Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 19 ನವೆಂಬರ್ 2019 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಗತ್ಯ ವಿಚಾರಗಳಿಗೆ ಮನೆಯಲ್ಲಿ ವಾದ ವಿವಾದಗಳಾಗಿ ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವಿರಿ. ದುಡುಕಿನ ವರ್ತನೆಗೆ ಕಡಿವಾಣ ಹಾಕಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಬಾಕಿ ಹಣ ವಸೂಲಿಯ ಚಿಂತೆ ಕಾಡುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅಂದುಕೊಂಡ ಕಾರ್ಯ ನೆರವೇರಿಸಲು ಹಲವು ವಿಘ್ನಗಳು ಎದುರಾದೀತು. ಎಲ್ಲವನ್ನೂ ಎದುರಿಸಿಕೊಂಡು ಹೋಗುವ ಆತ್ಮಸ್ಥೈರ್ಯ ಇರಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಕೊರತೆ ಕಾಣಬಹುದು. ತಾಳ್ಮೆಯಿಂದಿರಿ.

ಮಿಥುನ: ತಾಳಿದವನು ಬಾಳಿಯಾನು ಎಂದು ಕೇಳಿಲ್ಲವೇ? ಹಾಗೆಯೇ ಇಂದು ನಿಮ್ಮ ಜೀವನದಲ್ಲಿ ನಿಧಾನವಾಗಿಯಾದರೂ ನೀವು ಅಂದುಕೊಂಡ ಉದ್ದೇಶ ಈಡೇರಿಸಿಕೊಳ್ಳುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಹಿರಿಯರಿಂದ ಬಂದ ಬಳುವಳಿ ಕಾಪಾಡಿಕೊಳ್ಳುವ ಹೊಣೆ ನಿಮ್ಮದು.

ಕರ್ಕಟಕ: ಕಲಾ ಕ್ಷೇತ್ರದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಹೆಚ್ಚುವುದು. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿಬರಲಿದೆ. ನೂತನ ದಂಪತಿಗಳಲ್ಲಿ ವಿರಸ ಮೂಡಬಹುದು, ಎಚ್ಚರ. ಧನಾದಾಯಕ್ಕೆ ಕೊರತೆಯಾಗದು.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಹಿನ್ನಡೆಯ ಭೀತಿ ಎದುರಾಗಲಿದೆ. ತಾಳ್ಮೆಯಿಂದ ಎಲ್ಲವನ್ನೂ ಎದುರಿಸಬೇಕು. ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

 
ಕನ್ಯಾ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಹಿತಶತ್ರುಗಳಿಂದ ವಂಚನೆಗೊಳಗಾಗುವ ಸಾಧ್ಯತೆಯಿದೆ. ಎಚ್ಚರಿಕೆಯಿಂದಿರಬೇಕು. ಸಂಗಾತಿಯ ಸಲಹೆಗಳು ಫಲ ನೀಡಲಿವೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಧಾರ್ಮಿಕ ಕ್ಷೇತ್ರಗಳ ಸಂದರ್ಶನ, ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಮಾನಸಿಕ ಗೊಂದಲಗಳಿಗೆ ಹಿರಿಯರಿಂದ ಪರಿಹಾರ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಬಾಕಿ ಹಣ ಸಂದಾಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ವಿದೇಶ ಯಾನ ಮಾಡುವ ಯೋಗ ಎದುರಾಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಬೇಕು. ಪೋಷಕರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಕುಲದೇವರ ಪ್ರಾರ್ಥನೆ ನಡೆಸಿ ಹೊಸ ಕಾರ್ಯಗಳಿಗೆ ಕೈ ಹಾಕಿದರೆ ಇಂದು ಫಲ ಕೊಡುವುದು ಗ್ಯಾರಂಟಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದರೂ ಅಂತಿಮ ಜಯ ನಿಮ್ಮದಾಗುವುದು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಮಕರ: ನೀವು ಕೈಗೊಳ್ಳುವ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರಿಗೆ ಇಷ್ಟವಾಗದೇ ಇರಬಹುದು. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ, ಬಡ್ತಿ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಉದರ ಸಂಬಂಧೀ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಅನಗತ್ಯ ಚಿಂತೆಗಳು ನಿಮ್ಮ ದೈನಂದಿನ ಕೆಲಸದ ಮೇಲೆ ಪರಿಣಾಮ ಬೀರಲಿದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಗೃಹೋಪಯೋಗಿ ವಸ್ತುಗಳಿಗೆ ಸಾಕಷ್ಟು ಧನ ವ್ಯಯ ಮಾಡಬೇಕಾಗುತ್ತದೆ. ಹೊಸ ಮಿತ್ರರ ಭೇಟಿ ಸಾಧ‍್ಯತೆ.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಕೊಂಚ ಹಿನ್ನಡೆಯಾಗಿ ನಿರಾಸೆಯಾಗಬಹುದು. ತಾಳ್ಮೆ ಕಳೆದುಕೊಳ್ಳಬೇಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments