Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 16 ನವೆಂಬರ್ 2019 (08:23 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ವಿನಾಕಾರಣ ಅಪವಾದ ಕೇಳಿಬರುತ್ತಿದೆ. ಇದರಿಂದ ಮನಸ್ಸಿಗೆ ಹತಾಶೆಯಾಗಬಹುದು. ಸಂಗಾತಿಯ ಅಪ್ರಬುದ್ಧ ನಡುವಳಿಕೆ ನಿಮ್ಮ ಬೇಸರಕ್ಕೆ ಕಾರಣವಾಗುವುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ.

ವೃಷಭ: ಮಾನಸಿಕವಾಗಿ ಹಲವು ಚಿಂತೆಗಳಿಂದ ಮನಸ್ಸು ಖಿನ್ನವಾಗುವುದು. ಎಷ್ಟೇ ದುಡಿದರೂ ತೃಪ್ತಿಯಿಲ್ಲದ ಭಾವವಿರುವುದು. ಆರ್ಥಿಕವಾಗಿ ಆದಾಯವಿದ್ದಷ್ಟು ಖರ್ಚೂ ಇರುವುದು. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಿಥುನ: ಸಹೋದರರಿಂದ ಆಸ್ತಿ, ಹಣಕಾಸಿನ ವಿಚಾರವಾಗಿ ಕಿರಿ ಕಿರಿಯಾಗಬಹುದು. ತಾಳ್ಮೆಯಿಂದ ವರ್ತಿಸುವುದು ಮುಖ್ಯ. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ವಹಿಸಿ. ಕಷ್ಟದಲ್ಲಿರುವ ಬಂಧು ಮಿತ್ರರಿಗೆ ಸಹಾಯ ಮಾಡುವಿರಿ. ಹಿರಿಯರ ಬಗ್ಗೆ ಕಾಳಜಿ ವಹಿಸಿ.

ಕರ್ಕಟಕ: ಹೊಸ ಮಿತ್ರರ ಭೇಟಿಯಿಂದ ಹೊಸ ವಿಚಾರಗಳು ಹೊಳೆಯಲಿವೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ, ಮುನ್ನಡೆ ಯೋಗವಿದೆ. ಮಕ್ಕಳ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಕಷ್ಟದ ಸಮಯದಲ್ಲಿ ದೇವರ ಮೊರೆ ಹೋಗುವುದರಿಂದ ಆತ್ಮಸ್ಥೈರ್ಯ ಹೆಚ್ಚುವುದು. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ಆದಾಯದ ಮೂಲಗಳು ಸ್ಥಗಿತವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗಲಿವೆ. ಮಕ್ಕಳಿಗೆ ಉನ್ನತಿ ಸಿಗಲಿದೆ.

 
ಕನ್ಯಾ: ವೃತ್ತಿ ಜೀವನವಿರಲಿ, ವೈಯಕ್ತಿಕ ಜೀವನವಿರಲಿ ಹೊಂದಾಣಿಕೆಯಿಂದ ಜೀವನ ನಡೆಸಿದರೆ ಎಲ್ಲವೂ ಸುಗಮವಾಗಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು, ಕಾಳಜಿ ವಹಿಸಿ. ನಿರುದ್ಯೋಗಿಗಳ ಉದ್ಯೋಗ ಭೇಟೆಗೆ ಯಶಸ್ಸು ಸಿಗುವುದು.

ತುಲಾ: ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ಸಿಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಸಿಗುವುದು. ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.

ವೃಶ್ಚಿಕ: ಮಕ್ಕಳ ಜೀವನದಲ್ಲಿ ಪ್ರಗತಿ ಕಂಡುಬಂದು, ಸಂತಸವಾಗಲಿದೆ. ಮನಸ್ಸಿಗೆ ಖುಷಿ ಕೊಡುವ ವಿಚಾರಗಳು ಕೇಳಿಬರಲಿವೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಉನ್ನತ ಸ್ಥಾನ ಮಾನ ಲಭ್ಯವಾಗಲಿದೆ. ಸಾಲಗಳು ಮರುಪಾವತಿಯಾಗಲಿವೆ.

ಧನು: ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಧನವ್ಯಯವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹಕಾರ ಸಿಗದೇ ಒದ್ದಾಡಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದ್ದು, ದೇಹಾಯಾಸವಾಗಬಹುದು. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಕುಂಭ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ಆದರೆ ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ವಾದ ವಿವಾದಗಳಿಂದ ದೂರವಿದ್ದರೆ ಉತ್ತಮ. ಹೊಸ ಮನೆಗೆ ವಾಸ್ತವ್ಯ ಬದಲಾಯಿಸುವಿರಿ.

ಮೀನ: ಆರ್ಥಿಕವಾಗಿ ಅನೇಕ ಖರ್ಚು ವೆಚ್ಚಗಳು ಎದುರಾಗಲಿವೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಅವಕಾಶ ಮಾಡಿಕೊಡದಿರಿ. ಕೃಷಿ ಕೆಲಸಗಳಿಗೆ ಮುನ್ನಡೆ ಸಿಗಲಿದೆ. ಅಂದುಕೊಂಡ ಕೆಲಸ ಕಾರ್ಯಗಳನ್ನು ಮಾಡಲು ವಿಘ‍್ನಗಳು ಎದುರಾದೀತು. ತಾಳ್ಮೆ ಕಳೆದುಕೊಳ್ಳಬೇಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments