Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 11 ನವೆಂಬರ್ 2019 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸುಗಮವಾಗಿ ನೀವಂದುಕೊಂಡಂತೇ ಕೆಲಸಗಳು ನೆರವೇರಲಿವೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅಧಿಕ ಧನಲಾಭ ತಂದುಕೊಡುವ ಯೋಜನೆಗಳಿಗೆ ಕೈ ಹಾಕುವ ಮೊದಲು ಯೋಚಿಸಿ ಹೆಜ್ಜೆಯಿಡಿ. ನಿಮ್ಮ ವಿಚಾರಧಾರೆಗಳಿಗೆ ಬೆಲೆ ಸಿಗಲಿದೆ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಧನವಿನಿಯೋಗ ಮಾಡುವಿರಿ. ಕಿರು ಸಂಚಾರ ಸಾಧ್ಯತೆಯಿದೆ.

ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಉತ್ತಮವಾಗುವುದು. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿಬರಲಿದೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಬೇಕು. ವಾಹನ ಸವಾರರಿಗೆ ಅಪಘಾತದ ಭೀತಿಯಿರಲಿದೆ.

ಕರ್ಕಟಕ: ಉದರ ಸಂಬಂಧೀ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಕೌಟುಂಬಿಕವಾಗಿ ಪ್ರೀತಿ ಪಾತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗುವುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಾವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂ‍ಘರ್ಷ ನಡೆಸಬೇಕಾಗುತ್ತದೆ. ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಸ್ವ ಉದ್ಯೋಗಿಗಳಿಗೆ ಲಾಭವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

 
ಕನ್ಯಾ: ಕೆಳಹಂತದ ನೌಕರ ವರ್ಗದವರಿಗೆ ಮುನ್ನಡೆಯ ಯೋಗವಿದೆ. ಮಹಿಳೆಯರಿಂದ ಅಪವಾದದ ಭೀತಿ ಎದುರಾಗಬಹುದು. ಎಚ್ಚರಿಕೆ ಅಗತ್ಯ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಬಹುದು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡಬಹುದು.

ತುಲಾ: ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಾಡಬಹುದು. ಮಾತಿನ ಮೇಲೆ ನಿಗಾ ಇರಲಿ. ಗೃಹೋಪಯೋಗಿ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪ್ರಯತ್ನ ಅಗತ್ಯ.

ವೃಶ್ಚಿಕ: ದೈವಾನುಕೂಲದಿಂದ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ವ್ಯವಹಾರದಲ್ಲಿ ಲಾಭ ಕಂಡುಕೊಳ್ಳುವಿರಿ. ದಾಯಾದಿಗಳೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು.  ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ನಿಮ್ಮ ದುಡುಕು ಮಾತಿನಿಂದ ಸಂಗಾತಿಯ ಮನಸ್ಸಿಗೆ ಬೇಸರವಾಗಬಹುದು. ಸಹೋದರರ ಪ್ರೀತಿಗೆ ಪಾತ್ರರಾಗುವಿರಿ. ವಿದ್ಯಾರ್ಥಿಗಳು ಕಠಿಣ ಪ್ರಯತ್ನ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪಾಲಿಗೆ ಬಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಮಕರ: ನೂತನ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ಕಷ್ಟ ಕಾಲದಲ್ಲಿ ಮಿತ್ರರ ಸಹಕಾರ ದೊರಕುವುದು. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಾಗಲಿವೆ.

ಕುಂಭ: ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಆದರೆ ದೇಹಾರೋಗ್ಯದ ಮೇಲೆ ಎಚ್ಚರಿಕೆ ವಹಿಸಬೇಕು. ನೆಂಟರಿಷ್ಟರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ.

ಮೀನ: ಹೆಚ್ಚಿನ ಆದಾಯ ಗಳಿಕೆ ಮಾಡುವಿರಿ. ವಾಹನ, ಗೃಹ, ಭೂಮಿ ಖರೀದಿಗೆ ಇದು ಸಕಾಲ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಸಣ್ಣ ವ್ಯಾಪಾರಿಗಳಿಗೆ ಕೊಂಚ ಹಿನ್ನಡೆಯಾಗಬಹುದು. ಆದರೆ ತಾಳ್ಮೆ ಕಳೆದುಕೊಳ್ಳಬೇಕಾಗಿಲ್ಲ.  ದೇವತಾ ಪ್ರಾರ್ಥನೆ ಮರೆಯದಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ತುಳಸಿ ಪೂಜೆಯ ವೇಳೆ ಈ ನಿಯಮ ಪಾಲಿಸಿದರೆ ನಿಮಗೆ ಪೂಜೆಯ ಸಂಪೂರ್ಣ ಫಲ ದೊರಕುತ್ತದೆಯಂತೆ