Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 28 ನವೆಂಬರ್ 2019 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಅನಾದರಣೆಗೆ ಒಳಗಾದ ನೋವು ಕಾಡಲಿದೆ. ಹಳೆಯ ಸ್ನೇಹಿತರ ಭೇಟಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸೂಕ್ತ ಸ್ಥಾನ ಮಾನ ಸಿಗಲಿದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು.

ವೃಷಭ: ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಕಂಡುಬರಲಿದೆ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.

ಮಿಥುನ: ಹಿತ ಶತ್ರುಗಳಿಂದಾಗಿ ಕೈಗೂಡಲಿದ್ದ ಕೆಲಸವೊಂದು ತಪ್ಪಿಹೋಗಲಿದೆ. ಇದುವರೆಗೆ ಕೂಡಿಟ್ಟಿದ್ದ ಗುಟ್ಟು ಹೊರಬರುವುದು. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಬೇಕಾಗುತ್ತದೆ. ಗೃಹ ನಿರ್ಮಾಣ, ರಿಪೇರಿಗಾಗಿ ಧನವ್ಯಯವಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಕರ್ಕಟಕ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ತೋರಿಬರಲಿದೆ. ಹೆಚ್ಚಿನ ಧನಾದಾಯ ಗಳಿಸುವ ನಿಮ್ಮ ಕನಸುಗಳಿಗೆ ಇಂದು ಹೊಸ ದಾರಿಗಳು ಸಿಗಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ಕಿರು ಸಂಚಾರ ಯೋಗವಿದೆ.

ಸಿಂಹ: ಸಾಮಾಜಿಕವಾಗಿ ನೀವು ಉಪಕಾರ ಮಾಡಲು ಹೋದರೂ ಅನಗತ್ಯವಾಗಿ ನಿಂದನೆಗೆ ಗುರಿಯಾಗಬೇಕಾಗುತ್ತದೆ.  ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಮಹಿಳಾ ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಭೀತಿಯಿದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗುವುದು.

 
ಕನ್ಯಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಆದರೆ ನಿಮ್ಮ ಕೆಲವೊಂದು ನಿರ್ಧಾರಗಳು ಹಿರಿಯರ ಅಸಮಾಧಾನಕ್ಕೆ ಗುರಿಯಾಗಬಹುದು. ವ್ಯಾಪಾರಿಗಳಿಗೆ ಬಂಡವಾಳ ಹೂಡಲು ಇದು ಸಕಾಲ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ತುಲಾ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯ ಸಲಹೆ ಪಡೆದು ಮುಂದುವರಿಯುವುದು ಉತ್ತಮ. ಆಸ್ತಿ ಕಲಹಗಳಿಗೆ ಪರಿಹಾರ ಸಿಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ.

ವೃಶ್ಚಿಕ: ವಿದ್ಯಾರ್ಥಿಗಳು ಕೆಟ್ಟ ಸ್ನೇಹಿತರ ಸಂಗ ಬಿಡದೇ ಇದ್ದರೆ ಭವಿಷ್ಯದಲ್ಲಿ ತೊಂದರೆಯಾಗಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಹಿರಿಯರಿಂದ ಉಡುಗೊರೆ ಸ್ವೀಕರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ನಿಮ್ಮ ಕೆಲವೊಂದು ಮಾತುಗಳು ಕಿರಿಯರ ಮನಸ್ಸಿಗೆ ನೋವುಂಟು ಮಾಡಬಹುದು. ವಿದ್ಯಾರ್ಥಿಗಳು ಶೈಕ್ಷಣಿಕ ರಂಗದಲ್ಲಿ ಉತ್ತಮ ಸಾಧನೆ ಮಾಡುವರು. ಸಹೋದರರಿಂದ ಮನಸ್ಸಿಗೆ ನೋವಾಗುವ ಮಾತು ಕೇಳಿಬಂದೀತು. ಸಂಗಾತಿಯಿಂದ ಸಹಕಾರ ಸಿಗಲಿದೆ.

ಮಕರ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳು ನೆರವೇರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿ ಸಿಗಲಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಹಿಡಿತ ಅಗತ್ಯ.

ಕುಂಭ: ಕುಟುಂಬ ಸದಸ್ಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಮಧ‍್ಯಸ್ಥಿಕೆ ವಹಿಸಬೇಕಾಗುತ್ತದೆ. ತಾಳ್ಮೆಯಿಂದಿದ್ದಷ್ಟೂ ಉತ್ತಮ. ಸಂಗಾತಿಯ ಮನದಾಸೆ ಪೂರೈಸಲು ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಕೃಷಿಕರಿಗೆ ಕೈಗೆ ನಿರೀಕ್ಷಿತ ಲಾಭ ಬರುವುದು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬರಲಿದೆ. ಎಚ್ಚರಿಕೆಯಿಂದಿರುವುದು ಮುಖ್ಯ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಕರ ರಾಶಿಯಲ್ಲಿ ಹುಟ್ಟಿದವರ ಗುಣಸ್ವಭಾವ ಹೇಗಿರುತ್ತದೆ ಗೊತ್ತಾ?