Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 29 ನವೆಂಬರ್ 2019 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬೇರೆಯವರ ಮಾತುಗಳಿಗೆ ಹೆಚ್ಚು ಬೆಲೆ ಕೊಟ್ಟು ನಿಮ್ಮ ಆಪ್ತರ ಮನಸ್ಸಿಗೆ ನೋವುಂಟು ಮಾಡುವುದನ್ನು ಬಿಡಿ. ಚಾಡಿ ಮಾತುಗಳಿಗೆ ಕಿವೊಗಡಬೇಕಿಲ್ಲ. ಆದರೂ ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಾಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.

ವೃಷಭ: ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಸರಿಯಾದ ರೀತಿಯಲ್ಲಿ ಅದನ್ನು ಬಳಸಲು ತಿಳಿಯದೇ ಗೊಂದಲಕ್ಕೊಳಗಾಗುವಿರಿ. ವ್ಯವಹಾರದಲ್ಲಿ ಲಾಭವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಮಿಥುನ: ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ನೂತನ ದಂಪತಿಗಳ ಮಧ್ಯೆ ಹೊಂದಾಣಿಕೆ ಸಮಸ್ಯೆ ಕಂಡುಬರಬಹುದು. ಸಂಸಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಮಾಡಿಕೊಡಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಕಫ, ಶೀತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಲಿವೆ. ಆದಾಯ ಹೆಚ್ಚಳಕ್ಕೆ ನಾನಾ ಮಾರ್ಗ ಹುಡುಕುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರಕಲಿದೆ. ಮಕ್ಕಳ ವಿದ್ಯಾಭ‍್ಯಾಸದಲ್ಲಿ ಹಿನ್ನಡೆ ತೋರಿಬರಲಿದ್ದು, ಚಿಂತೆಯಾಗಬಹುದು. ತಾಳ್ಮೆಯಿಂದಿರಿ.

ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಕಷ್ಟ ನಷ್ಟಗಳು ಸಾಮಾನ್ಯ. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕಾದ ಸಮಯವಿದು. ಹಿರಿಯರ ಬುದ್ಧಿಮಾತುಗಳು ಅಪಥ್ಯವಾದೀತು. ನಿಮ್ಮ ಹಠಮಾರಿತನ ಧೋರಣೆಯಿಂದ ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗುವಿರಿ.

 
ಕನ್ಯಾ: ಹೊಸ ಕೆಲಸಗಳಿಗೆ ಕೈ ಹಾಕಲು ಇದುವೇ ಸಕಾಲ. ಉದ್ಯೋಗ ವಿಚಾರವಾಗಿ ಕಿರಿ ಕಿರಿ ತಪ್ಪದು. ಹೊಸ ಬದಲಾವಣೆಗೆ ಮನಸ್ಸು ಬಯಸುವುದು. ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಮನದಾಸೆ ಪೂರೈಸಬೇಕಾಗುತ್ತದೆ.

ತುಲಾ: ಇಷ್ಟು ದಿನ ನಿಮ್ಮ ಬೆನ್ನ ಹಿಂದೆ ಮೋಸ ಮಾಡುತ್ತಿದ್ದ ವಂಚಕರ ಬಣ್ಣ ಬಯಲಾಗಲಿದೆ. ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಚಿಂತೆ ಬೇಡ. ಅನಿರೀಕ್ಷಿತವಾಗಿ ನೆಂಟರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರುವುದು. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.

ವೃಶ್ಚಿಕ: ಇಂದು ಯಾರಿಗಾದರೂ ಸಾಲ ನೀಡಿದಲ್ಲಿ ಮನಸ್ತಾಪವಾಗಬಹುದು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಕೌಟುಂಬಿಕವಾಗಿ ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಧನು: ಹಿರಿಯರಿಗೆ ತೀರ್ಥ ಯಾತ್ರೆ ಭಾಗ್ಯವಿದೆ. ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆದರೆ ನಿಮ್ಮ ಮಾತು, ವರ್ತನೆ ಇತರರ ಅಸಮಾಧಾನಕ್ಕೆ ಗುರಿಯಾಗಬಹುದು. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ.

ಮಕರ: ಹೊಸ ಉದ್ಯಮಕ್ಕೆ ಹಣ ಹೂಡಿಕೆ ಮಾಡಲು ಇದು ಉತ್ತಮ ಸಮಯ. ಯಾವುದೇ ಕೆಲಸಕ್ಕೆ ಮೊದಲು ಕುಟುಂಬದವರ ಅಭಿಪ್ರಾಯಕ್ಕೆ ಮನ್ನಣೆ ನೀಡಿ. ಧಾರ್ಮಿಕ ಕಾರ್ಯಗಳನ್ನು ನೆರವೇರಿಸುವಿರಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಎಚ್ಚರ.

ಕುಂಭ: ಮನಸ್ಸಿನ ಸಂತೋಷಕ್ಕೆ ಕೊರತೆಯಿರದು. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗಕ್ಕೆ ಕರೆಬರಲಿದೆ. ಇಷ್ಟ ಮಿತ್ರರ ಭೇಟಿ ಮನಸ್ಸಿನ ಸಂತಸ ಇಮ್ಮಡಿಗೊಳಿಸಲಿದೆ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಬೀಳಲಿದೆ. ದೇಹಾರೋಗ್ಯದ ಕಡೆಗೆ ಎಚ್ಚರವಾಗಿರಿ.

ಮೀನ: ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ನಿರುದ್ಯೋಗಿಗಳು ಉದ್ಯೋಗ ಬೇಟೆಗೆ ದೂರ ಸಂಚಾರ ಮಾಡಬೇಕಾಗುತ್ತದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಅರೆಕಾಲಿಕ ವೃತ್ತಿಯವರಿಗೆ ಬಡ್ತಿ ಸಿಗಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಕಷ್ಟಗಳು ದೂರವಾಗಲು ಮಲಗುವ ಮುಂಚೆ ಈ ಮಂತ್ರ ಪಠಿಸಿ