Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 27 ನವೆಂಬರ್ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಒಂದು ಹಂತಕ್ಕೆ ಸಮಸ್ಯೆಗಳು ಪರಿಹಾರವಾಯಿತು ಎಂದುಕೊಳ್ಳುವ ಹೊಸ ಚಿಂತೆಗಳಿಂದ ಮನಸ್ಸು ಹೈರಾಣಾಗಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಲಿದೆ.

ವೃಷಭ: ವೃತ್ತಿರಂಗದಲ್ಲಿ ಮುಂಬಡ್ತಿ ಯೋಗವಿದೆ. ಆದರೆ ಮೇಲಧಿಕಾರಿಗಳೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಆರ್ಥಿವಾಗಿ ಆದಾಯವಿದ್ದಷ್ಟೇ ಖರ್ಚೂ ಕಂಡುಬರಲಿದೆ. ಕೌಟುಂಬಿಕವಾಗಿ ಆಸ್ತಿ ವಿವಾದಗಳು ತಲೆದೋರಲಿವೆ. ತಾಳ್ಮೆಯಿಂದಿರಬೇಕು.

ಮಿಥುನ: ಪ್ರಯಾಣದ ಸಂದರ್ಭದಲ್ಲಿ ಕಳ್ಳತನದ ಭೀತಿ ಎದುರಾಗಲಿದೆ. ಕೆಳ ಹಂತದ ನೌಕರ ವರ್ಗದವರು ಮಾಡಿದ ತಪ್ಪಿಗೆ ನೀವು ತಲೆದಂಡ ತೆರಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಲಿದೆ.

ಕರ್ಕಟಕ: ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಲಾಭವಾಗಲಿದೆ. ಹಿರಿಯರ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಕುಲದೇವರ ಪ್ರಾರ್ಥನೆ ನಡೆಸಿ ಹೊಸ ವ್ಯವಹಾರಗಳಿಗೆ ಕೈ ಹಾಕಿದರೆ ಯಶಸ್ಸು ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಸ್ವ ಉದ್ಯೋಗಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಂತೂ ಆಗದು. ಅವಿವಾಹಿತರಿಗೆ ವಿವಾಹ ಭಾಗ್ಯ ಸದ್ಯದಲ್ಲೇ ಬರಲಿದೆ. ಸಾಂಸಾರಿಕವಾಗಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

 
ಕನ್ಯಾ: ವಾಹನ ಖರೀದಿಯಿಂದ ನಷ್ಟವಾಗುವಿರಿ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ಪ್ರೀತಿ ಪಾತ್ರರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಕೃಷಿಕರಿಗೆ ವ್ಯವಹಾರದಲ್ಲಿ ಅಡೆತಡೆಗಳು ಬರಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ತುಲಾ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗ ಬರಬಹುದು. ಹಿರಿಯರ ಸಲಹೆಗಳು ಪಥ್ಯವಾಗದೇ ಇರಬಹುದು. ಆದರೆ ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚನೆ ಮಾಡಬೇಕಾದ ಕಾಲವಿದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ದತೆ ನಡೆಸುವಿರಿ.

ವೃಶ್ಚಿಕ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಭೂ ಖರೀದಿ ಯೋಗವಿದೆ. ಆದರೆ ವ್ಯವಹಾರದಲ್ಲಿ ಎಚ್ಚರಿಕೆಯಿಂದಿರಬೇಕು. ಕೋರ್ಟು ಕಚೇರಿ ವ್ಯವಹಾರದಲ್ಲಿ ಲಾಭವಾಗಲಿದೆ. ಉತ್ತಮ ಸ್ನೇಹಿತರ ಸಮಾಗಮದಿಂದ ಮನಸ್ಸಿಗೆ ಖುಷಿಯಾಗುವುದು.

ಧನು: ಸಂಗಾತಿಯ ಆರೋಗ್ಯ ತಪಾಸಣೆಗಾಗಿ ಓಡಾಟ ನಡೆಸಬೇಕಾಗುತ್ತದೆ. ಇಷ್ಟ ಮಿತ್ರರೊಂದಿಗೆ ಪ್ರವಾಸ ಭೋಜನ ಸಾಧ‍್ಯತೆಯಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಕಾಳಜಿ ವಹಿಸಿ. ನೆರೆಹೊರೆಯವರ ಕಿರಿ ಕಿರಿಗಳಿಗೆ ಮೌನವೇ ಉತ್ತರವಾಗಲಿ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಆಸ್ತಿ ವಿವಾದಗಳಲ್ಲಿ ಕೋರ್ಟು ಕಚೇರಿಗಳಿಗೆ ಅಲೆದಾಡಬೇಕಾಗುತ್ತದೆ. ಸಾಕಷ್ಟು ಖರ್ಚು ವೆಚ್ಚಗಳಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಲಿದೆ. ಕೆಟ್ಟ ಸ್ನೇಹಿತರ ಸಂಗದಿಂದ ದೂರವಿರುವುದು ಒಳ್ಳೆಯದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಕುಂಭ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಉತ್ತಮ. ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಸ್ನೇಹಿತರಿಬ್ಬರ ಕಲಹಕ್ಕೆ ಮಧ್ಯಸ್ಥಿಕೆ ವಹಿಸಬೇಕಾದೀತು. ಸಂಗಾತಿಯ ಮನದಾಸೆ ಪೂರೈಸಲು ಖರ್ಚು ವೆಚ್ಚಗಳಾಗುತ್ತವೆ.

ಮೀನ: ಮಹಿಳಾ ಉದ್ಯೋಗಿಗಳು ಶುಭ ಫಲ ಅನುಭವಿಸಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಾಗುವ ಘಟನೆಗಳು ನಡೆದೀತು. ಶಾಂತವಾಗಿ ಪರಿಸ್ಥಿತಿ ನಿಭಾಯಿಸಿ. ದುಡುಕು ಮಾತಿನಿಂದ ಕಾರ್ಯ ಹಾಳಾದೀತು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಯಲ್ಲಿ ಹುಟ್ಟಿದವರ ಸ್ವಭಾವ ಹೀಗಿರುತ್ತದೆ