಗಳು ದೂರವಾಗಲಿದೆ. ವಿದ್ಯಾರ್ಥಿಗಳು ಕಠಿಣ ಪ್ರಯತ್ನ ನಡೆಸಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮನಸ್ಸು ಬದಲಾವಣೆ ಬಯಸುವುದು. ಆದರೆ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಈ ದಿನ ನೀವು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿಬಾರದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ.

ಕುಂಭ: ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಅಗತ್ಯ. ಗೃಹೋಪಯೋಗಿ ವಸ್ತುಗಳಿಗಾಗಿ ಅಧಿಕ ಧನವಿನಿಯೋಗವಾಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಸಹೋದ್ಯೋಗಿಗಳೊಂದಿಗೆ ಸಹಕಾರ ನಿರೀಕ್ಷಿಸಿದರೆ ನಿರಾಸೆಯಾಗಬಹುದು.

ಮೀನ: ಕಷ್ಟದ ಸಂದರ್ಭದಲ್ಲಿ ಆಪ್ತರ ಸಲಹೆ ಸಿಗುವುದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆ ಸಿಗುವುದು. ದಾಯಾದಿಗಳೊಂದಿಗೆ ಆಸ್ತಿ ವಿವಾದಕ್ಕೆ ಹಿರಿಯರ ಮಧ್ಯಸ್ಥಿಕೆ ಪರಿಹಾರ ನೀಡಲಿದೆ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಬಳ ಬಂದ ತಕ್ಷಣ ಹೀಗೆ ಮಾಡಿದರೆ ಹಣ ಉಳಿತಾಯವಾಗುತ್ತದೆ