Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 15 ನವೆಂಬರ್ 2019 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಧು ಸಂತರ ಭೇಟಿ ಮನಸ್ಸಿಗೆ ನೆಮ್ಮದಿ ತರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ವ್ಯಾಪಾರ ವ್ಯವಹಾರಗಳಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗುವುದು.

ವೃಷಭ: ಮೇಲ್ವರ್ಗದ ಅಧಿಕಾರಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗುವುದು. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ತೋರಿಬರಲಿದೆ. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳು ಶಿಕ್ಷಕರ ಪ್ರಶಂಸೆಗೊಳಗಾಗುವರು.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನೂರೆಂಟು ವಿಘ್ನಗಳು ಎದುರಾಗಲಿವೆ. ಅಪಜಯದ ಭೀತಿ ಎದುರಾಗುವುದು. ಮಾನಸಿಕವಾಗಿ ಧೈರ್ಯ ತಂದುಕೊಳ್ಳಬೇಕಾದ ಸಮಯವಿದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಮಾಡುವಿರಿ. ಮಿತ್ರರ ಸಹಾಯ ಪಡೆಯುವಿರಿ.

ಕರ್ಕಟಕ: ಸಂಗಾತಿಗಾಗಿ ಚಿನ್ನಾಭರಣ, ಹೊಸ ವಸ್ತ್ರ ಖರೀದಿ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಕಿರಿ ಕಿರಿ ತಪ್ಪದು. ಸ್ತ್ರೀಯರೊಡನೆ ವ್ಯವಹರಿಸುವಾಗ ಅಪವಾದದ ಭೀತಿ ಎದುರಾಗದಂತೆ ಎಚ್ಚರಿಕೆ ವಹಿಸಿ.

ಸಿಂಹ: ಹೂಡಿಕೆ ವ್ಯವಹಾರಗಳಿಂದ ಲಾಭ ಗಳಿಸುವಿರಿ. ಆದರೆ ನಿಮ್ಮ ದುಡುಕು ಮಾತು, ವರ್ತನೆಗೆ ಕಡಿವಾಣ ಹಾಕಬೇಕಿದೆ. ಮಿತ್ರರ ಅಸಮಾಧಾನಕ್ಕೆ ಗುರಿಯಾಗುವಿರಿ. ಗೃಹೋಪಯೋಗಿ ವಸ್ತುಗಳಿಗಾಗಿ ಅಧಿಕ ಧನವ್ಯಯವಾಗಲಿದೆ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

 
ಕನ್ಯಾ: ತಪ್ಪು ಮಾಡಿ ಕೊನೆಗೆ ಪಶ್ಚಾತ್ತಾಪ ಪಡುವಂತಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಣ್ಣ ತಪ್ಪುಗಳಿಗೂ ದೊಡ್ಡ ಬೆಲೆ ತೆರಬೇಕಾಗುತ್ತದೆ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆ ಸಿಗುತ್ತದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನಸ್ಸಿಗೆ ಕೊಂಚ ಖುಷಿ ಸಿಗುವುದು.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ವ್ಯವಹಾರದಲ್ಲಿ ಲಾಭ ಕೈಗೆ ಬರುವುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಹೊಸ ಮನೆ, ಆಸ್ತಿ ಖರೀದಿ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಬಹುದು.

ವೃಶ್ಚಿಕ: ಕೋಪದ ಕೈಗೆ ಬುದ್ಧಿ ಕೊಟ್ಟು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ವ್ಯಾಪಾರ ವ್ಯವಹಾರದಲ್ಲಿ ಬಂಡವಾಳ ಹೂಡಿಕೆ ಮಾಡುವ ಮೊದಲು ಪರಾಮರ್ಶಿಸುವುದು ಉತ್ತಮ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಪ್ರೇಮಿಗಳಿಗೆ ಸಂತಸದ ದಿನ.

ಧನು: ಹಿತಶತ್ರುಗಳ ಕಾಟವಿದ್ದರೂ ನಿಮ್ಮ ಆತ್ಮಸ್ಥೈರ್ಯದಿಂದ ನೀವು ಅಂದುಕೊಂಡ ಕೆಲಸವನ್ನು ಯಶಸ್ವಿಯಾಗಿ ಪೂರೈಸುವಿರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಗಾತಿಯ ಸಹಕಾರ ಸಿಗುವುದು. ತಾಳ್ಮೆ ಅಗತ್ಯ.

ಮಕರ: ಬಂಧು ಮಿತ್ರರ ಸಹಕಾರದಿಂದ ಕಷ್ಟದ ಸಮಯ ಕಳೆದುಹೋಗುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ತೀರ್ಪು ನಿಮ್ಮ ಪರವಾಗಿ ಬರುವುದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ಹಳೆಯ ಮಿತ್ರರ ಬೇಟಿಯಾಗುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕುಂಭ: ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವ್ಯಾಪಾರ, ವ್ಯವಹಾರಗಳು ನೀವು ಅಂದುಕೊಂಡ ರೀತಿಯಲ್ಲೇ ಸಾಗಲಿವೆ. ಶುಭ ಮಂಗಲ ಕಾರ್ಯಗಳ ಸಿದ್ಧತೆಗಾಗಿ ಓಡಾಟ ನಡೆಸಲಿದ್ದೀರಿ. ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ನಾನಾ ರೀತಿಯ ಖರ್ಚು ವೆಚ್ಚಗಳು ಎದುರಾಗಲಿದ್ದು, ಹಣಕಾಸಿನ ಮುಗ್ಗಟ್ಟು ಎದುರಿಸುವಿರಿ. ನಿಮ್ಮ ವಿರೋಧಿಗಳಿಂದ ಕೆಟ್ಟ ಮಾತು ಕೇಳಿಬರುತ್ತವೆ. ತಾಳ್ಮೆ ಈ ದಿನ ಅತೀ ಅಗತ್ಯ. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಪತಿ ಪತ್ನಿಯರ ಕಲಹಕ್ಕೆ ಕಾರಣವಾಗುತ್ತೆ ಅಡುಗೆ ಮನೆಯಲ್ಲಿ ನೀವು ಮಾಡುವ ಈ ತಪ್ಪುಗಳು