Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 5 ನವೆಂಬರ್ 2019 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪತ್ನಿಯ ಸಲುವಾಗಿ ಹೊಸ ವಸ್ತು, ಚಿನ್ನಾಭರಣ ಖರೀದಿ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಮಾನಸಿಕ ಚಿಂತೆಗಳಿಗೆ ಕೊಂಚ ಕಡಿವಾಣ ಹಾಕಬೇಕಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು.

ವೃಷಭ: ಇಂಜಿನಿಯರಿಂಗ್ ವೃತ್ತಿಯವರಿಗೆ ವೃತ್ತಿಯಲ್ಲಿ ಮುನ್ನಡೆಯ ಯೋಗವಿದೆ. ಸ್ವ ಉದ್ಯೋಗಿಗಳಿಗೆ ವ್ಯವಹಾರದಲ್ಲಿ ಪ್ರಗತಿ ಕಂಡುಬರುವುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.

ಮಿಥುನ: ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಒಂದು ರೀತಿಯ ಸಂಭ್ರಮದ ವಾತಾವರಣವಿರಲಿದೆ. ವಾಹನ ಖರೀದಿ ಯೋಗವಿದೆ. ಆಸ್ತಿ ವ್ಯವಹಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಲು ಇದುವೇ ಸಕಾಲ. ಆಸ್ತಿ ಖರೀದಿ ಮಾಡಲು ಮುಂದಾಗುವಿರಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಮಹಿಳೆಯರಿಂದ ಅಪವಾದದ ಭೀತಿಯಿರುತ್ತದೆ. ಎಚ್ಚರಿಕೆಯಿಂದ ವ್ಯವಹರಿಸಿ. ಸಂಗಾತಿಯ ದೇಹಾರೋಗ್ಯ ಸ್ಥಿತಿ ಹದಗೆಟ್ಟು ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಮಕ್ಕಳ ಭವಿಷ್ಯ ಸುಗಮವಾಗಲಿದೆ. ಅಧಿಕಾರಿ ವರ್ಗದವರಿಗೆ ಅಸಮಾಧಾನವಾಗಬಹುದು.

 
ಕನ್ಯಾ: ಮನೆಯಲ್ಲಿ ಶಾಂತಿ ಸಮಾಧಾನ ನೆಲೆಸಿರುತ್ತದೆ. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಸಾಲ ಮಾಡಲು ಹೋದರೆ ತೊಂದರೆ ತಪ್ಪಿದ್ದಲ್ಲ. ವಿದ್ಯಾರ್ಥಿಗಳಿಗೆ ಕೆಟ್ಟ ಸಂಗದ ಅಪಾಯವಿದೆ. ಪ್ರೀತಿ ಪಾತ್ರರ ಮಾತಿಗೆ ಕಿವಿಗೊಡಿ.

ತುಲಾ: ಇಂದು ನಿಮ್ಮ ಮಾತಿನ ಮೇಲೆ ನಿಗಾ ಇಡಬೇಕು. ತಾಳ್ಮೆ ಸಮಾಧಾನದಿಂದ ಮುನ್ನಡೆಯಬೇಕಾದ ಅಗತ್ಯವಿದೆ. ಮಕ್ಕಳ ವಿದ್ಯಾಭ‍್ಯಾಸಕ್ಕಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ವಿದೇಶಯಾನ ಯೋಗ ಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಶ್ಚಿಕ: ಹಿರಿಯರ ಮಾರ್ಗದರ್ಶನದಂತೆ ನಡೆದರೆ ಅಂದುಕೊಂಡ ಕಾರ್ಯಗಳು ಸುಗಮವಾಗಿ ನೆರವೇರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಹಣಕಾಸಿನ ಅಡಚಣೆ ಉಂಟಾಗಬಹುದು. ನೆರೆಹೊರೆಯವರಿಂದ ಚಾಡಿ ಮಾತು ಕೇಳಬೇಕಾಗಬಹುದು. ತಾಳ್ಮೆಯಿಂದಿರಿ.

ಧನು: ಅಲಂಕಾರಿಕ ವಸ್ತುಗಳಿಗಾಗಿ ಹೆಚ್ಚಿನ ಧನವಿನಿಯೋಗ ಮಾಡುವಿರಿ. ಪಾಲು ಬಂಡವಾಳ ಹೂಡಿಕೆಗೆ ಸದವಾಕಾಶಗಳು ಒದಗಿಬರಲಿವೆ. ಸಂತಾನಾಪೇಕ್ಷಿತ ದಂಪತಿಗೆ ಸಿಹಿ ಸುದ್ದಿ ದೊರಕಬಹುದು. ಆರ್ಥಿಕ ಸಮಸ್ಯೆಗಳು ದೂರವಾಗಲಿದೆ. ವಿದ್ಯಾರ್ಥಿಗಳು ಕಠಿಣ ಪ್ರಯತ್ನ ನಡೆಸಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮನಸ್ಸು ಬದಲಾವಣೆ ಬಯಸುವುದು. ಆದರೆ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಈ ದಿನ ನೀವು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿಬಾರದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ.

ಕುಂಭ: ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಅಗತ್ಯ. ಗೃಹೋಪಯೋಗಿ ವಸ್ತುಗಳಿಗಾಗಿ ಅಧಿಕ ಧನವಿನಿಯೋಗವಾಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಸಹೋದ್ಯೋಗಿಗಳೊಂದಿಗೆ ಸಹಕಾರ ನಿರೀಕ್ಷಿಸಿದರೆ ನಿರಾಸೆಯಾಗಬಹುದು.

ಮೀನ: ಕಷ್ಟದ ಸಂದರ್ಭದಲ್ಲಿ ಆಪ್ತರ ಸಲಹೆ ಸಿಗುವುದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆ ಸಿಗುವುದು. ದಾಯಾದಿಗಳೊಂದಿಗೆ ಆಸ್ತಿ ವಿವಾದಕ್ಕೆ ಹಿರಿಯರ ಮಧ್ಯಸ್ಥಿಕೆ ಪರಿಹಾರ ನೀಡಲಿದೆ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments