Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 27 ನವೆಂಬರ್ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಒಂದು ಹಂತಕ್ಕೆ ಸಮಸ್ಯೆಗಳು ಪರಿಹಾರವಾಯಿತು ಎಂದುಕೊಳ್ಳುವ ಹೊಸ ಚಿಂತೆಗಳಿಂದ ಮನಸ್ಸು ಹೈರಾಣಾಗಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಲಿದೆ.

ವೃಷಭ: ವೃತ್ತಿರಂಗದಲ್ಲಿ ಮುಂಬಡ್ತಿ ಯೋಗವಿದೆ. ಆದರೆ ಮೇಲಧಿಕಾರಿಗಳೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಆರ್ಥಿವಾಗಿ ಆದಾಯವಿದ್ದಷ್ಟೇ ಖರ್ಚೂ ಕಂಡುಬರಲಿದೆ. ಕೌಟುಂಬಿಕವಾಗಿ ಆಸ್ತಿ ವಿವಾದಗಳು ತಲೆದೋರಲಿವೆ. ತಾಳ್ಮೆಯಿಂದಿರಬೇಕು.

ಮಿಥುನ: ಪ್ರಯಾಣದ ಸಂದರ್ಭದಲ್ಲಿ ಕಳ್ಳತನದ ಭೀತಿ ಎದುರಾಗಲಿದೆ. ಕೆಳ ಹಂತದ ನೌಕರ ವರ್ಗದವರು ಮಾಡಿದ ತಪ್ಪಿಗೆ ನೀವು ತಲೆದಂಡ ತೆರಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಲಿದೆ.

ಕರ್ಕಟಕ: ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಲಾಭವಾಗಲಿದೆ. ಹಿರಿಯರ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಕುಲದೇವರ ಪ್ರಾರ್ಥನೆ ನಡೆಸಿ ಹೊಸ ವ್ಯವಹಾರಗಳಿಗೆ ಕೈ ಹಾಕಿದರೆ ಯಶಸ್ಸು ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಸ್ವ ಉದ್ಯೋಗಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಂತೂ ಆಗದು. ಅವಿವಾಹಿತರಿಗೆ ವಿವಾಹ ಭಾಗ್ಯ ಸದ್ಯದಲ್ಲೇ ಬರಲಿದೆ. ಸಾಂಸಾರಿಕವಾಗಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

 
ಕನ್ಯಾ: ವಾಹನ ಖರೀದಿಯಿಂದ ನಷ್ಟವಾಗುವಿರಿ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ಪ್ರೀತಿ ಪಾತ್ರರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಕೃಷಿಕರಿಗೆ ವ್ಯವಹಾರದಲ್ಲಿ ಅಡೆತಡೆಗಳು ಬರಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ತುಲಾ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗ ಬರಬಹುದು. ಹಿರಿಯರ ಸಲಹೆಗಳು ಪಥ್ಯವಾಗದೇ ಇರಬಹುದು. ಆದರೆ ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚನೆ ಮಾಡಬೇಕಾದ ಕಾಲವಿದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ದತೆ ನಡೆಸುವಿರಿ.

ವೃಶ್ಚಿಕ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಭೂ ಖರೀದಿ ಯೋಗವಿದೆ. ಆದರೆ ವ್ಯವಹಾರದಲ್ಲಿ ಎಚ್ಚರಿಕೆಯಿಂದಿರಬೇಕು. ಕೋರ್ಟು ಕಚೇರಿ ವ್ಯವಹಾರದಲ್ಲಿ ಲಾಭವಾಗಲಿದೆ. ಉತ್ತಮ ಸ್ನೇಹಿತರ ಸಮಾಗಮದಿಂದ ಮನಸ್ಸಿಗೆ ಖುಷಿಯಾಗುವುದು.

ಧನು: ಸಂಗಾತಿಯ ಆರೋಗ್ಯ ತಪಾಸಣೆಗಾಗಿ ಓಡಾಟ ನಡೆಸಬೇಕಾಗುತ್ತದೆ. ಇಷ್ಟ ಮಿತ್ರರೊಂದಿಗೆ ಪ್ರವಾಸ ಭೋಜನ ಸಾಧ‍್ಯತೆಯಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಕಾಳಜಿ ವಹಿಸಿ. ನೆರೆಹೊರೆಯವರ ಕಿರಿ ಕಿರಿಗಳಿಗೆ ಮೌನವೇ ಉತ್ತರವಾಗಲಿ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಆಸ್ತಿ ವಿವಾದಗಳಲ್ಲಿ ಕೋರ್ಟು ಕಚೇರಿಗಳಿಗೆ ಅಲೆದಾಡಬೇಕಾಗುತ್ತದೆ. ಸಾಕಷ್ಟು ಖರ್ಚು ವೆಚ್ಚಗಳಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಲಿದೆ. ಕೆಟ್ಟ ಸ್ನೇಹಿತರ ಸಂಗದಿಂದ ದೂರವಿರುವುದು ಒಳ್ಳೆಯದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಕುಂಭ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಉತ್ತಮ. ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಸ್ನೇಹಿತರಿಬ್ಬರ ಕಲಹಕ್ಕೆ ಮಧ್ಯಸ್ಥಿಕೆ ವಹಿಸಬೇಕಾದೀತು. ಸಂಗಾತಿಯ ಮನದಾಸೆ ಪೂರೈಸಲು ಖರ್ಚು ವೆಚ್ಚಗಳಾಗುತ್ತವೆ.

ಮೀನ: ಮಹಿಳಾ ಉದ್ಯೋಗಿಗಳು ಶುಭ ಫಲ ಅನುಭವಿಸಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಾಗುವ ಘಟನೆಗಳು ನಡೆದೀತು. ಶಾಂತವಾಗಿ ಪರಿಸ್ಥಿತಿ ನಿಭಾಯಿಸಿ. ದುಡುಕು ಮಾತಿನಿಂದ ಕಾರ್ಯ ಹಾಳಾದೀತು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments