ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 20 ನವೆಂಬರ್ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಬಾಕಿ ಹಣ ಪಾವತಿ ಚಿಂತೆ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ಸ್ವ ವ್ಯವಹಾರ ಮಾಡುವವರಿಗೆ ಉನ್ನತಿಯ ಯೋಗವಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ.

ವೃಷಭ: ಚಿಂತಿತ ಕಾರ್ಯಗಳು ಅಡೆತಡೆಗಳಿದ್ದರೂ ಅಂತಿಮವಾಗಿ ನೀವಂದುಕೊಡಂತೆ ನೆರವೇರುವುದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ದೂರವಾಗುವುದು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಅಂದುಕೊಂಡ ಕಾರ್ಯಗಳನ್ನು ಚಿಂತೆಯಿಲ್ಲದೇ ನೆರವೇರಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿರಬರಲಿದೆ. ಹೊಸ ಮಿತ್ರರ ಭೇಟಿಯಾಗುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ ಕಾದಿದೆ.

ಕರ್ಕಟಕ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಬಹುದು.  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯಿಂದ ಉನ್ನತ ಸ್ಥಾನ ಮಾನ ಸಿಗುವುದು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ದೈವಾನುಗ್ರಹದಿಂದ ಈ ದಿನ ನೀವು ಕೈಗೊಂಡ ಕಾರ್ಯಗಳಲ್ಲಿ ಪ್ರಗತಿ ಸಾಧಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಿ.

 
ಕನ್ಯಾ: ಯಾವುದೇ ಕೆಲಸಕ್ಕೂ ಮುನ್ನ ಕುಟುಂಬ ಸದಸ್ಯರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ವೃತ್ತಿರಂಗದಲ್ಲಿ ಎಂದಿನಂತೆ ಕಾರ್ಯದೊತ್ತಡವಿರಲಿದೆ. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ಸಂಗಾತಿಯ ಸಹಕಾರದಿಂದ ಹೊಸ ಕೆಲಸಗಳು ಸುಸ್ರೂತ್ರವಾಗಿ ನಡೆಯಲಿವೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿಯ ಯೋಗವಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಮುನ್ನಡೆ ಲಭಿಸುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಆರ್ಥಿಕವಾಗಿ ಉನ್ನತಿಯ ಯೋಗವಿದೆ. ಪಾಲು ಬಂಡವಾಳ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸಿ. ಮನೆಯಲ್ಲಿ ಹೊಸ ಸದಸ್ಯರ ಆಗಮನದಿಂದ ಸಂತಸದ ವಾತಾವರಣವಿರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಸಹಕಾರ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಯೋಗ್ಯತೆಗೆ ಮೀರಿ ಕೆಲಸಗಳು ಸಿಕ್ಕಾಗ ಅದನ್ನು ಬಳಸಿಕೊಳ್ಳುವ ಕಲೆ ಗೊತ್ತಿರಬೇಕು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೂರ ಸಂಚಾರದಲ್ಲಿ ಎಚ್ಚರಿಕೆಯಿಂದಿರಬೇಕು.

ಕುಂಭ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ನಿರಂತರ ಓಡಾಟದಿಂದ ದೇಹಾಯಾಸವಾಗಬಹುದು. ಮಾನಸಿಕವಾಗಿ ಕಿರಿ ಕಿರಿಯಾಗುವಂತಹ ಘಟನೆಗಳು ನಡೆಯಬಹುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು.

ಮೀನ: ಮನೆಯಲ್ಲಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳು ಮೂಡದಂತೆ ಎಚ್ಚರಿಕೆ ವಹಿಸಬೇಕು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಕೋರ್ಟು ಕಚೇರಿ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments