Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 8 ನವೆಂಬರ್ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಉತ್ಸಾಹದಾಯಕ ವಾತಾವರಣವಿರಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬಂದು ಅಭಿವೃದ್ಧಿ ಕಂಡುಬರುವುದು. ಸಣ್ಣ ಪುಟ್ಟ ವಿಚಾರಗಳಿಗೆ ಕೊರಗುವುದನ್ನು ಬಿಡಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ.

ವೃಷಭ: ಸ್ವಾಭಿಮಾನಕ್ಕೆ ಧಕ್ಕೆಯಾಗುವ ಪ್ರಸಂಗಗಳು ಎದುರಾಗಬಹುದು. ತಾಳ್ಮೆಯಿಂದ ಮುಂದುವರಿಯಬೇಕು. ಬೇಡದ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ವೃತ್ತಿರಂಗದಲ್ಲಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಆರ್ಥಿಕವಾಗಿ ಚೇತರಿಕೆ ಇರುವುದು.

ಮಿಥುನ: ವ್ಯವಹಾರದಲ್ಲಿ ಲಾಭ ಕಂಡುಬಂದು, ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಮಾನಸಿಕವಾಗಿ ಸಂತೋಷ ಕಾಣುವಿರಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ.

ಕರ್ಕಟಕ: ಕೌಟುಂಬಿಕವಾಗಿ ಬರುವ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗವಾಕಾಶಗಳು ಕೂಡಿಬರಲಿವೆ.

ಸಿಂಹ: ಅನಿರೀಕ್ಷಿತ ರೂಪದಲ್ಲಿ ಧನಾಗಮನವಾಗಲಿದೆ. ಸನ್ಮಿತ್ರರ ಭೇಟಿ, ಸಹವಾಸ ಮನಸ್ಸಿಗೆ ಇನ್ನಷ್ಟು ನೆಮ್ಮದಿ ಕೊಡುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಾಗ ಎಚ್ಚರವಿರಬೇಕು. ಮಾನಸಿಕವಾಗಿ ಕಿರಿ ಕಿರಿ ಇರಲಿದೆ. ತಾಳ್ಮೆ ಇರಲಿದೆ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಅನವಶ್ಯಕ ತಪ್ಪುಗಳಿಂದ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗಬಹುದು. ಎಚ್ಚರಿಕೆಯಿಂದ ವ್ಯವಹರಿಸಬೇಕು. ಮಾನಸಿಕವಾಗಿ ಚಿಂತೆ ಕಾಡಲಿದೆ. ಮಕ್ಕಳಿಂದ ಸಂತಸ ಸಿಗುವುದು. ವಿದ್ಯಾರ್ಥಿಗಳಲ್ಲಿ ನಿರುತ್ಸಾಹ ಕಂಡುಬರಬಹುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಸಂಕಷ್ಟದ ಸಮಯದಲ್ಲಿ ನಿಮ್ಮ ಆತ್ಮವಿಶ್ವಾಸ, ಸಮಯ ಪ್ರಜ್ಞೆಯೇ ನಿಮ್ಮನ್ನು ಕಾಪಾಡಲಿದೆ. ಅನಗತ್ಯ  ವಿವಾದಗಳಿಮದ ದೂರವಿರುವುದು ಒಳಿತು. ಆರ್ಥಿಕವಾಗಿ ಆದಾಯ ಉತ್ತಮವಾಗಿರುವುದು. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಲಾಭ ಕಂಡುಬರುವುದು.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಆಗ್ರಹಿಸುವುದು. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ.  ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಕಿರು ಸಂಚಾರ ಯೋಗವಿದೆ.

ಧನು: ಹಂತ ಹಂತವಾಗಿ ಅಭಿವೃದ್ಧಿ ತೋರಿಬರಲಿದೆ. ಚಿಂತೆ ಬೇಕಾಗಿಲ್ಲ. ಸಂಗಾತಿಯೊಂದಿಗೆ ಸಣ್ಣ ಪುಟ್ಟ ಮನಸ್ತಾಪಗಳು ಬರಬಹುದು. ಆದರೆ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಜವಾಬ್ಧಾರಿ ನಿಮ್ಮ ಮೇಲಿರುತ್ತದೆ. ಹೊಸ ಮಿತ್ರರ ಭೇಟಿ ಮಾಡುವಿರಿ.

ಮಕರ: ಎಚ್ಚರಿಕೆ, ಜವಾಬ್ಧಾರಿಯಿಂದ ನಡೆದುಕೊಂಡರೆ ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೈಲಾಗಬಹುದಾದ ಅನಾಹುತ ತಪ್ಪಿಸಿಕೊಳ್ಳಬಹುದು. ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ಹಿತಶತ್ರುಗಳಿಂದ ವಂಚನೆಗೊಳಗಾಗುವ ಸಾಧ‍್ಯತೆಯಿದೆ. ಎಚ್ಚರಿಕೆ ಅಗತ್ಯ.

ಕುಂಭ: ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಭೂಮಿ, ಮನೆ ಖರೀದಿ ವ್ಯವಹಾರಗಳಿಗೆ ಸಕಾಲ.

ಮೀನ: ಆತ್ಮಗೌರವಕ್ಕೆ ಧಕ್ಕೆಯಾಗುವಂತಹ ಘಟನೆಗಳು ನಡೆಯಬಹುದು. ಎಚ್ಚರಿಕೆಯಿಂದಿರಬೇಕು. ಪಾಲು ಬಂಡವಾಳ ಹೂಡಿಕೆಗೆ ಕೆಲವು ದಿನ ಕಾಯುವುದು ಒಳಿತು. ಪ್ರಯತ್ನವಿದ್ದರೆ ಅದಕ್ಕೆ ತಕ್ಕ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ